Homeಕರ್ನಾಟಕದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

ದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

- Advertisement -
- Advertisement -

ಸಹಾಯಹಸ್ತ ಕೋರಿ ಬಂದ ಮಹಿಳೆಯ ಮೇಲೆ ಸಚಿವ ವಿ.ಸೋಮಣ್ಣ ಹಲ್ಲೆ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಘಟನೆಯ ಬಳಿಕ ಹಲ್ಲೆಗೊಳಗಾದ ಮಹಿಳೆಯಿಂದ ಸ್ಪಷ್ಟನೆಯನ್ನೂ ಕೊಡಿಸಲಾಗಿದೆ. “ನನ್ನ ಮೇಲೆ ಸೋಮಣ್ಣ ಹಲ್ಲೆ ಮಾಡಿಲ್ಲ” ಎಂಬ ಹೇಳಿಕೆಯನ್ನು ಸಂತ್ರಸ್ತ ಅಸಹಾಯಕ ಮಹಿಳೆಯ ಮೂಲಕ ಕೊಡಿಸಲಾಗಿದೆ. ಬಡ ಕುಟುಂಬವನ್ನು ಬೆದರಿಸಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ದಾಖಲಾಗಿರುವ ವಿಡಿಯೊ ವೈರಲ್ ಆಗುತ್ತಿದ್ದು, ಸೋಮಣ್ಣನವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಟ್ಯಾಗ್ ಮಾಡಿದ್ದಾರೆ.

“ಬಿಜೆಪಿಯವರು ಬಾಯಲ್ಲಿ ಮಾತ್ರ ಮಾತೃ ದೇವೋಭವ ಎನ್ನುತ್ತಾರೆ. ಮಹಿಳೆಯ ಮೇಲೆ ಕೈ ಮಾಡಿದ ಸಚಿವ ಸೋಮಣ್ಣರನ್ನು ಈ ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು” ಎಂಬ ಒತ್ತಾಯಗಳನ್ನು ಜನರು ಮಾಡುತ್ತಿದ್ದಾರೆ.

“ಬಡವರಿಗೆ ಹೀಗಾಗುತ್ತದೆ. ನೀವು ಯಾವುದಕ್ಕೂ ಸಿದ್ಧರಾಗಿರಬೇಕು. ಮೊದಲನೆಯದಾಗಿ ಅವರು ನಿಮ್ಮನ್ನು ಗೌರವಿಸದೆ ಕನ್ನೆಗೆ ಭಾರಿಸುತ್ತಾರೆ. ನಂತರ ಸುಳ್ಳು ಹೇಳಿಕೆ ಕೊಡಿಸುತ್ತಾರೆ” ಎಂದು ಅಕ್ಷಯ್ ಕೆ.ಜೈನ್ ಎಂಬವರು ಟ್ವೀಟ್ ಮಾಡಿದ್ದಾರೆ.

“ನೆರವು ಕೇಳಿ ಬಂದ ಅಸಹಾಯಕ ಮಹಿಳೆಗೆ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಸಾಕ್ಷಿಯಾಗಿ ವಿಡಿಯೋ ದಾಖಲೆಯಿದೆ. ಆದರೆ ಅಸಹಾಯಕ ಸಂತ್ರಸ್ತರಿಗೆ ಬೆದರಿಕೆ ಹಾಕಿ ವ್ಯತಿರಿಕ್ತವಾದ ಹೇಳಿಕೆ ಕೊಡಿಸಿದ್ದಾರೆ. ಸ್ಥಳೀಯ ಸಂಘಟನೆಗಳು ಮುಂದೆ ಬಂದು ಸಂತ್ರಸ್ತರಿಗೆ ಸಾಂತ್ವನ, ಧೈರ್ಯ ತುಂಬಿದರೆ ಸೋಮಣ್ಣನವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬಹುದು ಮತ್ತು ಶೋಷಿತರಿಗೆ ನ್ಯಾಯ ಒದಗಿಸಬಹುದು. ಆದರೆ ಪರಿಸ್ಥಿತಿ ಸರಳವಾಗಿಲ್ಲವಲ್ಲ? ಏನು ಮಾಡಬಹುದು?” ಎಂದು ಚಿಂತಕರಾದ ಶ್ರೀಪಾದ ಭಟ್‌ ಪೋಸ್ಟ್‌ ಮಾಡಿದ್ದಾರೆ.

ತನ್ನ ಕಷ್ಟ ಹೇಳಲು ಬಂದ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ. ಕೂಡಲೇ ಸೋಮಣ್ಣ ರಾಜೀನಾಮೆ ನೀಡಬೇಕು. ಮಹಿಳಾ ವಿರೋಧಿ ಶಾಸಕನನ್ನು ಬಿಜೆಪಿ ಅಮಾನತು ಮಾಡುವುದೇ? ಬೊಮ್ಮಾಯಿಯವರೇ ಸೋಮಣ್ಣರನ್ನು ಸಂಪುಟದಿಂದ ಕೈಬಿಡುವಿರೇ?” ಎಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದು ಕಾಂಗ್ರೆಸ್ ನಾಯಕರಾದ ದಿನೇಶ್‌ ಗೂಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

“ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಕೇಳಿದ್ದಾರೆ.

“ಸ್ತ್ರೀ ಉದ್ಧಾರಕರಂತೆ ಮಾತಾಡುವ ಬಿಜೆಪಿಗರೇ, ಇದೆನಾ ನಿಮ್ಮ ಸಂಸ್ಕೃತಿ? ನಿವೇಶನ ಹಂಚಿಕೆಯಲ್ಲಾದ ಅನ್ಯಾಯದ ಬಗ್ಗೆ ಅಹವಾಲು ಸಲ್ಲಿಸಲು ಬಂದ ಹೆಣ್ಣುಮಗಳ ಜೊತೆ ಸಚಿವ ಸೋಮಣ್ಣ ನಡೆದುಕೊಂಡ ರೀತಿ ಇದು. ಮಹಿಳೆಗೆ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ ಈ ಕ್ಷಣವೇ ರಾಜೀನಾಮೆ ನೀಡಬೇಕು. ಅವರ ಮೇಲೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡರಾದ ದಿವ್ಯಪ್ರಭಾ ಗೌಡ ಆಗ್ರಹಿಸಿದ್ದಾರೆ.

“ಸಂತ್ರಸ್ತೆಯೊಬ್ಬರ ನೋವನ್ನು ಕೇಳಿಸಿಕೊಳ್ಳುವ ವ್ಯವಧಾನವೂ ನಿಮಗೆ ಇಲ್ಲವಾಯಿತೇ ಸಚಿವರೇ? ಜನಪ್ರತಿನಿಧಿಯಾಗಿ ನಿಮ್ಮದು ಇದೆಂಥ ನಡವಳಿಕೆ? ಜನರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸುವ ಯೋಗ್ಯತೆ ಇಲ್ಲದ ಮಹಿಳಾ ವಿರೋಧಿ ಬಿಜೆಪಿ ಸರಕಾರದಿಂದ ಎಂದಿಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

ಇದೇನಿದು ಗುಂಡಾರಾಜ್ಯ. ಅಂದು ಅರವಿಂದ ಲಿಂಬಾವಳಿ. ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ ಎಲ್ಲಿದೆ ಪ್ರಜಾಪ್ರಭುತ್ವ?” ಎಂದು ಚೇತನ್ ಸೂರ್ಯ ಎಸ್. ಎಂಬವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...