Homeಕರ್ನಾಟಕರಾಮನಗರ: ಭಿನ್ನ ಧರ್ಮೀಯ ಜೋಡಿ ಮೇಲೆ ಹಲ್ಲೆ; ಐವರ ಬಂಧನ

ರಾಮನಗರ: ಭಿನ್ನ ಧರ್ಮೀಯ ಜೋಡಿ ಮೇಲೆ ಹಲ್ಲೆ; ಐವರ ಬಂಧನ

- Advertisement -
- Advertisement -

ರಾಮನಗರ ಜಿಲ್ಲೆ ಕನಕಪುರದಲ್ಲಿ ಭಿನ್ನ ಧರ್ಮೀಯ ಜೋಡಿ ಮೇಲೆ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿ, ಇಬ್ಬರ ತಲೆಯನ್ನು ಅರ್ಧ ಬೋಳಿಸಿದ ಬಗ್ಗೆ ವರದಿಯಾಗಿದೆ.

ಪಟ್ಟಣದ ಇಂದಿರಾನಗರದಲ್ಲಿ ಶನಿವಾರ (ಸೆ.20) ಈ ಘಟನೆ ನಡೆದಿದೆ ಎಂದು ಮಾಹಿತಿ ದೊರೆತಿದೆ.

ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಏಳು ಆರೋಪಿಗಳ ಮೇಲೆ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಪೈಕಿ ಐವರನ್ನು ಬಂಧಿಸಿದ್ದಾರೆ.

ಭಿನ್ನ ಧರ್ಮೀಯ ಜೋಡಿಗಳಾದ ಮಹೇಶ್ ಮತ್ತು ಆಸಿನ್ ನೀಡಿರುವ ಪ್ರತ್ಯೇಕ ದೂರಿನ ಮೇರೆಗೆ ಆಸಿನ್ ಕಡೆಯವರಾದ ಶೇಕ್ ಕಬೀರ್, ಸುಹೇಲ್ ಷರೀಫ್, ಸೈಯದ್ ನಯಾಝ್, ನವಾಝ್ ಖಾನ್, ಸಾಜಿದಾ ಬೇಗಂ, ಸಯಿದಾ ಸೇರಿ 7 ಮಂದಿ ವಿರುದ್ದ ಕನಕಪುರ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಐವರನ್ನು ಬಂಧಿಸಿ, ಉಳಿದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸೆ.18ರಂದು ತಾಮಸಂದ್ರದಲ್ಲಿರುವ ಮಹೇಶ್ ಸ್ನೇಹಿತನ ಮನೆಗೆ ಇಬ್ಬರೂ ಹೋಗಿ ಉಳಿದಿದ್ದರು. ಈ ವಿಷಯ ತಿಳಿದ ಆರೋಪಿಗಳು, ಮಾರನೇ ದಿನ ಸಂಜೆ 4.30ರ ಸುಮಾರಿಗೆ ತಾಮಸಂದ್ರಕ್ಕೆ ಕಾರಿನಲ್ಲಿ ಹೋಗಿ ಇಬ್ಬರನ್ನೂ ಕನಕಪುರಕ್ಕೆ ಕರೆ ತಂದು ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ನಂತರ ಇಂದಿರಾನಗರದ ಕರಿಯಪ್ಪ ರಸ್ತೆಯಲ್ಲಿರುವ ವಿದ್ಯುತ್ ಕಂಬದ ಬಳಿ ಇಬ್ಬರನ್ನೂ ಕೂರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಬಿಡಿಸಿಕೊಳ್ಳಲು ಬಂದ ಮಹೇಶ್ ಕುಟುಂಬದವರ ಮೇಲೂ ಹಲ್ಲೆ ನಡೆಸಲಾಗಿದೆ. ಆರೋಪಿಗಳ ಪೈಕಿ ಕಬೀರ್, ಟ್ರಿಮ್ಮರ್‌ನಿಂದ ಇಬ್ಬರ ತಲೆಯನ್ನು ಅರ್ಧ ಬೋಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, 15 ವರ್ಷಗಳ ಹಿಂದೆಯೇ ಮದುವೆಯಾಗಿರುವ ಆಸಿನ್ ತಾಜ್‌ಗೆ ಮಗನಿದ್ದು, ಗಂಡ ಆರು ತಿಂಗಳ ಹಿಂದೆ ಬಿಟ್ಟು ಹೋಗಿದ್ದಾರೆ. ಇವರು ಇಂದಿರಾನಗರದ ಮಹೇಶ್ ಅವರನ್ನು ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಮಹೇಶ್ ಕೂಡ ವಿವಾಹಿತರಾಗಿದ್ದು ಹೆಂಡತಿ ತೀರಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಜೋಡಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ. ಮಹಿಳೆಯನ್ನು ಕೌನ್ಸೆಲಿಂಗ್‌ಗಾಗಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಪೊಲೀಸರು ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ, ಕಾನೂನು, ಸುವ್ಯವಸ್ಥೆ ಕಾಪಾಡಲು ಘಟನಾ ಸ್ಥಳದಲ್ಲಿ ಪೊಲೀಸರು ಹೆಚ್ಚುವರಿ ಪಡೆಯನ್ನು ನಿಯೋಜಿಸಿದ್ದಾರೆ. ಎರಡೂ ಕುಟುಂಬಗಳು ಮತ್ತು ಸಮುದಾಯದ ಸದಸ್ಯರನ್ನು ಒಳಗೊಂಡ ಶಾಂತಿ ಸಭೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...