Homeಮುಖಪುಟಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

- Advertisement -
- Advertisement -

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ ಅರ್ನವ್ ಖೈರೆ, ಉಪನಗರ ರೈಲಿನ ಫಸ್ಟ್ ಕ್ಲಾಸ್ ಪಾಸ್ ಅವಧಿ ಮುಗಿದ ಹಿನ್ನೆಲೆ, ಸೆಕೆಂಡ್‌ ಕ್ಲಾಸ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದ. ಕಾಲೇಜಿಗೆ ತೆರಳುವ ಸಲುವಾಗಿ ಆತ ಕಲ್ಯಾಣ್‌ನಲ್ಲಿ ರೈಲು ಹತ್ತಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಅರ್ನವ್ ತಂದೆ ಜಿತೇಂದ್ರ ಖೈರೆ ಅವರು ಕಲ್ಯಾಣ್‌ನ ಕೊಲೆಸ್ವಾಡಿ (ಈಸ್ಟ್) ಪೊಲೀಸ್ ಠಾಣೆಗ ನೀಡಿದ ದೂರಿನಲ್ಲಿ, ರೈಲಿನಲ್ಲಿ ಜನಸಂದಣಿಯಿಂದಾಗಿ ಆರ್ನವ್ ಆಕಸ್ಮಿಕವಾಗಿ ಒಬ್ಬರು ವ್ಯಕ್ತಿಯ ಮೇಲೆ ಮುಗ್ಗರಿಸಿ ಬಿದ್ದಿದ್ದ. ಈ ವೇಳೆ ಹಿಂದಿಯಲ್ಲಿ, ‘ದಯವಿಟ್ಟು ಸ್ವಲ್ಪ ಮುಂದೆ ನಡೆಯಿರಿ’ ಎಂದು ಹೇಳಿದ್ದ. ಅರ್ನವ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರಾದ ಕೆಲ ಪುರುಷರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, “ನೀನು ಮರಾಠಿಯಲ್ಲಿ ಏಕೆ ಮಾತನಾಡ್ತಿಲ್ಲ? ತನ್ನ ಸ್ವಂತ ಭಾಷೆ ಮಾತನಾಡಲು ನಿನಗೆ ನಾಚಿಕೆಯಾಗ್ತಿದೆಯಾ?” ಎಂದು ಸಹ ಪ್ರಯಾಣಿಕರು ಕೇಳಿದ್ದಾರೆ. “ನಾನು ಮರಾಠಿಯವನೇ” ಎಂದರೂ ಅವರು ಆರ್ನವ್ ಜೊತೆ ವಾಗ್ವಾದ ನಡೆಸಿ ಥಳಿಸಿದ್ದಾರೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ಹೇಳಿದ್ದಾರೆ.

“ಸಹ ಪ್ರಯಾಣಿಕರು ತನ್ನ ಮಾಸ್ಕ್‌ ಹರಿದು ಹಾಕಿದ್ದರು. ಇದರಿಂದ ನಾನು ತುಂಬಾ ಭಯಭೀತನಾಗಿದ್ದೆ, ನಡುಗಿದ್ದೆ. ಘಟನೆಯ ನಂತರ ನಾನು ಥಾಣೆ ನಿಲ್ದಾಣದಲ್ಲಿ ಇಳಿದು, ಮತ್ತೊಂದು ರೈಲು ಹತ್ತಿ ಮುಳುಂದ್ ತಲುಪಿದೆ” ಎಂದು ಆರ್ನವ್ ಹೇಳಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ವಿವರಿಸಿದ್ದಾರೆ.

ಘಟನೆಯ ನಂತರ ಆರ್ನವ್ ಮಾನಸಿಕವಾಗಿ ನೊಂದಿದ್ದ. ಕಾಲೇಜಿನಲ್ಲಿ, ಪ್ರಾಯೋಗಿಕ ಪರೀಕ್ಷೆ ಮುಗಿದ ನಂತರ, ತನ್ನ ತಂದೆಗೆ ಕರೆ ಮಾಡಿ, “ಅಪ್ಪಾ, ನನಗೆ ಹುಷಾರಿಲ್ಲ…” ಎಂದು ಹೇಳಿದ್ದ. ಮಧ್ಯಾಹ್ನ, ಮನೆಗೆ ತಲುಪಿದ ನಂತರ, ಮತ್ತೆ ತನ್ನ ತಂದೆಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ತಿಳಿಸಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಮಗ ರೈಲಿನಲ್ಲಿ ನಡೆದ ಘಟನೆಯ ಬಗ್ಗೆ ತಿಳಿಸಿದಾಗ ನಾನು ಆತನಿಗೆ ಧೈರ್ಯ ತುಂಬಿ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದೆ. ಆದರೆ, ಮಂಗಳವಾರ (ನವೆಂಬರ್ 18) ಸಂಜೆ ಮನೆಗೆ ತಲುಪಿದಾಗ ಬಾಗಿಲು ಲಾಕ್ ಆಗಿತ್ತು. ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಂಬ್ಯುಲೆನ್ಸ್‌ಗೆ ಕರೆಸಿ ರುಕ್ಮಿಣಿಬಾಯಿ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ, ರಾತ್ರಿ 9.05ಕ್ಕೆ ಅರ್ನವ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ.

ರೈಲಿನಲ್ಲಿ ಆದ ಘಟನೆಯಿಂದ ಮಾನಸಿಕವಾಗಿ ನೊಂದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ. ಅವರು ಮಗನಿಗೆ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕಲ್ಯಾಣ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕಲ್ಯಾಣ್‌ಜಿ ಘೇಟೆ ಮಾತನಾಡಿ, “ಪ್ರಕರಣದ ತನಿಖೆಗಾಗಿ ನಾವು ತಂಡವನ್ನು ರಚಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...