Homeಮುಖಪುಟಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

- Advertisement -
- Advertisement -

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ ಅರ್ನವ್ ಖೈರೆ, ಉಪನಗರ ರೈಲಿನ ಫಸ್ಟ್ ಕ್ಲಾಸ್ ಪಾಸ್ ಅವಧಿ ಮುಗಿದ ಹಿನ್ನೆಲೆ, ಸೆಕೆಂಡ್‌ ಕ್ಲಾಸ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದ. ಕಾಲೇಜಿಗೆ ತೆರಳುವ ಸಲುವಾಗಿ ಆತ ಕಲ್ಯಾಣ್‌ನಲ್ಲಿ ರೈಲು ಹತ್ತಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಅರ್ನವ್ ತಂದೆ ಜಿತೇಂದ್ರ ಖೈರೆ ಅವರು ಕಲ್ಯಾಣ್‌ನ ಕೊಲೆಸ್ವಾಡಿ (ಈಸ್ಟ್) ಪೊಲೀಸ್ ಠಾಣೆಗ ನೀಡಿದ ದೂರಿನಲ್ಲಿ, ರೈಲಿನಲ್ಲಿ ಜನಸಂದಣಿಯಿಂದಾಗಿ ಆರ್ನವ್ ಆಕಸ್ಮಿಕವಾಗಿ ಒಬ್ಬರು ವ್ಯಕ್ತಿಯ ಮೇಲೆ ಮುಗ್ಗರಿಸಿ ಬಿದ್ದಿದ್ದ. ಈ ವೇಳೆ ಹಿಂದಿಯಲ್ಲಿ, ‘ದಯವಿಟ್ಟು ಸ್ವಲ್ಪ ಮುಂದೆ ನಡೆಯಿರಿ’ ಎಂದು ಹೇಳಿದ್ದ. ಅರ್ನವ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರಾದ ಕೆಲ ಪುರುಷರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, “ನೀನು ಮರಾಠಿಯಲ್ಲಿ ಏಕೆ ಮಾತನಾಡ್ತಿಲ್ಲ? ತನ್ನ ಸ್ವಂತ ಭಾಷೆ ಮಾತನಾಡಲು ನಿನಗೆ ನಾಚಿಕೆಯಾಗ್ತಿದೆಯಾ?” ಎಂದು ಸಹ ಪ್ರಯಾಣಿಕರು ಕೇಳಿದ್ದಾರೆ. “ನಾನು ಮರಾಠಿಯವನೇ” ಎಂದರೂ ಅವರು ಆರ್ನವ್ ಜೊತೆ ವಾಗ್ವಾದ ನಡೆಸಿ ಥಳಿಸಿದ್ದಾರೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ಹೇಳಿದ್ದಾರೆ.

“ಸಹ ಪ್ರಯಾಣಿಕರು ತನ್ನ ಮಾಸ್ಕ್‌ ಹರಿದು ಹಾಕಿದ್ದರು. ಇದರಿಂದ ನಾನು ತುಂಬಾ ಭಯಭೀತನಾಗಿದ್ದೆ, ನಡುಗಿದ್ದೆ. ಘಟನೆಯ ನಂತರ ನಾನು ಥಾಣೆ ನಿಲ್ದಾಣದಲ್ಲಿ ಇಳಿದು, ಮತ್ತೊಂದು ರೈಲು ಹತ್ತಿ ಮುಳುಂದ್ ತಲುಪಿದೆ” ಎಂದು ಆರ್ನವ್ ಹೇಳಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ವಿವರಿಸಿದ್ದಾರೆ.

ಘಟನೆಯ ನಂತರ ಆರ್ನವ್ ಮಾನಸಿಕವಾಗಿ ನೊಂದಿದ್ದ. ಕಾಲೇಜಿನಲ್ಲಿ, ಪ್ರಾಯೋಗಿಕ ಪರೀಕ್ಷೆ ಮುಗಿದ ನಂತರ, ತನ್ನ ತಂದೆಗೆ ಕರೆ ಮಾಡಿ, “ಅಪ್ಪಾ, ನನಗೆ ಹುಷಾರಿಲ್ಲ…” ಎಂದು ಹೇಳಿದ್ದ. ಮಧ್ಯಾಹ್ನ, ಮನೆಗೆ ತಲುಪಿದ ನಂತರ, ಮತ್ತೆ ತನ್ನ ತಂದೆಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ತಿಳಿಸಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಮಗ ರೈಲಿನಲ್ಲಿ ನಡೆದ ಘಟನೆಯ ಬಗ್ಗೆ ತಿಳಿಸಿದಾಗ ನಾನು ಆತನಿಗೆ ಧೈರ್ಯ ತುಂಬಿ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದೆ. ಆದರೆ, ಮಂಗಳವಾರ (ನವೆಂಬರ್ 18) ಸಂಜೆ ಮನೆಗೆ ತಲುಪಿದಾಗ ಬಾಗಿಲು ಲಾಕ್ ಆಗಿತ್ತು. ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಂಬ್ಯುಲೆನ್ಸ್‌ಗೆ ಕರೆಸಿ ರುಕ್ಮಿಣಿಬಾಯಿ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ, ರಾತ್ರಿ 9.05ಕ್ಕೆ ಅರ್ನವ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ.

ರೈಲಿನಲ್ಲಿ ಆದ ಘಟನೆಯಿಂದ ಮಾನಸಿಕವಾಗಿ ನೊಂದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ. ಅವರು ಮಗನಿಗೆ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕಲ್ಯಾಣ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕಲ್ಯಾಣ್‌ಜಿ ಘೇಟೆ ಮಾತನಾಡಿ, “ಪ್ರಕರಣದ ತನಿಖೆಗಾಗಿ ನಾವು ತಂಡವನ್ನು ರಚಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...