Homeಮುಖಪುಟಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

- Advertisement -
- Advertisement -

1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ ಶಿಕ್ಷೆಯನ್ನು ಪ್ರಕಟಿಸಿದೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಮುಂಬರುವ ಚುನಾವಣೆಗೆ ಕೋನಸೀಮಾ ಜಿಲ್ಲೆಯ ಮಂದಪೇಟಾ ಕ್ಷೇತ್ರದ ವೈಎಸ್‌ಆರ್‌ಸಿಪಿ ಅಭ್ಯರ್ಥಿಯಾಗಿದ್ದಾರೆ. ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತ ಓರ್ವ ವ್ಯಕ್ತಿ ಈಗಾಗಲೇ ಮೃತಪಟ್ಟಿದ್ದಾರೆ. ಇತರ ಎಲ್ಲಾ ಆರೋಪಿಗಳಿಗೆ ತಲಾ 42 ಸಾವಿರ ರೂ. ದಂಡ ಮತ್ತು 18 ತಿಂಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.

ತ್ರಿಮೂರ್ತಿಲು ಅವರು 1996ರಲ್ಲಿ ಅವಿಭಜಿತ ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಾಪುರದ ಸ್ವತಂತ್ರ ಶಾಸಕರಾಗಿದ್ದಾಗ ಬೆಂಬಲಿಗರೊಂದಿಗೆ ಸೇರಿ, ಕೋಟಿ ಚಿನ್ನರಾಜು, ದಡಾಲ ವೆಂಕಟ ರತ್ನಂ, ಚಳ್ಳಪುಡಿ ಪಟ್ಟಾಭಿರಾಮಯ್ಯ, ಕಣಿಕೆಲ್ಲ ಗಣಪತಿ ಮತ್ತು ಪುವ್ವಳ ವೆಂಕಟ ರಮಣ ಅವರನ್ನು 1994ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ಥಳಿಸಿದ್ದಾರೆ. ಸಂತ್ರಸ್ತರು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಪೋಲಿಂಗ್ ಏಜೆಂಟ್‌ಗಳಾಗಿ ಕೆಲಸ ಮಾಡಿದ್ದರು. ಇದೇ ಹಗೆತನದಿಂದ ಥಳಿಸಲಾಗಿದೆ.

ಹಲ್ಲೆಯನ್ನು ಖಂಡಿಸಿ ಈ ವೇಳೆ ಭಾರೀ ಪ್ರತಿಭಟನೆಗಳು ನಡೆದಿದ್ದವು, ಪೂರ್ವ ಗೋದಾವರಿ ಜಿಲ್ಲೆಯ ದ್ರಾಕ್ಷಾರಾಮಂ ಪೊಲೀಸರು ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡು ಆರೋಪಪಟ್ಟಿ ಸಲ್ಲಿಸಿದ್ದರು. ಜನವರಿ 7, 1996ರಂದು ತ್ರಿಮೂರ್ತಿಲು ಸೇರಿದಂತೆ ಆರೋಪಿಗಳನ್ನು ಬಂಧಿಸಲಾಯಿತು, ಆ ಬಳಿಕ ಆಂಧ್ರಪ್ರದೇಶದ ಹೈಕೋರ್ಟ್ ಬಂಧನಕ್ಕೆ ತಡೆ ನೀಡಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ-  ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 1996ರಿಂದ ಪ್ರಕರಣವು ಕೋರ್ಟ್‌ ಅಂಗಳದಲ್ಲಿತ್ತು. 2021ರಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ದೂರುದಾರರ ಎಸ್‌ಸಿ ಗುರುತಿನ ಪುರಾವೆಯಾಗಿ ಜಾತಿ ಪ್ರಮಾಣಪತ್ರಗಳನ್ನು ನೀಡಿದಾಗ ವಿಶಾಖಪಟ್ಟಣಂ ವಿಶೇಷ ನ್ಯಾಯಾಲಯವು ಅದನ್ನು ಪುರಾವೆಯಾಗಿ ಪರಿಗಣಿಸಲು ನಿರಾಕರಿಸಿತ್ತು. ಇದುವರೆಗೂ ಪೊಲೀಸರು ಜಾತಿ ಪ್ರಮಾಣ ಪತ್ರಗಳನ್ನು ದೋಷಾರೋಪ ಪಟ್ಟಿಗೆ ಲಗತ್ತಿಸಿರಲಿಲ್ಲ ಎಂದು ಕೋರ್ಟ್‌ ಗಮನಿಸಿತ್ತು. ಫೆಬ್ರವರಿ 2024ರಲ್ಲಿ ಸಂತ್ರಸ್ತರ ಜಾತಿ ಪ್ರಮಾಣಪತ್ರಗಳನ್ನು ಪರಿಗಣನೆಗೆ ತೆಗೆದುಕೊಳ್ಳದಿದ್ದಕ್ಕಾಗಿ ಮತ್ತು ಪ್ರಕರಣದಲ್ಲಿ ಅವರ ಸಾಕ್ಷ್ಯವನ್ನು ಕೆಳ ನ್ಯಾಯಾಲಯ ಪರಿಗಣಿಸಿಲ್ಲ ಎಂದು ಹೈಕೋರ್ಟ್‌ ಗಮನಿಸಿತ್ತು. ಇದನ್ನು ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಕೋರ್ಟ್ ಹೇಳಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...