Homeಕರ್ನಾಟಕಬೆಳಗಾವಿ | ಮಹಿಳೆಯರಿಬ್ಬರ ಬಟ್ಟೆ ಹರಿದು ಸಾರ್ವಜನಿಕವಾಗಿ ಹಲ್ಲೆ : ಪ್ರಕರಣ ದಾಖಲು

ಬೆಳಗಾವಿ | ಮಹಿಳೆಯರಿಬ್ಬರ ಬಟ್ಟೆ ಹರಿದು ಸಾರ್ವಜನಿಕವಾಗಿ ಹಲ್ಲೆ : ಪ್ರಕರಣ ದಾಖಲು

- Advertisement -
- Advertisement -

ಬೆಳಗಾವಿಯ ವಡ್ಡರವಾಡಿ ಪ್ರದೇಶದಲ್ಲಿ ಮಹಿಳೆಯರಿಬ್ಬರನ್ನು ರಸ್ತೆಗೆ ಎಳೆದು ತಂದು ಬಟ್ಟೆ ಹರಿದು ಹಲ್ಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕಳೆದ ಸೋಮವಾರ (ನ.11) ನಡೆದ ಘಟನೆಯ ವಿಡಿಯೋ ಇಂದು (ನ.16) ವೈರಲ್ ಆಗಿದೆ ಎಂದು ತಿಳಿದು ಬಂದಿದೆ.

ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯರಿಬ್ಬರ ಮೇಲೆ ಹಲ್ಲೆ ಮಾಡಿ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ವಡ್ಡರವಾಡಿಯ ಮಹಿಳೆಯೊಬ್ಬರನ್ನು ಮಹಾರಾಷ್ಟ್ರಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ಮನೆಯಲ್ಲಿ ಕಿರುಕುಳ ಕಾರಣ ತವರಿಗೆ ಬಂದ ಮಹಿಳೆ, ತಾಯಿಯ ಜೊತೆ ವಾಸವಾಗಿದ್ದರು. ಅವರ ಪರಿಚಯಸ್ಥರು ಪದೇಪದೇ ಮನೆಗೆ ಬರುತ್ತಿರುವುದನ್ನು ಕಂಡು, ವೇಶ್ಯಾವಾಟಿಕೆ ನಡೆಸುತ್ತಿರುವ ಅನುಮಾನದಿಂದ ಹಲ್ಲೆ ಮಾಡಿದ್ದಾರೆ ಎಂದು ಮಹಿಳೆಯರು ದೂರಿನಲ್ಲಿ ತಿಳಿಸಿದ್ದಾರೆ.

“ಸೋಮವಾರ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ತಮ್ಮ ತಾಯಿಯ ಕೂದಲು ಹಿಡಿದು ಹೊರಗೆ ಎಳೆದು ತಂದರು. ನನ್ನನ್ನೂ ಎಳೆದಾಡಿ ಬಟ್ಟೆ ಹರಿದರು. ವಿವಸ್ತ್ರಗೊಳಿಸಿ ಹಲ್ಲೆ ಮಾಡಿದರು” ಎಂದೂ ಮಹಿಳೆ ನೀಡಿದ ದೂರಿನಲ್ಲಿದೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಘಟನೆ ಸಂಬಂಧ ಇಂದ್ರಾ ಅಷ್ಟೇಕರ್, ಹೂವಪ್ಪ ಅಷ್ಟೇಕರ್, ಮಣಿಕಂಠ ಅಷ್ಟೇಕರ್ ಎಂಬವರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಎನ್​ಎಸ್ ಕಾಯ್ದೆಯ ವಿಧಿ 115(2),3(5), 331, 352 ಹಾಗೂ 74 ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇಂದು ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ರೋಹನ್‌ ಜಗದೀಶ್‌, ‘ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮೂವರು ಹಲ್ಲೆ ಮಾಡಿದ್ದಾರೆ. ಇಂಥ ಘಟನೆ ನಡೆಯಬಾರದಿತ್ತು. ಆರೋಪಿಗಳನ್ನು ಬಂಧಿಸಲು ಮತ್ತು ಘಟನೆಯ ಸಂಪೂರ್ಣ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನಟ ದರ್ಶನ್‌ಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬೆಂಗಳೂರು ಪೊಲೀಸ್ ಕಮಿಷನರ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...