Homeಮುಖಪುಟಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

- Advertisement -
- Advertisement -

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ ಅರ್ನವ್ ಖೈರೆ, ಉಪನಗರ ರೈಲಿನ ಫಸ್ಟ್ ಕ್ಲಾಸ್ ಪಾಸ್ ಅವಧಿ ಮುಗಿದ ಹಿನ್ನೆಲೆ, ಸೆಕೆಂಡ್‌ ಕ್ಲಾಸ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದ. ಕಾಲೇಜಿಗೆ ತೆರಳುವ ಸಲುವಾಗಿ ಆತ ಕಲ್ಯಾಣ್‌ನಲ್ಲಿ ರೈಲು ಹತ್ತಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಅರ್ನವ್ ತಂದೆ ಜಿತೇಂದ್ರ ಖೈರೆ ಅವರು ಕಲ್ಯಾಣ್‌ನ ಕೊಲೆಸ್ವಾಡಿ (ಈಸ್ಟ್) ಪೊಲೀಸ್ ಠಾಣೆಗ ನೀಡಿದ ದೂರಿನಲ್ಲಿ, ರೈಲಿನಲ್ಲಿ ಜನಸಂದಣಿಯಿಂದಾಗಿ ಆರ್ನವ್ ಆಕಸ್ಮಿಕವಾಗಿ ಒಬ್ಬರು ವ್ಯಕ್ತಿಯ ಮೇಲೆ ಮುಗ್ಗರಿಸಿ ಬಿದ್ದಿದ್ದ. ಈ ವೇಳೆ ಹಿಂದಿಯಲ್ಲಿ, ‘ದಯವಿಟ್ಟು ಸ್ವಲ್ಪ ಮುಂದೆ ನಡೆಯಿರಿ’ ಎಂದು ಹೇಳಿದ್ದ. ಅರ್ನವ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರಾದ ಕೆಲ ಪುರುಷರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, “ನೀನು ಮರಾಠಿಯಲ್ಲಿ ಏಕೆ ಮಾತನಾಡ್ತಿಲ್ಲ? ತನ್ನ ಸ್ವಂತ ಭಾಷೆ ಮಾತನಾಡಲು ನಿನಗೆ ನಾಚಿಕೆಯಾಗ್ತಿದೆಯಾ?” ಎಂದು ಸಹ ಪ್ರಯಾಣಿಕರು ಕೇಳಿದ್ದಾರೆ. “ನಾನು ಮರಾಠಿಯವನೇ” ಎಂದರೂ ಅವರು ಆರ್ನವ್ ಜೊತೆ ವಾಗ್ವಾದ ನಡೆಸಿ ಥಳಿಸಿದ್ದಾರೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ಹೇಳಿದ್ದಾರೆ.

“ಸಹ ಪ್ರಯಾಣಿಕರು ತನ್ನ ಮಾಸ್ಕ್‌ ಹರಿದು ಹಾಕಿದ್ದರು. ಇದರಿಂದ ನಾನು ತುಂಬಾ ಭಯಭೀತನಾಗಿದ್ದೆ, ನಡುಗಿದ್ದೆ. ಘಟನೆಯ ನಂತರ ನಾನು ಥಾಣೆ ನಿಲ್ದಾಣದಲ್ಲಿ ಇಳಿದು, ಮತ್ತೊಂದು ರೈಲು ಹತ್ತಿ ಮುಳುಂದ್ ತಲುಪಿದೆ” ಎಂದು ಆರ್ನವ್ ಹೇಳಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ವಿವರಿಸಿದ್ದಾರೆ.

ಘಟನೆಯ ನಂತರ ಆರ್ನವ್ ಮಾನಸಿಕವಾಗಿ ನೊಂದಿದ್ದ. ಕಾಲೇಜಿನಲ್ಲಿ, ಪ್ರಾಯೋಗಿಕ ಪರೀಕ್ಷೆ ಮುಗಿದ ನಂತರ, ತನ್ನ ತಂದೆಗೆ ಕರೆ ಮಾಡಿ, “ಅಪ್ಪಾ, ನನಗೆ ಹುಷಾರಿಲ್ಲ…” ಎಂದು ಹೇಳಿದ್ದ. ಮಧ್ಯಾಹ್ನ, ಮನೆಗೆ ತಲುಪಿದ ನಂತರ, ಮತ್ತೆ ತನ್ನ ತಂದೆಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ತಿಳಿಸಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಮಗ ರೈಲಿನಲ್ಲಿ ನಡೆದ ಘಟನೆಯ ಬಗ್ಗೆ ತಿಳಿಸಿದಾಗ ನಾನು ಆತನಿಗೆ ಧೈರ್ಯ ತುಂಬಿ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದೆ. ಆದರೆ, ಮಂಗಳವಾರ (ನವೆಂಬರ್ 18) ಸಂಜೆ ಮನೆಗೆ ತಲುಪಿದಾಗ ಬಾಗಿಲು ಲಾಕ್ ಆಗಿತ್ತು. ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಂಬ್ಯುಲೆನ್ಸ್‌ಗೆ ಕರೆಸಿ ರುಕ್ಮಿಣಿಬಾಯಿ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ, ರಾತ್ರಿ 9.05ಕ್ಕೆ ಅರ್ನವ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ.

ರೈಲಿನಲ್ಲಿ ಆದ ಘಟನೆಯಿಂದ ಮಾನಸಿಕವಾಗಿ ನೊಂದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ. ಅವರು ಮಗನಿಗೆ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕಲ್ಯಾಣ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕಲ್ಯಾಣ್‌ಜಿ ಘೇಟೆ ಮಾತನಾಡಿ, “ಪ್ರಕರಣದ ತನಿಖೆಗಾಗಿ ನಾವು ತಂಡವನ್ನು ರಚಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...