Homeಮುಖಪುಟಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

ಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

- Advertisement -
- Advertisement -

ಪುರಿ ರೈಲು ನಿಲ್ದಾಣದಿಂದ ಕರೆದುಕೊಂಡು ಬರಲು ಐಷಾರಾಮಿ ಕಾರುಗಳನ್ನು ಕಳುಹಿಸದ ಕಾರಣಕ್ಕೆ ಒಡಿಶಾ ರಾಜ್ಯಪಾಲರ ಪುತ್ರ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಒಡಿಶಾ ರಾಜಭವನದ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ.

ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಹಲ್ಲೆ ನಡೆಸಿರುವುದಾಗಿ ಅಧಿಕಾರಿ ಬೈಕುಂಠ ಪ್ರಧಾನ್ ತಿಳಿಸಿದ್ದಾರೆ.

ಬೈಕುಂಠ ಪ್ರಧಾನ್ ರಾಜಭವನದಲ್ಲಿ ರಾಜ್ಯಪಾಲರ ಸಚಿವಾಲಯದ ಗೃಹ ವಿಭಾಗದ ಸಹಾಯಕ ವಿಭಾಗ ಅಧಿಕಾರಿಯಾಗಿದ್ದಾರೆ. ಪುರಿಯ ರಾಜಭವನ ಆವರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯ ಮೇಲ್ವಿಚಾರಣೆಗೆ ತನ್ನನ್ನು ನಿಯೋಜಿಸಿದ್ದ ಸಂದರ್ಭದ, ಜುಲೈ 7ರಂದು ರಾತ್ರಿ ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಲಲಿತ್ ಕುಮಾರ್ ಮತ್ತು ಇತರ ಐವರು ತನಗೆ ಕಪಾಳಮೋಕ್ಷ ಮಾಡಿ, ಹೊಡೆದು, ಒದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಜುಲೈ 10ರಂದು ಪ್ರಧಾನ್ ಅವರು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ರಾಜಭವನದ ಅಧಿಕಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿ ಸಾಸ್ವತ್ ಮಿಶ್ರಾ ಅವರಿಗೆ ಕರೆಮಾಡಿ, ಸಂದೇಶ ಕಳುಹಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೂರಿನಲ್ಲಿ, “ಪುರಿಯ ರಾಜಭವನದ ಉಸ್ತುವಾರಿಯಾಗಿರುವ ನಾನು ಜುಲೈ 7-8ರಂದು ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಜುಲೈ 5ರಿಂದ ಭುವನೇಶ್ವರದ ರಾಜಭವನದಲ್ಲಿದ್ದೆ. ಜುಲೈ 7ರಂದು ರಾತ್ರಿ 11.45 ರ ಸುಮಾರಿಗೆ ಕಚೇರಿ ಕೊಠಡಿಯಲ್ಲಿ ಕುಳಿತಿದ್ದಾಗ, ರಾಜ್ಯಪಾಲರ ವೈಯಕ್ತಿಕ ಅಡುಗೆಯವರು ಬಂದು ಕುಮಾರ್ ಅವರನ್ನು ತಕ್ಷಣ ನೋಡಬೇಕೆಂದು ಹೇಳಿದರು” ಎಂದು ತಿಳಿಸಿದ್ದಾರೆ.

“ಕುಮಾರ್ ನನ್ನನ್ನು ನೋಡಿದ ತಕ್ಷಣ ನಿಂದಿಸಲು ಆರಂಭಿಸಿದರು. ಆಕ್ಷೇಪಾರ್ಹವಾದ ಭಾಷೆ ಬಳಸಿದರು. ನಾನು ಆಕ್ಷೇಪಿಸಿದಾಗ ನನಗೆ ಕಪಾಳಮೋಕ್ಷ ಮಾಡಿದ್ದಾರೆ. ನಾನು ಕೋಣೆಯಿಂದ ಹೊರಗೆ ಓಡಿ ಅನೆಕ್ಸ್‌ನ ಹಿಂದೆ ಅಡಗಿಕೊಂಡಿದ್ದೆ. ಆದರೆ, ಕುಮಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳು ನನ್ನನ್ನು ಪತ್ತೆ ಹೆಚ್ಚಿ ಲಿಫ್ಟ್ ಮೂಲಕ ಕೋಣೆಗೆ ಎಳೆದೊಯ್ದಿದ್ದಾರೆ” ಎಂದು ಪ್ರಧಾನ್ ಆರೋಪಿಸಿದ್ದಾರೆ.

“ಭದ್ರತಾ ಸಿಬ್ಬಂದಿ ಮತ್ತು ಅಲ್ಲಿದ್ದ ಇತರರು ಈ ಘಟನೆಗೆ ಸಾಕ್ಷಿಯಾಗಿದ್ದಾರೆ. ಕುಮಾರ್ ನನಗೆ ಮತ್ತೆ ಕಪಾಳಮೋಕ್ಷ ಮಾಡಿದರು. ನನ್ನ ಮುಖದ ಮೇಲೆ ಗುದ್ದಿದರು. ನನ್ನ ದೇಹದ ಪ್ರತಿಯೊಂದು ಭಾಗಕ್ಕೂ ಒದ್ದಿದ್ದಾರೆ. ನನ್ನ ಎಡ ಪಾದವನ್ನು ತಿರುಚಿದರು. ನನ್ನನ್ನು ಕೊಂದರೆ ಯಾರೂ ನನ್ನನ್ನು ಉಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು” ಎಂದು ಹೇಳಿದ್ದಾರೆ.

“ಈ ಬಗ್ಗೆ ಜುಲೈ 8ರಂದು ಸಂಜೆ 4.30ಕ್ಕೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಮೌಖಿಕವಾಗಿ ವಿವರಿಸಿದ್ದು, ಜುಲೈ 10ರಂದು ಪತ್ರವನ್ನು ಮೇಲ್ ಮಾಡಿದ್ದೇನೆ” ಎಂದು ಪ್ರಧಾನ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಶುಕ್ರವಾರ ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನ್ ಅವರ ಪತ್ನಿ ಸಯೋಜ್, “ಜುಲೈ 11ರಂದು ಸೀ ಬೀಚ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಆದರೆ ನಮ್ಮ ದೂರು ಸ್ವೀಕರಿಸಿಲ್ಲ. ಆದ್ದರಿಂದ, ನಾವು ದೂರನ್ನು ಪೊಲೀಸರಿಗೆ ಮೇಲ್ ಮಾಡಿದ್ದೇವೆ” ಎಂದು ಹೇಳಿದರು.

ಪುರಿ ರೈಲ್ವೆ ನಿಲ್ದಾಣದಲ್ಲಿ ತಮ್ಮನ್ನು ಬರಮಾಡಿಕೊಳ್ಳಲು ಎರಡು ಐಷಾರಾಮಿ ವಾಹನಗಳನ್ನು ಕಳುಹಿಸದಿರುವುದಕ್ಕೆ ಪ್ರಧಾನ್ ಮೇಲೆ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನ್ನ ಪಾದರಕ್ಷೆಯನ್ನು ನೆಕ್ಕಲು ಕುಮಾರ್ ಹೇಳಿದ್ದಾರೆ ಎಂದೂ ಕೂಡಾ ದೂರಿನಲ್ಲಿ ಆರೋಪಿಸಲಾಗಿದೆ. ಇನ್ನು ಪುರಿ ಪೊಲೀಸ್ ವರಿಷ್ಠಾಧಿಕಾರಿ ಪಿನಾಕ್ ಮಿಶ್ರಾ ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

“ನನ್ನ ಪತಿಯನ್ನು ರಾಷ್ಟ್ರಪತಿಗಳ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ರಾಜ್ಯಪಾಲರ ಮಗನ ಸೇವೆಗಾಗಿ ಅಲ್ಲ” ಎಂದು ಸಯೋಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಧಾನ್ ಅವರು ಜುಲೈ 10 ರಂದು ರಾಜ್ಯಪಾಲರು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಆದರೆ, ಈ ವೇಳೆ ಅವರ ನಡವಳಿಕೆಯನ್ನೇ ಬದಲಾಯಿಕೊಳ್ಳಲು ಸೂಚಿಸಿದ್ದಾರೆ. 2019 ರಲ್ಲಿ ಎಎಸ್‌ಒ ಕೆಲಸಕ್ಕೆ ನೇಮಕ ಆಗುವ ಮುನ್ನ ಪ್ರಧಾನ್ ಸುಮಾರು 20 ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಸಯೋಜ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವರದಿ ಹಂಚಿಕೊಂಡಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಈ ಪ್ರಕರಣದಲ್ಲಿ ಯಾರು ಕ್ರಮ ಕೈಗೊಳ್ಳಲಿದ್ದಾರೆ? ಮೋದಿ ಈ ರಾಜ್ಯಪಾಲರನ್ನು ವಜಾಗೊಳಿಸಬಹುದೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...