Homeಮುಖಪುಟಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, "ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ" ಎಂದು ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಭೂ ವಿವಾದದ ಕಾರಣಕ್ಕೆ ಉತ್ತರ ಪ್ರದೇಶದ ಮಾಜಿ ಶಾಸಕರಾದ ನಿರ್ವೇಂದ್ರ ಕುಮಾರ್ ಮಿಶ್ರಾ ಅವರ ಮೇಲೆ ಗುಂಪು ಹಲ್ಲೆ ನಡೆಸಿದ್ದು ಅವರು ಭಾನುವಾರ ನಿಧನರಾಗಿದ್ದಾರೆ. ಇದಕ್ಕೆ ಪೊಲೀಸರೂ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಹಳೆಯ ಭೂ ವಿವಾದದ ಬಗ್ಗೆ ನಡೆದ ಜಗಳದಲ್ಲಿ ಹಲ್ಲೆ ಮಾಡಲಾಗಿದ್ದು ಶಾಸಕರು ಮರಣ ಹೊಂದಿದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ.

ನಿರ್ವೇಂದ್ರ ಕುಮಾರ್ ಮಿಶ್ರಾ 1993 ರಲ್ಲಿ ಸಮಾಜವಾದಿ ಪಕ್ಷದಿಂದ ಗೆಲ್ಲುವ ಮೊದಲು 1989 ಮತ್ತು 1991 ರಲ್ಲಿ ಎರಡು ಬಾರಿ ಸ್ವತಂತ್ರರಾಗಿ ಜಿಲ್ಲೆಯ ನಿಘಾಸನ್ ಸ್ಥಾನದಿಂದ ಶಾಸಕರಾಗಿದ್ದರು.

ಪಲ್ಲಿಯಾ ಗ್ರಾಮದ ನಿವಾಸಿಗಳಾದ ಸಮೀರ್ ಗುಪ್ತಾ ಮತ್ತು ರಾಧೇಶ್ಯಾಂ ಗುಪ್ತಾ ಅವರೊಂದಿಗೆ ಮಿಶ್ರಾ ವಿವಾದಿತ ಭೂಮಿಯ ಬಗ್ಗೆ ವಾದ ನಡೆಸಿದ್ದರು. ವಿವಾದಿತ ಭೂಮಿ ಸಮೀರ್ ಹೆಸರಿನಲ್ಲಿತ್ತು. ಹಾಗಾಗಿ ಮಿಶ್ರಾ ಈ ಸ್ವಾಧೀನವನ್ನು ವಿರೋಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸೆಕ್ಷನ್ 107/116 ರ ಅಡಿಯಲ್ಲಿ ಮಿಶ್ರಾ ಮತ್ತು ಅವರ ಮಗನ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು.

‘ಮೇಲು ನೋಟಕ್ಕೆ, ನಿರ್ವೇಂದ್ರ ಕುಮಾರ್ ಮಿಶ್ರಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಊಹಿಸಬಹುದು. ಏಕೆಂದರೆ ಅವರ ದೇಹದಲ್ಲಿ ಯಾವುದೇ ಗಾಯದ ಲಕ್ಷಣಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ” ಎಂದು ಪೊಲೀಸರು ಹೇಳಿರುವುದಾಗಿ ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

“ಎರಡೂ ಕಡೆಯವರ ನಡುವೆ ವಿವಾದ ಆರಂಭವಾಗಿತ್ತು. ನಂತರ ಇದು ಜಗಳಕ್ಕೆ ತಿರುಗಿತು. ಆ ಸಂದರ್ಭದಲ್ಲಿ ಮಿಶ್ರಾ ನೆಲಕ್ಕೆ ಕುಸಿದು ಬಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸತ್ತರು ಎಂದು ಘೋಷಿಸಲಾಯಿತು. ಅವರ ಮಗ ಸಂಜೀವ್ ಸ್ಥಿತಿ ಕೂಡಾ ಗಂಭೀರವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅವರು ನನಗೆ ಹೊಡೆದರು. ಅವರು ನಮ್ಮ ತಂದೆಯನ್ನು ಹೊಡೆದು ಸಾಯಿಸಿದರು. ನನ್ನ ತಂದೆಯನ್ನು ಕೊಲ್ಲಲಾಯಿತು” ಎಂದು ಮಿಶ್ರಾ ಅವರ ಮಗ ಸ್ಥಳೀಯ ವರದಿಗಾರರೊಂದಿಗೆ ಹೇಳಿದರು.

ಈ ಹಲ್ಲೆಯಲ್ಲಿ ಪೊಲೀಸರ ಪಾತ್ರವನ್ನೂ ಪ್ರಶ್ನಿಸಿದ ಅವರು, ತಂದೆಯ ಮೇಲೆ ಹಲ್ಲೆ ನಡೆಸಿದವರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ ಸಂಜೀವ್ ಆರೋಪಿಸಿದ್ದಾರೆ. ಮಿಶ್ರಾ ಅವರ ಮರಣದ ನಂತರ, ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿ, ಅವರ ಮೃತ ದೇಹವನ್ನು ತ್ರಿಕೋಲಿಯಾ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಕೊಲೆಗಾರರೊಂದಿಗೆ ಯುಪಿ ಪೊಲೀಸರು ಶಾಮೀಲಾಗಿದ್ದಾರೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ನನ್ನ ತಂದೆ ನೆಲಕ್ಕೆ ಕುಸಿದ ನಂತರ, ಸ್ಥಳೀಯರು ಗುಂಪು ಹಲ್ಲೆ ಮಾಡಿದ ಕೆಲವು ಆರೋಪಿಗಳನ್ನು ಹಿಮ್ಮೆಟ್ಟಿಸಿ ಹಿಡಿದರು. ಆದರೆ ಪೊಲೀಸರು ಬಂದು ಅವರಿಗೆ ಮುಕ್ತವಾಗಿ ಹೋಗಲು ಅವಕಾಶ ಮಾಡಿಕೊಟ್ಟರು ಎಂದು ಮಿಶ್ರಾ ಅವರ ಮಗ ಸಂಜೀವ್ ಆರೋಪಿಸಿದ್ದಾರೆ.

ತ್ರಿಕೋಲಿಯ ಪಧುವಾ ಬಸ್ ನಿಲ್ದಾಣದ ಬಳಿ 40ಕ್ಕೂ ಹೆಚ್ಚು ಗೂಂಡಾಗಳು ಗುಂಪು ಹಲ್ಲೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೂಮಿಯನ್ನು ವಶಪಡಿಸಿಕೊಳ್ಳಲು, ಪುರುಷರ ಗುಂಪು ಶಸ್ತ್ರಾಸ್ತ್ರಗಳೊಂದಿಗೆ ಬಂದಿದ್ದರು. ನಿರ್ವೇಂದ್ರ ಕುಮಾರ್ ಮಿಶ್ರಾ ಮತ್ತು ಅವರ ಮಗ ಸಂಜೀವ್ ಮಿಶ್ರಾ ಇದನ್ನು ವಿರೋಧಿಸಿದ ನಂತರ ಅವರ ಹಲ್ಲೆ ಮಾಡಲಾಗಿದೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಭೂ ವಿವಾದದ ವಿಷಯವೂ ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿದೆ ಎಂದು ವರದಿಯಾಗಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...