Homeಕರ್ನಾಟಕದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

ದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

- Advertisement -
- Advertisement -

ಸಹಾಯಹಸ್ತ ಕೋರಿ ಬಂದ ಮಹಿಳೆಯ ಮೇಲೆ ಸಚಿವ ವಿ.ಸೋಮಣ್ಣ ಹಲ್ಲೆ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಘಟನೆಯ ಬಳಿಕ ಹಲ್ಲೆಗೊಳಗಾದ ಮಹಿಳೆಯಿಂದ ಸ್ಪಷ್ಟನೆಯನ್ನೂ ಕೊಡಿಸಲಾಗಿದೆ. “ನನ್ನ ಮೇಲೆ ಸೋಮಣ್ಣ ಹಲ್ಲೆ ಮಾಡಿಲ್ಲ” ಎಂಬ ಹೇಳಿಕೆಯನ್ನು ಸಂತ್ರಸ್ತ ಅಸಹಾಯಕ ಮಹಿಳೆಯ ಮೂಲಕ ಕೊಡಿಸಲಾಗಿದೆ. ಬಡ ಕುಟುಂಬವನ್ನು ಬೆದರಿಸಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ದಾಖಲಾಗಿರುವ ವಿಡಿಯೊ ವೈರಲ್ ಆಗುತ್ತಿದ್ದು, ಸೋಮಣ್ಣನವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಟ್ಯಾಗ್ ಮಾಡಿದ್ದಾರೆ.

“ಬಿಜೆಪಿಯವರು ಬಾಯಲ್ಲಿ ಮಾತ್ರ ಮಾತೃ ದೇವೋಭವ ಎನ್ನುತ್ತಾರೆ. ಮಹಿಳೆಯ ಮೇಲೆ ಕೈ ಮಾಡಿದ ಸಚಿವ ಸೋಮಣ್ಣರನ್ನು ಈ ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು” ಎಂಬ ಒತ್ತಾಯಗಳನ್ನು ಜನರು ಮಾಡುತ್ತಿದ್ದಾರೆ.

“ಬಡವರಿಗೆ ಹೀಗಾಗುತ್ತದೆ. ನೀವು ಯಾವುದಕ್ಕೂ ಸಿದ್ಧರಾಗಿರಬೇಕು. ಮೊದಲನೆಯದಾಗಿ ಅವರು ನಿಮ್ಮನ್ನು ಗೌರವಿಸದೆ ಕನ್ನೆಗೆ ಭಾರಿಸುತ್ತಾರೆ. ನಂತರ ಸುಳ್ಳು ಹೇಳಿಕೆ ಕೊಡಿಸುತ್ತಾರೆ” ಎಂದು ಅಕ್ಷಯ್ ಕೆ.ಜೈನ್ ಎಂಬವರು ಟ್ವೀಟ್ ಮಾಡಿದ್ದಾರೆ.

“ನೆರವು ಕೇಳಿ ಬಂದ ಅಸಹಾಯಕ ಮಹಿಳೆಗೆ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಸಾಕ್ಷಿಯಾಗಿ ವಿಡಿಯೋ ದಾಖಲೆಯಿದೆ. ಆದರೆ ಅಸಹಾಯಕ ಸಂತ್ರಸ್ತರಿಗೆ ಬೆದರಿಕೆ ಹಾಕಿ ವ್ಯತಿರಿಕ್ತವಾದ ಹೇಳಿಕೆ ಕೊಡಿಸಿದ್ದಾರೆ. ಸ್ಥಳೀಯ ಸಂಘಟನೆಗಳು ಮುಂದೆ ಬಂದು ಸಂತ್ರಸ್ತರಿಗೆ ಸಾಂತ್ವನ, ಧೈರ್ಯ ತುಂಬಿದರೆ ಸೋಮಣ್ಣನವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬಹುದು ಮತ್ತು ಶೋಷಿತರಿಗೆ ನ್ಯಾಯ ಒದಗಿಸಬಹುದು. ಆದರೆ ಪರಿಸ್ಥಿತಿ ಸರಳವಾಗಿಲ್ಲವಲ್ಲ? ಏನು ಮಾಡಬಹುದು?” ಎಂದು ಚಿಂತಕರಾದ ಶ್ರೀಪಾದ ಭಟ್‌ ಪೋಸ್ಟ್‌ ಮಾಡಿದ್ದಾರೆ.

ತನ್ನ ಕಷ್ಟ ಹೇಳಲು ಬಂದ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ. ಕೂಡಲೇ ಸೋಮಣ್ಣ ರಾಜೀನಾಮೆ ನೀಡಬೇಕು. ಮಹಿಳಾ ವಿರೋಧಿ ಶಾಸಕನನ್ನು ಬಿಜೆಪಿ ಅಮಾನತು ಮಾಡುವುದೇ? ಬೊಮ್ಮಾಯಿಯವರೇ ಸೋಮಣ್ಣರನ್ನು ಸಂಪುಟದಿಂದ ಕೈಬಿಡುವಿರೇ?” ಎಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದು ಕಾಂಗ್ರೆಸ್ ನಾಯಕರಾದ ದಿನೇಶ್‌ ಗೂಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

“ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಕೇಳಿದ್ದಾರೆ.

“ಸ್ತ್ರೀ ಉದ್ಧಾರಕರಂತೆ ಮಾತಾಡುವ ಬಿಜೆಪಿಗರೇ, ಇದೆನಾ ನಿಮ್ಮ ಸಂಸ್ಕೃತಿ? ನಿವೇಶನ ಹಂಚಿಕೆಯಲ್ಲಾದ ಅನ್ಯಾಯದ ಬಗ್ಗೆ ಅಹವಾಲು ಸಲ್ಲಿಸಲು ಬಂದ ಹೆಣ್ಣುಮಗಳ ಜೊತೆ ಸಚಿವ ಸೋಮಣ್ಣ ನಡೆದುಕೊಂಡ ರೀತಿ ಇದು. ಮಹಿಳೆಗೆ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ ಈ ಕ್ಷಣವೇ ರಾಜೀನಾಮೆ ನೀಡಬೇಕು. ಅವರ ಮೇಲೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡರಾದ ದಿವ್ಯಪ್ರಭಾ ಗೌಡ ಆಗ್ರಹಿಸಿದ್ದಾರೆ.

“ಸಂತ್ರಸ್ತೆಯೊಬ್ಬರ ನೋವನ್ನು ಕೇಳಿಸಿಕೊಳ್ಳುವ ವ್ಯವಧಾನವೂ ನಿಮಗೆ ಇಲ್ಲವಾಯಿತೇ ಸಚಿವರೇ? ಜನಪ್ರತಿನಿಧಿಯಾಗಿ ನಿಮ್ಮದು ಇದೆಂಥ ನಡವಳಿಕೆ? ಜನರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸುವ ಯೋಗ್ಯತೆ ಇಲ್ಲದ ಮಹಿಳಾ ವಿರೋಧಿ ಬಿಜೆಪಿ ಸರಕಾರದಿಂದ ಎಂದಿಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

ಇದೇನಿದು ಗುಂಡಾರಾಜ್ಯ. ಅಂದು ಅರವಿಂದ ಲಿಂಬಾವಳಿ. ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ ಎಲ್ಲಿದೆ ಪ್ರಜಾಪ್ರಭುತ್ವ?” ಎಂದು ಚೇತನ್ ಸೂರ್ಯ ಎಸ್. ಎಂಬವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...