Homeಮುಖಪುಟಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

ಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

- Advertisement -
- Advertisement -

ಪುರಿ ರೈಲು ನಿಲ್ದಾಣದಿಂದ ಕರೆದುಕೊಂಡು ಬರಲು ಐಷಾರಾಮಿ ಕಾರುಗಳನ್ನು ಕಳುಹಿಸದ ಕಾರಣಕ್ಕೆ ಒಡಿಶಾ ರಾಜ್ಯಪಾಲರ ಪುತ್ರ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಒಡಿಶಾ ರಾಜಭವನದ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ.

ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಹಲ್ಲೆ ನಡೆಸಿರುವುದಾಗಿ ಅಧಿಕಾರಿ ಬೈಕುಂಠ ಪ್ರಧಾನ್ ತಿಳಿಸಿದ್ದಾರೆ.

ಬೈಕುಂಠ ಪ್ರಧಾನ್ ರಾಜಭವನದಲ್ಲಿ ರಾಜ್ಯಪಾಲರ ಸಚಿವಾಲಯದ ಗೃಹ ವಿಭಾಗದ ಸಹಾಯಕ ವಿಭಾಗ ಅಧಿಕಾರಿಯಾಗಿದ್ದಾರೆ. ಪುರಿಯ ರಾಜಭವನ ಆವರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯ ಮೇಲ್ವಿಚಾರಣೆಗೆ ತನ್ನನ್ನು ನಿಯೋಜಿಸಿದ್ದ ಸಂದರ್ಭದ, ಜುಲೈ 7ರಂದು ರಾತ್ರಿ ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಲಲಿತ್ ಕುಮಾರ್ ಮತ್ತು ಇತರ ಐವರು ತನಗೆ ಕಪಾಳಮೋಕ್ಷ ಮಾಡಿ, ಹೊಡೆದು, ಒದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಜುಲೈ 10ರಂದು ಪ್ರಧಾನ್ ಅವರು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ರಾಜಭವನದ ಅಧಿಕಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿ ಸಾಸ್ವತ್ ಮಿಶ್ರಾ ಅವರಿಗೆ ಕರೆಮಾಡಿ, ಸಂದೇಶ ಕಳುಹಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೂರಿನಲ್ಲಿ, “ಪುರಿಯ ರಾಜಭವನದ ಉಸ್ತುವಾರಿಯಾಗಿರುವ ನಾನು ಜುಲೈ 7-8ರಂದು ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಜುಲೈ 5ರಿಂದ ಭುವನೇಶ್ವರದ ರಾಜಭವನದಲ್ಲಿದ್ದೆ. ಜುಲೈ 7ರಂದು ರಾತ್ರಿ 11.45 ರ ಸುಮಾರಿಗೆ ಕಚೇರಿ ಕೊಠಡಿಯಲ್ಲಿ ಕುಳಿತಿದ್ದಾಗ, ರಾಜ್ಯಪಾಲರ ವೈಯಕ್ತಿಕ ಅಡುಗೆಯವರು ಬಂದು ಕುಮಾರ್ ಅವರನ್ನು ತಕ್ಷಣ ನೋಡಬೇಕೆಂದು ಹೇಳಿದರು” ಎಂದು ತಿಳಿಸಿದ್ದಾರೆ.

“ಕುಮಾರ್ ನನ್ನನ್ನು ನೋಡಿದ ತಕ್ಷಣ ನಿಂದಿಸಲು ಆರಂಭಿಸಿದರು. ಆಕ್ಷೇಪಾರ್ಹವಾದ ಭಾಷೆ ಬಳಸಿದರು. ನಾನು ಆಕ್ಷೇಪಿಸಿದಾಗ ನನಗೆ ಕಪಾಳಮೋಕ್ಷ ಮಾಡಿದ್ದಾರೆ. ನಾನು ಕೋಣೆಯಿಂದ ಹೊರಗೆ ಓಡಿ ಅನೆಕ್ಸ್‌ನ ಹಿಂದೆ ಅಡಗಿಕೊಂಡಿದ್ದೆ. ಆದರೆ, ಕುಮಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳು ನನ್ನನ್ನು ಪತ್ತೆ ಹೆಚ್ಚಿ ಲಿಫ್ಟ್ ಮೂಲಕ ಕೋಣೆಗೆ ಎಳೆದೊಯ್ದಿದ್ದಾರೆ” ಎಂದು ಪ್ರಧಾನ್ ಆರೋಪಿಸಿದ್ದಾರೆ.

“ಭದ್ರತಾ ಸಿಬ್ಬಂದಿ ಮತ್ತು ಅಲ್ಲಿದ್ದ ಇತರರು ಈ ಘಟನೆಗೆ ಸಾಕ್ಷಿಯಾಗಿದ್ದಾರೆ. ಕುಮಾರ್ ನನಗೆ ಮತ್ತೆ ಕಪಾಳಮೋಕ್ಷ ಮಾಡಿದರು. ನನ್ನ ಮುಖದ ಮೇಲೆ ಗುದ್ದಿದರು. ನನ್ನ ದೇಹದ ಪ್ರತಿಯೊಂದು ಭಾಗಕ್ಕೂ ಒದ್ದಿದ್ದಾರೆ. ನನ್ನ ಎಡ ಪಾದವನ್ನು ತಿರುಚಿದರು. ನನ್ನನ್ನು ಕೊಂದರೆ ಯಾರೂ ನನ್ನನ್ನು ಉಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು” ಎಂದು ಹೇಳಿದ್ದಾರೆ.

“ಈ ಬಗ್ಗೆ ಜುಲೈ 8ರಂದು ಸಂಜೆ 4.30ಕ್ಕೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಮೌಖಿಕವಾಗಿ ವಿವರಿಸಿದ್ದು, ಜುಲೈ 10ರಂದು ಪತ್ರವನ್ನು ಮೇಲ್ ಮಾಡಿದ್ದೇನೆ” ಎಂದು ಪ್ರಧಾನ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಶುಕ್ರವಾರ ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನ್ ಅವರ ಪತ್ನಿ ಸಯೋಜ್, “ಜುಲೈ 11ರಂದು ಸೀ ಬೀಚ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಆದರೆ ನಮ್ಮ ದೂರು ಸ್ವೀಕರಿಸಿಲ್ಲ. ಆದ್ದರಿಂದ, ನಾವು ದೂರನ್ನು ಪೊಲೀಸರಿಗೆ ಮೇಲ್ ಮಾಡಿದ್ದೇವೆ” ಎಂದು ಹೇಳಿದರು.

ಪುರಿ ರೈಲ್ವೆ ನಿಲ್ದಾಣದಲ್ಲಿ ತಮ್ಮನ್ನು ಬರಮಾಡಿಕೊಳ್ಳಲು ಎರಡು ಐಷಾರಾಮಿ ವಾಹನಗಳನ್ನು ಕಳುಹಿಸದಿರುವುದಕ್ಕೆ ಪ್ರಧಾನ್ ಮೇಲೆ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನ್ನ ಪಾದರಕ್ಷೆಯನ್ನು ನೆಕ್ಕಲು ಕುಮಾರ್ ಹೇಳಿದ್ದಾರೆ ಎಂದೂ ಕೂಡಾ ದೂರಿನಲ್ಲಿ ಆರೋಪಿಸಲಾಗಿದೆ. ಇನ್ನು ಪುರಿ ಪೊಲೀಸ್ ವರಿಷ್ಠಾಧಿಕಾರಿ ಪಿನಾಕ್ ಮಿಶ್ರಾ ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

“ನನ್ನ ಪತಿಯನ್ನು ರಾಷ್ಟ್ರಪತಿಗಳ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ರಾಜ್ಯಪಾಲರ ಮಗನ ಸೇವೆಗಾಗಿ ಅಲ್ಲ” ಎಂದು ಸಯೋಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಧಾನ್ ಅವರು ಜುಲೈ 10 ರಂದು ರಾಜ್ಯಪಾಲರು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಆದರೆ, ಈ ವೇಳೆ ಅವರ ನಡವಳಿಕೆಯನ್ನೇ ಬದಲಾಯಿಕೊಳ್ಳಲು ಸೂಚಿಸಿದ್ದಾರೆ. 2019 ರಲ್ಲಿ ಎಎಸ್‌ಒ ಕೆಲಸಕ್ಕೆ ನೇಮಕ ಆಗುವ ಮುನ್ನ ಪ್ರಧಾನ್ ಸುಮಾರು 20 ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಸಯೋಜ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವರದಿ ಹಂಚಿಕೊಂಡಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಈ ಪ್ರಕರಣದಲ್ಲಿ ಯಾರು ಕ್ರಮ ಕೈಗೊಳ್ಳಲಿದ್ದಾರೆ? ಮೋದಿ ಈ ರಾಜ್ಯಪಾಲರನ್ನು ವಜಾಗೊಳಿಸಬಹುದೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...