Homeಮುಖಪುಟಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

- Advertisement -
- Advertisement -

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ ಅರ್ನವ್ ಖೈರೆ, ಉಪನಗರ ರೈಲಿನ ಫಸ್ಟ್ ಕ್ಲಾಸ್ ಪಾಸ್ ಅವಧಿ ಮುಗಿದ ಹಿನ್ನೆಲೆ, ಸೆಕೆಂಡ್‌ ಕ್ಲಾಸ್ ಕಂಪಾರ್ಟ್‌ಮೆಂಟ್‌ನಲ್ಲಿ ಪ್ರಯಾಣಿಸುತ್ತಿದ್ದ. ಕಾಲೇಜಿಗೆ ತೆರಳುವ ಸಲುವಾಗಿ ಆತ ಕಲ್ಯಾಣ್‌ನಲ್ಲಿ ರೈಲು ಹತ್ತಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಅರ್ನವ್ ತಂದೆ ಜಿತೇಂದ್ರ ಖೈರೆ ಅವರು ಕಲ್ಯಾಣ್‌ನ ಕೊಲೆಸ್ವಾಡಿ (ಈಸ್ಟ್) ಪೊಲೀಸ್ ಠಾಣೆಗ ನೀಡಿದ ದೂರಿನಲ್ಲಿ, ರೈಲಿನಲ್ಲಿ ಜನಸಂದಣಿಯಿಂದಾಗಿ ಆರ್ನವ್ ಆಕಸ್ಮಿಕವಾಗಿ ಒಬ್ಬರು ವ್ಯಕ್ತಿಯ ಮೇಲೆ ಮುಗ್ಗರಿಸಿ ಬಿದ್ದಿದ್ದ. ಈ ವೇಳೆ ಹಿಂದಿಯಲ್ಲಿ, ‘ದಯವಿಟ್ಟು ಸ್ವಲ್ಪ ಮುಂದೆ ನಡೆಯಿರಿ’ ಎಂದು ಹೇಳಿದ್ದ. ಅರ್ನವ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರಾದ ಕೆಲ ಪುರುಷರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, “ನೀನು ಮರಾಠಿಯಲ್ಲಿ ಏಕೆ ಮಾತನಾಡ್ತಿಲ್ಲ? ತನ್ನ ಸ್ವಂತ ಭಾಷೆ ಮಾತನಾಡಲು ನಿನಗೆ ನಾಚಿಕೆಯಾಗ್ತಿದೆಯಾ?” ಎಂದು ಸಹ ಪ್ರಯಾಣಿಕರು ಕೇಳಿದ್ದಾರೆ. “ನಾನು ಮರಾಠಿಯವನೇ” ಎಂದರೂ ಅವರು ಆರ್ನವ್ ಜೊತೆ ವಾಗ್ವಾದ ನಡೆಸಿ ಥಳಿಸಿದ್ದಾರೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ಹೇಳಿದ್ದಾರೆ.

“ಸಹ ಪ್ರಯಾಣಿಕರು ತನ್ನ ಮಾಸ್ಕ್‌ ಹರಿದು ಹಾಕಿದ್ದರು. ಇದರಿಂದ ನಾನು ತುಂಬಾ ಭಯಭೀತನಾಗಿದ್ದೆ, ನಡುಗಿದ್ದೆ. ಘಟನೆಯ ನಂತರ ನಾನು ಥಾಣೆ ನಿಲ್ದಾಣದಲ್ಲಿ ಇಳಿದು, ಮತ್ತೊಂದು ರೈಲು ಹತ್ತಿ ಮುಳುಂದ್ ತಲುಪಿದೆ” ಎಂದು ಆರ್ನವ್ ಹೇಳಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ದೂರಿನಲ್ಲಿ ವಿವರಿಸಿದ್ದಾರೆ.

ಘಟನೆಯ ನಂತರ ಆರ್ನವ್ ಮಾನಸಿಕವಾಗಿ ನೊಂದಿದ್ದ. ಕಾಲೇಜಿನಲ್ಲಿ, ಪ್ರಾಯೋಗಿಕ ಪರೀಕ್ಷೆ ಮುಗಿದ ನಂತರ, ತನ್ನ ತಂದೆಗೆ ಕರೆ ಮಾಡಿ, “ಅಪ್ಪಾ, ನನಗೆ ಹುಷಾರಿಲ್ಲ…” ಎಂದು ಹೇಳಿದ್ದ. ಮಧ್ಯಾಹ್ನ, ಮನೆಗೆ ತಲುಪಿದ ನಂತರ, ಮತ್ತೆ ತನ್ನ ತಂದೆಗೆ ಕರೆ ಮಾಡಿ ಇಡೀ ಘಟನೆಯ ಬಗ್ಗೆ ತಿಳಿಸಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಮಗ ರೈಲಿನಲ್ಲಿ ನಡೆದ ಘಟನೆಯ ಬಗ್ಗೆ ತಿಳಿಸಿದಾಗ ನಾನು ಆತನಿಗೆ ಧೈರ್ಯ ತುಂಬಿ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದೆ. ಆದರೆ, ಮಂಗಳವಾರ (ನವೆಂಬರ್ 18) ಸಂಜೆ ಮನೆಗೆ ತಲುಪಿದಾಗ ಬಾಗಿಲು ಲಾಕ್ ಆಗಿತ್ತು. ನೆರೆಹೊರೆಯವರ ಸಹಾಯದಿಂದ ಬಾಗಿಲು ತೆರೆದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಂಬ್ಯುಲೆನ್ಸ್‌ಗೆ ಕರೆಸಿ ರುಕ್ಮಿಣಿಬಾಯಿ ಆಸ್ಪತ್ರೆಗೆ ಕರೆದೊಯ್ದೆವು. ಅಲ್ಲಿ, ರಾತ್ರಿ 9.05ಕ್ಕೆ ಅರ್ನವ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ.

ರೈಲಿನಲ್ಲಿ ಆದ ಘಟನೆಯಿಂದ ಮಾನಸಿಕವಾಗಿ ನೊಂದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಜಿತೇಂದ್ರ ಖೈರೆ ಹೇಳಿದ್ದಾರೆ. ಅವರು ಮಗನಿಗೆ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕಲ್ಯಾಣ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕಲ್ಯಾಣ್‌ಜಿ ಘೇಟೆ ಮಾತನಾಡಿ, “ಪ್ರಕರಣದ ತನಿಖೆಗಾಗಿ ನಾವು ತಂಡವನ್ನು ರಚಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...