Homeಮುಖಪುಟಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, "ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ" ಎಂದು ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಭೂ ವಿವಾದದ ಕಾರಣಕ್ಕೆ ಉತ್ತರ ಪ್ರದೇಶದ ಮಾಜಿ ಶಾಸಕರಾದ ನಿರ್ವೇಂದ್ರ ಕುಮಾರ್ ಮಿಶ್ರಾ ಅವರ ಮೇಲೆ ಗುಂಪು ಹಲ್ಲೆ ನಡೆಸಿದ್ದು ಅವರು ಭಾನುವಾರ ನಿಧನರಾಗಿದ್ದಾರೆ. ಇದಕ್ಕೆ ಪೊಲೀಸರೂ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಹಳೆಯ ಭೂ ವಿವಾದದ ಬಗ್ಗೆ ನಡೆದ ಜಗಳದಲ್ಲಿ ಹಲ್ಲೆ ಮಾಡಲಾಗಿದ್ದು ಶಾಸಕರು ಮರಣ ಹೊಂದಿದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ.

ನಿರ್ವೇಂದ್ರ ಕುಮಾರ್ ಮಿಶ್ರಾ 1993 ರಲ್ಲಿ ಸಮಾಜವಾದಿ ಪಕ್ಷದಿಂದ ಗೆಲ್ಲುವ ಮೊದಲು 1989 ಮತ್ತು 1991 ರಲ್ಲಿ ಎರಡು ಬಾರಿ ಸ್ವತಂತ್ರರಾಗಿ ಜಿಲ್ಲೆಯ ನಿಘಾಸನ್ ಸ್ಥಾನದಿಂದ ಶಾಸಕರಾಗಿದ್ದರು.

ಪಲ್ಲಿಯಾ ಗ್ರಾಮದ ನಿವಾಸಿಗಳಾದ ಸಮೀರ್ ಗುಪ್ತಾ ಮತ್ತು ರಾಧೇಶ್ಯಾಂ ಗುಪ್ತಾ ಅವರೊಂದಿಗೆ ಮಿಶ್ರಾ ವಿವಾದಿತ ಭೂಮಿಯ ಬಗ್ಗೆ ವಾದ ನಡೆಸಿದ್ದರು. ವಿವಾದಿತ ಭೂಮಿ ಸಮೀರ್ ಹೆಸರಿನಲ್ಲಿತ್ತು. ಹಾಗಾಗಿ ಮಿಶ್ರಾ ಈ ಸ್ವಾಧೀನವನ್ನು ವಿರೋಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸೆಕ್ಷನ್ 107/116 ರ ಅಡಿಯಲ್ಲಿ ಮಿಶ್ರಾ ಮತ್ತು ಅವರ ಮಗನ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು.

‘ಮೇಲು ನೋಟಕ್ಕೆ, ನಿರ್ವೇಂದ್ರ ಕುಮಾರ್ ಮಿಶ್ರಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಊಹಿಸಬಹುದು. ಏಕೆಂದರೆ ಅವರ ದೇಹದಲ್ಲಿ ಯಾವುದೇ ಗಾಯದ ಲಕ್ಷಣಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ” ಎಂದು ಪೊಲೀಸರು ಹೇಳಿರುವುದಾಗಿ ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

“ಎರಡೂ ಕಡೆಯವರ ನಡುವೆ ವಿವಾದ ಆರಂಭವಾಗಿತ್ತು. ನಂತರ ಇದು ಜಗಳಕ್ಕೆ ತಿರುಗಿತು. ಆ ಸಂದರ್ಭದಲ್ಲಿ ಮಿಶ್ರಾ ನೆಲಕ್ಕೆ ಕುಸಿದು ಬಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸತ್ತರು ಎಂದು ಘೋಷಿಸಲಾಯಿತು. ಅವರ ಮಗ ಸಂಜೀವ್ ಸ್ಥಿತಿ ಕೂಡಾ ಗಂಭೀರವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅವರು ನನಗೆ ಹೊಡೆದರು. ಅವರು ನಮ್ಮ ತಂದೆಯನ್ನು ಹೊಡೆದು ಸಾಯಿಸಿದರು. ನನ್ನ ತಂದೆಯನ್ನು ಕೊಲ್ಲಲಾಯಿತು” ಎಂದು ಮಿಶ್ರಾ ಅವರ ಮಗ ಸ್ಥಳೀಯ ವರದಿಗಾರರೊಂದಿಗೆ ಹೇಳಿದರು.

ಈ ಹಲ್ಲೆಯಲ್ಲಿ ಪೊಲೀಸರ ಪಾತ್ರವನ್ನೂ ಪ್ರಶ್ನಿಸಿದ ಅವರು, ತಂದೆಯ ಮೇಲೆ ಹಲ್ಲೆ ನಡೆಸಿದವರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ ಸಂಜೀವ್ ಆರೋಪಿಸಿದ್ದಾರೆ. ಮಿಶ್ರಾ ಅವರ ಮರಣದ ನಂತರ, ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿ, ಅವರ ಮೃತ ದೇಹವನ್ನು ತ್ರಿಕೋಲಿಯಾ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಕೊಲೆಗಾರರೊಂದಿಗೆ ಯುಪಿ ಪೊಲೀಸರು ಶಾಮೀಲಾಗಿದ್ದಾರೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ನನ್ನ ತಂದೆ ನೆಲಕ್ಕೆ ಕುಸಿದ ನಂತರ, ಸ್ಥಳೀಯರು ಗುಂಪು ಹಲ್ಲೆ ಮಾಡಿದ ಕೆಲವು ಆರೋಪಿಗಳನ್ನು ಹಿಮ್ಮೆಟ್ಟಿಸಿ ಹಿಡಿದರು. ಆದರೆ ಪೊಲೀಸರು ಬಂದು ಅವರಿಗೆ ಮುಕ್ತವಾಗಿ ಹೋಗಲು ಅವಕಾಶ ಮಾಡಿಕೊಟ್ಟರು ಎಂದು ಮಿಶ್ರಾ ಅವರ ಮಗ ಸಂಜೀವ್ ಆರೋಪಿಸಿದ್ದಾರೆ.

ತ್ರಿಕೋಲಿಯ ಪಧುವಾ ಬಸ್ ನಿಲ್ದಾಣದ ಬಳಿ 40ಕ್ಕೂ ಹೆಚ್ಚು ಗೂಂಡಾಗಳು ಗುಂಪು ಹಲ್ಲೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೂಮಿಯನ್ನು ವಶಪಡಿಸಿಕೊಳ್ಳಲು, ಪುರುಷರ ಗುಂಪು ಶಸ್ತ್ರಾಸ್ತ್ರಗಳೊಂದಿಗೆ ಬಂದಿದ್ದರು. ನಿರ್ವೇಂದ್ರ ಕುಮಾರ್ ಮಿಶ್ರಾ ಮತ್ತು ಅವರ ಮಗ ಸಂಜೀವ್ ಮಿಶ್ರಾ ಇದನ್ನು ವಿರೋಧಿಸಿದ ನಂತರ ಅವರ ಹಲ್ಲೆ ಮಾಡಲಾಗಿದೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಭೂ ವಿವಾದದ ವಿಷಯವೂ ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿದೆ ಎಂದು ವರದಿಯಾಗಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...