Homeಕರ್ನಾಟಕದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

ದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

- Advertisement -
- Advertisement -

ಸಹಾಯಹಸ್ತ ಕೋರಿ ಬಂದ ಮಹಿಳೆಯ ಮೇಲೆ ಸಚಿವ ವಿ.ಸೋಮಣ್ಣ ಹಲ್ಲೆ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಘಟನೆಯ ಬಳಿಕ ಹಲ್ಲೆಗೊಳಗಾದ ಮಹಿಳೆಯಿಂದ ಸ್ಪಷ್ಟನೆಯನ್ನೂ ಕೊಡಿಸಲಾಗಿದೆ. “ನನ್ನ ಮೇಲೆ ಸೋಮಣ್ಣ ಹಲ್ಲೆ ಮಾಡಿಲ್ಲ” ಎಂಬ ಹೇಳಿಕೆಯನ್ನು ಸಂತ್ರಸ್ತ ಅಸಹಾಯಕ ಮಹಿಳೆಯ ಮೂಲಕ ಕೊಡಿಸಲಾಗಿದೆ. ಬಡ ಕುಟುಂಬವನ್ನು ಬೆದರಿಸಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ದಾಖಲಾಗಿರುವ ವಿಡಿಯೊ ವೈರಲ್ ಆಗುತ್ತಿದ್ದು, ಸೋಮಣ್ಣನವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಟ್ಯಾಗ್ ಮಾಡಿದ್ದಾರೆ.

“ಬಿಜೆಪಿಯವರು ಬಾಯಲ್ಲಿ ಮಾತ್ರ ಮಾತೃ ದೇವೋಭವ ಎನ್ನುತ್ತಾರೆ. ಮಹಿಳೆಯ ಮೇಲೆ ಕೈ ಮಾಡಿದ ಸಚಿವ ಸೋಮಣ್ಣರನ್ನು ಈ ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು” ಎಂಬ ಒತ್ತಾಯಗಳನ್ನು ಜನರು ಮಾಡುತ್ತಿದ್ದಾರೆ.

“ಬಡವರಿಗೆ ಹೀಗಾಗುತ್ತದೆ. ನೀವು ಯಾವುದಕ್ಕೂ ಸಿದ್ಧರಾಗಿರಬೇಕು. ಮೊದಲನೆಯದಾಗಿ ಅವರು ನಿಮ್ಮನ್ನು ಗೌರವಿಸದೆ ಕನ್ನೆಗೆ ಭಾರಿಸುತ್ತಾರೆ. ನಂತರ ಸುಳ್ಳು ಹೇಳಿಕೆ ಕೊಡಿಸುತ್ತಾರೆ” ಎಂದು ಅಕ್ಷಯ್ ಕೆ.ಜೈನ್ ಎಂಬವರು ಟ್ವೀಟ್ ಮಾಡಿದ್ದಾರೆ.

“ನೆರವು ಕೇಳಿ ಬಂದ ಅಸಹಾಯಕ ಮಹಿಳೆಗೆ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಸಾಕ್ಷಿಯಾಗಿ ವಿಡಿಯೋ ದಾಖಲೆಯಿದೆ. ಆದರೆ ಅಸಹಾಯಕ ಸಂತ್ರಸ್ತರಿಗೆ ಬೆದರಿಕೆ ಹಾಕಿ ವ್ಯತಿರಿಕ್ತವಾದ ಹೇಳಿಕೆ ಕೊಡಿಸಿದ್ದಾರೆ. ಸ್ಥಳೀಯ ಸಂಘಟನೆಗಳು ಮುಂದೆ ಬಂದು ಸಂತ್ರಸ್ತರಿಗೆ ಸಾಂತ್ವನ, ಧೈರ್ಯ ತುಂಬಿದರೆ ಸೋಮಣ್ಣನವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬಹುದು ಮತ್ತು ಶೋಷಿತರಿಗೆ ನ್ಯಾಯ ಒದಗಿಸಬಹುದು. ಆದರೆ ಪರಿಸ್ಥಿತಿ ಸರಳವಾಗಿಲ್ಲವಲ್ಲ? ಏನು ಮಾಡಬಹುದು?” ಎಂದು ಚಿಂತಕರಾದ ಶ್ರೀಪಾದ ಭಟ್‌ ಪೋಸ್ಟ್‌ ಮಾಡಿದ್ದಾರೆ.

ತನ್ನ ಕಷ್ಟ ಹೇಳಲು ಬಂದ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ. ಕೂಡಲೇ ಸೋಮಣ್ಣ ರಾಜೀನಾಮೆ ನೀಡಬೇಕು. ಮಹಿಳಾ ವಿರೋಧಿ ಶಾಸಕನನ್ನು ಬಿಜೆಪಿ ಅಮಾನತು ಮಾಡುವುದೇ? ಬೊಮ್ಮಾಯಿಯವರೇ ಸೋಮಣ್ಣರನ್ನು ಸಂಪುಟದಿಂದ ಕೈಬಿಡುವಿರೇ?” ಎಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದು ಕಾಂಗ್ರೆಸ್ ನಾಯಕರಾದ ದಿನೇಶ್‌ ಗೂಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

“ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಕೇಳಿದ್ದಾರೆ.

“ಸ್ತ್ರೀ ಉದ್ಧಾರಕರಂತೆ ಮಾತಾಡುವ ಬಿಜೆಪಿಗರೇ, ಇದೆನಾ ನಿಮ್ಮ ಸಂಸ್ಕೃತಿ? ನಿವೇಶನ ಹಂಚಿಕೆಯಲ್ಲಾದ ಅನ್ಯಾಯದ ಬಗ್ಗೆ ಅಹವಾಲು ಸಲ್ಲಿಸಲು ಬಂದ ಹೆಣ್ಣುಮಗಳ ಜೊತೆ ಸಚಿವ ಸೋಮಣ್ಣ ನಡೆದುಕೊಂಡ ರೀತಿ ಇದು. ಮಹಿಳೆಗೆ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ ಈ ಕ್ಷಣವೇ ರಾಜೀನಾಮೆ ನೀಡಬೇಕು. ಅವರ ಮೇಲೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡರಾದ ದಿವ್ಯಪ್ರಭಾ ಗೌಡ ಆಗ್ರಹಿಸಿದ್ದಾರೆ.

“ಸಂತ್ರಸ್ತೆಯೊಬ್ಬರ ನೋವನ್ನು ಕೇಳಿಸಿಕೊಳ್ಳುವ ವ್ಯವಧಾನವೂ ನಿಮಗೆ ಇಲ್ಲವಾಯಿತೇ ಸಚಿವರೇ? ಜನಪ್ರತಿನಿಧಿಯಾಗಿ ನಿಮ್ಮದು ಇದೆಂಥ ನಡವಳಿಕೆ? ಜನರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸುವ ಯೋಗ್ಯತೆ ಇಲ್ಲದ ಮಹಿಳಾ ವಿರೋಧಿ ಬಿಜೆಪಿ ಸರಕಾರದಿಂದ ಎಂದಿಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

ಇದೇನಿದು ಗುಂಡಾರಾಜ್ಯ. ಅಂದು ಅರವಿಂದ ಲಿಂಬಾವಳಿ. ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ ಎಲ್ಲಿದೆ ಪ್ರಜಾಪ್ರಭುತ್ವ?” ಎಂದು ಚೇತನ್ ಸೂರ್ಯ ಎಸ್. ಎಂಬವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....