Homeಕರ್ನಾಟಕದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

ದಲಿತ ಮಹಿಳೆ ಮೇಲೆ ಹಲ್ಲೆ: ಸಚಿವ ಸೋಮಣ್ಣ ವಿರುದ್ಧ ವ್ಯಾಪಕ ಜನಾಕ್ರೋಶ

- Advertisement -
- Advertisement -

ಸಹಾಯಹಸ್ತ ಕೋರಿ ಬಂದ ಮಹಿಳೆಯ ಮೇಲೆ ಸಚಿವ ವಿ.ಸೋಮಣ್ಣ ಹಲ್ಲೆ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದಿದ್ದು, ವ್ಯಾಪಕ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಘಟನೆಯ ಬಳಿಕ ಹಲ್ಲೆಗೊಳಗಾದ ಮಹಿಳೆಯಿಂದ ಸ್ಪಷ್ಟನೆಯನ್ನೂ ಕೊಡಿಸಲಾಗಿದೆ. “ನನ್ನ ಮೇಲೆ ಸೋಮಣ್ಣ ಹಲ್ಲೆ ಮಾಡಿಲ್ಲ” ಎಂಬ ಹೇಳಿಕೆಯನ್ನು ಸಂತ್ರಸ್ತ ಅಸಹಾಯಕ ಮಹಿಳೆಯ ಮೂಲಕ ಕೊಡಿಸಲಾಗಿದೆ. ಬಡ ಕುಟುಂಬವನ್ನು ಬೆದರಿಸಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಹಲ್ಲೆ ಮಾಡಿರುವುದು ಸ್ಪಷ್ಟವಾಗಿ ದಾಖಲಾಗಿರುವ ವಿಡಿಯೊ ವೈರಲ್ ಆಗುತ್ತಿದ್ದು, ಸೋಮಣ್ಣನವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪತ್ರಕರ್ತ ಮೊಹಮ್ಮದ್ ಜುಬೈರ್‌ ಟ್ವೀಟ್ ಮಾಡಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಟ್ಯಾಗ್ ಮಾಡಿದ್ದಾರೆ.

“ಬಿಜೆಪಿಯವರು ಬಾಯಲ್ಲಿ ಮಾತ್ರ ಮಾತೃ ದೇವೋಭವ ಎನ್ನುತ್ತಾರೆ. ಮಹಿಳೆಯ ಮೇಲೆ ಕೈ ಮಾಡಿದ ಸಚಿವ ಸೋಮಣ್ಣರನ್ನು ಈ ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು” ಎಂಬ ಒತ್ತಾಯಗಳನ್ನು ಜನರು ಮಾಡುತ್ತಿದ್ದಾರೆ.

“ಬಡವರಿಗೆ ಹೀಗಾಗುತ್ತದೆ. ನೀವು ಯಾವುದಕ್ಕೂ ಸಿದ್ಧರಾಗಿರಬೇಕು. ಮೊದಲನೆಯದಾಗಿ ಅವರು ನಿಮ್ಮನ್ನು ಗೌರವಿಸದೆ ಕನ್ನೆಗೆ ಭಾರಿಸುತ್ತಾರೆ. ನಂತರ ಸುಳ್ಳು ಹೇಳಿಕೆ ಕೊಡಿಸುತ್ತಾರೆ” ಎಂದು ಅಕ್ಷಯ್ ಕೆ.ಜೈನ್ ಎಂಬವರು ಟ್ವೀಟ್ ಮಾಡಿದ್ದಾರೆ.

“ನೆರವು ಕೇಳಿ ಬಂದ ಅಸಹಾಯಕ ಮಹಿಳೆಗೆ ಸಚಿವ ಸೋಮಣ್ಣ ಕೆನ್ನೆಗೆ ಬಾರಿಸಿ ಹಲ್ಲೆ ನಡೆಸಿದ ಸಾಕ್ಷಿಯಾಗಿ ವಿಡಿಯೋ ದಾಖಲೆಯಿದೆ. ಆದರೆ ಅಸಹಾಯಕ ಸಂತ್ರಸ್ತರಿಗೆ ಬೆದರಿಕೆ ಹಾಕಿ ವ್ಯತಿರಿಕ್ತವಾದ ಹೇಳಿಕೆ ಕೊಡಿಸಿದ್ದಾರೆ. ಸ್ಥಳೀಯ ಸಂಘಟನೆಗಳು ಮುಂದೆ ಬಂದು ಸಂತ್ರಸ್ತರಿಗೆ ಸಾಂತ್ವನ, ಧೈರ್ಯ ತುಂಬಿದರೆ ಸೋಮಣ್ಣನವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬಹುದು ಮತ್ತು ಶೋಷಿತರಿಗೆ ನ್ಯಾಯ ಒದಗಿಸಬಹುದು. ಆದರೆ ಪರಿಸ್ಥಿತಿ ಸರಳವಾಗಿಲ್ಲವಲ್ಲ? ಏನು ಮಾಡಬಹುದು?” ಎಂದು ಚಿಂತಕರಾದ ಶ್ರೀಪಾದ ಭಟ್‌ ಪೋಸ್ಟ್‌ ಮಾಡಿದ್ದಾರೆ.

ತನ್ನ ಕಷ್ಟ ಹೇಳಲು ಬಂದ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ. ಕೂಡಲೇ ಸೋಮಣ್ಣ ರಾಜೀನಾಮೆ ನೀಡಬೇಕು. ಮಹಿಳಾ ವಿರೋಧಿ ಶಾಸಕನನ್ನು ಬಿಜೆಪಿ ಅಮಾನತು ಮಾಡುವುದೇ? ಬೊಮ್ಮಾಯಿಯವರೇ ಸೋಮಣ್ಣರನ್ನು ಸಂಪುಟದಿಂದ ಕೈಬಿಡುವಿರೇ?” ಎಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

“ಸ್ತ್ರೀ ನಿಂದನೆ, ಸ್ತ್ರೀ ಪೀಡನೆ, ಸ್ತ್ರೀ ಶೋಷಣೆ ಬಿಜೆಪಿಯವರ ಹುಟ್ಟುಗುಣ. ಮಹಿಳೆಯ ಕೆನ್ನೆಗೆ ಹೊಡೆಯುವ ಮೂಲಕ ಸ್ತ್ರೀಯರ ಬಗ್ಗೆ ಬಿಜೆಪಿಯವರ ಮನಸ್ಥಿತಿಯನ್ನು ಸೋಮಣ್ಣ ಅನಾವರಣ ಮಾಡಿದ್ದಾರೆ. ಸಾರ್ವಜನಿಕವಾಗಿಯೇ ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಸ್ತ್ರೀಯರ ಬಗ್ಗೆ ಗೌರವವಿಲ್ಲದ ವ್ಯಕ್ತಿಗಳಿಂದ ಮಾತ್ರ ಇಂತಹ ವರ್ತನೆ ತೋರಿಸಲು ಸಾಧ್ಯ” ಎಂದು ಕಾಂಗ್ರೆಸ್ ನಾಯಕರಾದ ದಿನೇಶ್‌ ಗೂಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

“ಗುಂಡ್ಲುಪೇಟೆಯ ಹಂಗಳದಲ್ಲಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರ ಮೇಲೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಸೋಮಣ್ಣ ಒಬ್ಬ ಹಿರಿಯ ಸಚಿವ. ನಾಲ್ಕು ಜನರಿಗೆ ಬುದ್ಧಿ ಹೇಳುವ ಸ್ಥಾನದಲ್ಲಿದ್ದು ಈ ರೀತಿ ವರ್ತಿಸುವುದು ಶೋಭೆಯಲ್ಲ. ಸ್ತ್ರೀಯರೊಂದಿಗೆ ಸಂಸ್ಕಾರಯುತವಾಗಿ ವರ್ತಿಸಬೇಕು ಅನ್ನೋ ಕನಿಷ್ಠ ಜ್ಞಾನವೂ ಸೋಮಣ್ಣರಗಿಲ್ಲವೇ?” ಎಂದು ಕೇಳಿದ್ದಾರೆ.

“ಸ್ತ್ರೀ ಉದ್ಧಾರಕರಂತೆ ಮಾತಾಡುವ ಬಿಜೆಪಿಗರೇ, ಇದೆನಾ ನಿಮ್ಮ ಸಂಸ್ಕೃತಿ? ನಿವೇಶನ ಹಂಚಿಕೆಯಲ್ಲಾದ ಅನ್ಯಾಯದ ಬಗ್ಗೆ ಅಹವಾಲು ಸಲ್ಲಿಸಲು ಬಂದ ಹೆಣ್ಣುಮಗಳ ಜೊತೆ ಸಚಿವ ಸೋಮಣ್ಣ ನಡೆದುಕೊಂಡ ರೀತಿ ಇದು. ಮಹಿಳೆಗೆ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ ಈ ಕ್ಷಣವೇ ರಾಜೀನಾಮೆ ನೀಡಬೇಕು. ಅವರ ಮೇಲೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡರಾದ ದಿವ್ಯಪ್ರಭಾ ಗೌಡ ಆಗ್ರಹಿಸಿದ್ದಾರೆ.

“ಸಂತ್ರಸ್ತೆಯೊಬ್ಬರ ನೋವನ್ನು ಕೇಳಿಸಿಕೊಳ್ಳುವ ವ್ಯವಧಾನವೂ ನಿಮಗೆ ಇಲ್ಲವಾಯಿತೇ ಸಚಿವರೇ? ಜನಪ್ರತಿನಿಧಿಯಾಗಿ ನಿಮ್ಮದು ಇದೆಂಥ ನಡವಳಿಕೆ? ಜನರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸುವ ಯೋಗ್ಯತೆ ಇಲ್ಲದ ಮಹಿಳಾ ವಿರೋಧಿ ಬಿಜೆಪಿ ಸರಕಾರದಿಂದ ಎಂದಿಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ” ಎಂದಿದ್ದಾರೆ.

ಇದೇನಿದು ಗುಂಡಾರಾಜ್ಯ. ಅಂದು ಅರವಿಂದ ಲಿಂಬಾವಳಿ. ಇಂದು ವಿ.ಸೋಮಣ್ಣ. ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡುವ ಮನಸ್ಥಿತಿ ಇದೇ ಅಂದ್ರೆ ಎಲ್ಲಿದೆ ಪ್ರಜಾಪ್ರಭುತ್ವ?” ಎಂದು ಚೇತನ್ ಸೂರ್ಯ ಎಸ್. ಎಂಬವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...