Homeಮುಖಪುಟಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

- Advertisement -
- Advertisement -

1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ ಶಿಕ್ಷೆಯನ್ನು ಪ್ರಕಟಿಸಿದೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಮುಂಬರುವ ಚುನಾವಣೆಗೆ ಕೋನಸೀಮಾ ಜಿಲ್ಲೆಯ ಮಂದಪೇಟಾ ಕ್ಷೇತ್ರದ ವೈಎಸ್‌ಆರ್‌ಸಿಪಿ ಅಭ್ಯರ್ಥಿಯಾಗಿದ್ದಾರೆ. ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತ ಓರ್ವ ವ್ಯಕ್ತಿ ಈಗಾಗಲೇ ಮೃತಪಟ್ಟಿದ್ದಾರೆ. ಇತರ ಎಲ್ಲಾ ಆರೋಪಿಗಳಿಗೆ ತಲಾ 42 ಸಾವಿರ ರೂ. ದಂಡ ಮತ್ತು 18 ತಿಂಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.

ತ್ರಿಮೂರ್ತಿಲು ಅವರು 1996ರಲ್ಲಿ ಅವಿಭಜಿತ ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಾಪುರದ ಸ್ವತಂತ್ರ ಶಾಸಕರಾಗಿದ್ದಾಗ ಬೆಂಬಲಿಗರೊಂದಿಗೆ ಸೇರಿ, ಕೋಟಿ ಚಿನ್ನರಾಜು, ದಡಾಲ ವೆಂಕಟ ರತ್ನಂ, ಚಳ್ಳಪುಡಿ ಪಟ್ಟಾಭಿರಾಮಯ್ಯ, ಕಣಿಕೆಲ್ಲ ಗಣಪತಿ ಮತ್ತು ಪುವ್ವಳ ವೆಂಕಟ ರಮಣ ಅವರನ್ನು 1994ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ಥಳಿಸಿದ್ದಾರೆ. ಸಂತ್ರಸ್ತರು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಪೋಲಿಂಗ್ ಏಜೆಂಟ್‌ಗಳಾಗಿ ಕೆಲಸ ಮಾಡಿದ್ದರು. ಇದೇ ಹಗೆತನದಿಂದ ಥಳಿಸಲಾಗಿದೆ.

ಹಲ್ಲೆಯನ್ನು ಖಂಡಿಸಿ ಈ ವೇಳೆ ಭಾರೀ ಪ್ರತಿಭಟನೆಗಳು ನಡೆದಿದ್ದವು, ಪೂರ್ವ ಗೋದಾವರಿ ಜಿಲ್ಲೆಯ ದ್ರಾಕ್ಷಾರಾಮಂ ಪೊಲೀಸರು ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡು ಆರೋಪಪಟ್ಟಿ ಸಲ್ಲಿಸಿದ್ದರು. ಜನವರಿ 7, 1996ರಂದು ತ್ರಿಮೂರ್ತಿಲು ಸೇರಿದಂತೆ ಆರೋಪಿಗಳನ್ನು ಬಂಧಿಸಲಾಯಿತು, ಆ ಬಳಿಕ ಆಂಧ್ರಪ್ರದೇಶದ ಹೈಕೋರ್ಟ್ ಬಂಧನಕ್ಕೆ ತಡೆ ನೀಡಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ-  ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 1996ರಿಂದ ಪ್ರಕರಣವು ಕೋರ್ಟ್‌ ಅಂಗಳದಲ್ಲಿತ್ತು. 2021ರಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ದೂರುದಾರರ ಎಸ್‌ಸಿ ಗುರುತಿನ ಪುರಾವೆಯಾಗಿ ಜಾತಿ ಪ್ರಮಾಣಪತ್ರಗಳನ್ನು ನೀಡಿದಾಗ ವಿಶಾಖಪಟ್ಟಣಂ ವಿಶೇಷ ನ್ಯಾಯಾಲಯವು ಅದನ್ನು ಪುರಾವೆಯಾಗಿ ಪರಿಗಣಿಸಲು ನಿರಾಕರಿಸಿತ್ತು. ಇದುವರೆಗೂ ಪೊಲೀಸರು ಜಾತಿ ಪ್ರಮಾಣ ಪತ್ರಗಳನ್ನು ದೋಷಾರೋಪ ಪಟ್ಟಿಗೆ ಲಗತ್ತಿಸಿರಲಿಲ್ಲ ಎಂದು ಕೋರ್ಟ್‌ ಗಮನಿಸಿತ್ತು. ಫೆಬ್ರವರಿ 2024ರಲ್ಲಿ ಸಂತ್ರಸ್ತರ ಜಾತಿ ಪ್ರಮಾಣಪತ್ರಗಳನ್ನು ಪರಿಗಣನೆಗೆ ತೆಗೆದುಕೊಳ್ಳದಿದ್ದಕ್ಕಾಗಿ ಮತ್ತು ಪ್ರಕರಣದಲ್ಲಿ ಅವರ ಸಾಕ್ಷ್ಯವನ್ನು ಕೆಳ ನ್ಯಾಯಾಲಯ ಪರಿಗಣಿಸಿಲ್ಲ ಎಂದು ಹೈಕೋರ್ಟ್‌ ಗಮನಿಸಿತ್ತು. ಇದನ್ನು ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಕೋರ್ಟ್ ಹೇಳಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...