Homeಮುಖಪುಟಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

- Advertisement -
- Advertisement -

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ ಅರ್ನವ್ ಖೈರೆ, ಉಪನಗರ ರೈಲಿನ ಫಸ್ಟ್ ಕ್ಲಾಸ್ ಪಾಸ್ ಅವಧಿ ಮುಗಿದ ಹಿನ್ನೆಲೆ, ಸೆಕೆಂಡ್‌ ಕ್ಲಾಸ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದ. ಕಾಲೇಜಿಗೆ ತೆರಳುವ ಸಲುವಾಗಿ ಆತ ಕಲ್ಯಾಣ್‌ನಲ್ಲಿ ರೈಲು ಹತ್ತಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಅರ್ನವ್ ತಂದೆ ಜಿತೇಂದ್ರ ಖೈರೆ ಅವರು ಕಲ್ಯಾಣ್‌ನ ಕೊಲೆಸ್ವಾಡಿ (ಈಸ್ಟ್) ಪೊಲೀಸ್ ಠಾಣೆಗ ನೀಡಿದ ದೂರಿನಲ್ಲಿ, ರೈಲಿನಲ್ಲಿ ಜನಸಂದಣಿಯಿಂದಾಗಿ ಆರ್ನವ್ ಆಕಸ್ಮಿಕವಾಗಿ ಒಬ್ಬರು ವ್ಯಕ್ತಿಯ ಮೇಲೆ ಮುಗ್ಗರಿಸಿ ಬಿದ್ದಿದ್ದ. ಈ ವೇಳೆ ಹಿಂದಿಯಲ್ಲಿ, ‘ದಯವಿಟ್ಟು ಸ್ವಲ್ಪ ಮುಂದೆ ನಡೆಯಿರಿ’ ಎಂದು ಹೇಳಿದ್ದ. ಅರ್ನವ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರಾದ ಕೆಲ ಪುರುಷರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, “ನೀನು ಮರಾಠಿಯಲ್ಲಿ ಏಕೆ ಮಾತನಾಡ್ತಿಲ್ಲ? ತನ್ನ ಸ್ವಂತ ಭಾಷೆ ಮಾತನಾಡಲು ನಿನಗೆ ನಾಚಿಕೆಯಾಗ್ತಿದೆಯಾ?” ಎಂದು ಸಹ ಪ್ರಯಾಣಿಕರು ಕೇಳಿದ್ದಾರೆ. “ನಾನು ಮರಾಠಿಯವನೇ” ಎಂದರೂ ಅವರು ಆರ್ನವ್ ಜೊತೆ ವಾಗ್ವಾದ ನಡೆಸಿ ಥಳಿಸಿದ್ದಾರೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ಹೇಳಿದ್ದಾರೆ.

“ಸಹ ಪ್ರಯಾಣಿಕರು ತನ್ನ ಮಾಸ್ಕ್‌ ಹರಿದು ಹಾಕಿದ್ದರು. ಇದರಿಂದ ನಾನು ತುಂಬಾ ಭಯಭೀತನಾಗಿದ್ದೆ, ನಡುಗಿದ್ದೆ. ಘಟನೆಯ ನಂತರ ನಾನು ಥಾಣೆ ನಿಲ್ದಾಣದಲ್ಲಿ ಇಳಿದು, ಮತ್ತೊಂದು ರೈಲು ಹತ್ತಿ ಮುಳುಂದ್ ತಲುಪಿದೆ” ಎಂದು ಆರ್ನವ್ ಹೇಳಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ವಿವರಿಸಿದ್ದಾರೆ.

ಘಟನೆಯ ನಂತರ ಆರ್ನವ್ ಮಾನಸಿಕವಾಗಿ ನೊಂದಿದ್ದ. ಕಾಲೇಜಿನಲ್ಲಿ, ಪ್ರಾಯೋಗಿಕ ಪರೀಕ್ಷೆ ಮುಗಿದ ನಂತರ, ತನ್ನ ತಂದೆಗೆ ಕರೆ ಮಾಡಿ, “ಅಪ್ಪಾ, ನನಗೆ ಹುಷಾರಿಲ್ಲ…” ಎಂದು ಹೇಳಿದ್ದ. ಮಧ್ಯಾಹ್ನ, ಮನೆಗೆ ತಲುಪಿದ ನಂತರ, ಮತ್ತೆ ತನ್ನ ತಂದೆಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ತಿಳಿಸಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಮಗ ರೈಲಿನಲ್ಲಿ ನಡೆದ ಘಟನೆಯ ಬಗ್ಗೆ ತಿಳಿಸಿದಾಗ ನಾನು ಆತನಿಗೆ ಧೈರ್ಯ ತುಂಬಿ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದೆ. ಆದರೆ, ಮಂಗಳವಾರ (ನವೆಂಬರ್ 18) ಸಂಜೆ ಮನೆಗೆ ತಲುಪಿದಾಗ ಬಾಗಿಲು ಲಾಕ್ ಆಗಿತ್ತು. ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಂಬ್ಯುಲೆನ್ಸ್‌ಗೆ ಕರೆಸಿ ರುಕ್ಮಿಣಿಬಾಯಿ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ, ರಾತ್ರಿ 9.05ಕ್ಕೆ ಅರ್ನವ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ.

ರೈಲಿನಲ್ಲಿ ಆದ ಘಟನೆಯಿಂದ ಮಾನಸಿಕವಾಗಿ ನೊಂದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ. ಅವರು ಮಗನಿಗೆ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕಲ್ಯಾಣ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕಲ್ಯಾಣ್‌ಜಿ ಘೇಟೆ ಮಾತನಾಡಿ, “ಪ್ರಕರಣದ ತನಿಖೆಗಾಗಿ ನಾವು ತಂಡವನ್ನು ರಚಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...