Homeಮುಖಪುಟಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, "ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ" ಎಂದು ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಭೂ ವಿವಾದದ ಕಾರಣಕ್ಕೆ ಉತ್ತರ ಪ್ರದೇಶದ ಮಾಜಿ ಶಾಸಕರಾದ ನಿರ್ವೇಂದ್ರ ಕುಮಾರ್ ಮಿಶ್ರಾ ಅವರ ಮೇಲೆ ಗುಂಪು ಹಲ್ಲೆ ನಡೆಸಿದ್ದು ಅವರು ಭಾನುವಾರ ನಿಧನರಾಗಿದ್ದಾರೆ. ಇದಕ್ಕೆ ಪೊಲೀಸರೂ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಹಳೆಯ ಭೂ ವಿವಾದದ ಬಗ್ಗೆ ನಡೆದ ಜಗಳದಲ್ಲಿ ಹಲ್ಲೆ ಮಾಡಲಾಗಿದ್ದು ಶಾಸಕರು ಮರಣ ಹೊಂದಿದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ.

ನಿರ್ವೇಂದ್ರ ಕುಮಾರ್ ಮಿಶ್ರಾ 1993 ರಲ್ಲಿ ಸಮಾಜವಾದಿ ಪಕ್ಷದಿಂದ ಗೆಲ್ಲುವ ಮೊದಲು 1989 ಮತ್ತು 1991 ರಲ್ಲಿ ಎರಡು ಬಾರಿ ಸ್ವತಂತ್ರರಾಗಿ ಜಿಲ್ಲೆಯ ನಿಘಾಸನ್ ಸ್ಥಾನದಿಂದ ಶಾಸಕರಾಗಿದ್ದರು.

ಪಲ್ಲಿಯಾ ಗ್ರಾಮದ ನಿವಾಸಿಗಳಾದ ಸಮೀರ್ ಗುಪ್ತಾ ಮತ್ತು ರಾಧೇಶ್ಯಾಂ ಗುಪ್ತಾ ಅವರೊಂದಿಗೆ ಮಿಶ್ರಾ ವಿವಾದಿತ ಭೂಮಿಯ ಬಗ್ಗೆ ವಾದ ನಡೆಸಿದ್ದರು. ವಿವಾದಿತ ಭೂಮಿ ಸಮೀರ್ ಹೆಸರಿನಲ್ಲಿತ್ತು. ಹಾಗಾಗಿ ಮಿಶ್ರಾ ಈ ಸ್ವಾಧೀನವನ್ನು ವಿರೋಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸೆಕ್ಷನ್ 107/116 ರ ಅಡಿಯಲ್ಲಿ ಮಿಶ್ರಾ ಮತ್ತು ಅವರ ಮಗನ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು.

‘ಮೇಲು ನೋಟಕ್ಕೆ, ನಿರ್ವೇಂದ್ರ ಕುಮಾರ್ ಮಿಶ್ರಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಊಹಿಸಬಹುದು. ಏಕೆಂದರೆ ಅವರ ದೇಹದಲ್ಲಿ ಯಾವುದೇ ಗಾಯದ ಲಕ್ಷಣಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ” ಎಂದು ಪೊಲೀಸರು ಹೇಳಿರುವುದಾಗಿ ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

“ಎರಡೂ ಕಡೆಯವರ ನಡುವೆ ವಿವಾದ ಆರಂಭವಾಗಿತ್ತು. ನಂತರ ಇದು ಜಗಳಕ್ಕೆ ತಿರುಗಿತು. ಆ ಸಂದರ್ಭದಲ್ಲಿ ಮಿಶ್ರಾ ನೆಲಕ್ಕೆ ಕುಸಿದು ಬಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸತ್ತರು ಎಂದು ಘೋಷಿಸಲಾಯಿತು. ಅವರ ಮಗ ಸಂಜೀವ್ ಸ್ಥಿತಿ ಕೂಡಾ ಗಂಭೀರವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅವರು ನನಗೆ ಹೊಡೆದರು. ಅವರು ನಮ್ಮ ತಂದೆಯನ್ನು ಹೊಡೆದು ಸಾಯಿಸಿದರು. ನನ್ನ ತಂದೆಯನ್ನು ಕೊಲ್ಲಲಾಯಿತು” ಎಂದು ಮಿಶ್ರಾ ಅವರ ಮಗ ಸ್ಥಳೀಯ ವರದಿಗಾರರೊಂದಿಗೆ ಹೇಳಿದರು.

ಈ ಹಲ್ಲೆಯಲ್ಲಿ ಪೊಲೀಸರ ಪಾತ್ರವನ್ನೂ ಪ್ರಶ್ನಿಸಿದ ಅವರು, ತಂದೆಯ ಮೇಲೆ ಹಲ್ಲೆ ನಡೆಸಿದವರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ ಸಂಜೀವ್ ಆರೋಪಿಸಿದ್ದಾರೆ. ಮಿಶ್ರಾ ಅವರ ಮರಣದ ನಂತರ, ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿ, ಅವರ ಮೃತ ದೇಹವನ್ನು ತ್ರಿಕೋಲಿಯಾ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಕೊಲೆಗಾರರೊಂದಿಗೆ ಯುಪಿ ಪೊಲೀಸರು ಶಾಮೀಲಾಗಿದ್ದಾರೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ನನ್ನ ತಂದೆ ನೆಲಕ್ಕೆ ಕುಸಿದ ನಂತರ, ಸ್ಥಳೀಯರು ಗುಂಪು ಹಲ್ಲೆ ಮಾಡಿದ ಕೆಲವು ಆರೋಪಿಗಳನ್ನು ಹಿಮ್ಮೆಟ್ಟಿಸಿ ಹಿಡಿದರು. ಆದರೆ ಪೊಲೀಸರು ಬಂದು ಅವರಿಗೆ ಮುಕ್ತವಾಗಿ ಹೋಗಲು ಅವಕಾಶ ಮಾಡಿಕೊಟ್ಟರು ಎಂದು ಮಿಶ್ರಾ ಅವರ ಮಗ ಸಂಜೀವ್ ಆರೋಪಿಸಿದ್ದಾರೆ.

ತ್ರಿಕೋಲಿಯ ಪಧುವಾ ಬಸ್ ನಿಲ್ದಾಣದ ಬಳಿ 40ಕ್ಕೂ ಹೆಚ್ಚು ಗೂಂಡಾಗಳು ಗುಂಪು ಹಲ್ಲೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೂಮಿಯನ್ನು ವಶಪಡಿಸಿಕೊಳ್ಳಲು, ಪುರುಷರ ಗುಂಪು ಶಸ್ತ್ರಾಸ್ತ್ರಗಳೊಂದಿಗೆ ಬಂದಿದ್ದರು. ನಿರ್ವೇಂದ್ರ ಕುಮಾರ್ ಮಿಶ್ರಾ ಮತ್ತು ಅವರ ಮಗ ಸಂಜೀವ್ ಮಿಶ್ರಾ ಇದನ್ನು ವಿರೋಧಿಸಿದ ನಂತರ ಅವರ ಹಲ್ಲೆ ಮಾಡಲಾಗಿದೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಭೂ ವಿವಾದದ ವಿಷಯವೂ ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿದೆ ಎಂದು ವರದಿಯಾಗಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....