Homeಮುಖಪುಟಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

- Advertisement -
- Advertisement -

1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ ಶಿಕ್ಷೆಯನ್ನು ಪ್ರಕಟಿಸಿದೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಮುಂಬರುವ ಚುನಾವಣೆಗೆ ಕೋನಸೀಮಾ ಜಿಲ್ಲೆಯ ಮಂದಪೇಟಾ ಕ್ಷೇತ್ರದ ವೈಎಸ್‌ಆರ್‌ಸಿಪಿ ಅಭ್ಯರ್ಥಿಯಾಗಿದ್ದಾರೆ. ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತ ಓರ್ವ ವ್ಯಕ್ತಿ ಈಗಾಗಲೇ ಮೃತಪಟ್ಟಿದ್ದಾರೆ. ಇತರ ಎಲ್ಲಾ ಆರೋಪಿಗಳಿಗೆ ತಲಾ 42 ಸಾವಿರ ರೂ. ದಂಡ ಮತ್ತು 18 ತಿಂಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.

ತ್ರಿಮೂರ್ತಿಲು ಅವರು 1996ರಲ್ಲಿ ಅವಿಭಜಿತ ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಾಪುರದ ಸ್ವತಂತ್ರ ಶಾಸಕರಾಗಿದ್ದಾಗ ಬೆಂಬಲಿಗರೊಂದಿಗೆ ಸೇರಿ, ಕೋಟಿ ಚಿನ್ನರಾಜು, ದಡಾಲ ವೆಂಕಟ ರತ್ನಂ, ಚಳ್ಳಪುಡಿ ಪಟ್ಟಾಭಿರಾಮಯ್ಯ, ಕಣಿಕೆಲ್ಲ ಗಣಪತಿ ಮತ್ತು ಪುವ್ವಳ ವೆಂಕಟ ರಮಣ ಅವರನ್ನು 1994ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ಥಳಿಸಿದ್ದಾರೆ. ಸಂತ್ರಸ್ತರು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಪೋಲಿಂಗ್ ಏಜೆಂಟ್‌ಗಳಾಗಿ ಕೆಲಸ ಮಾಡಿದ್ದರು. ಇದೇ ಹಗೆತನದಿಂದ ಥಳಿಸಲಾಗಿದೆ.

ಹಲ್ಲೆಯನ್ನು ಖಂಡಿಸಿ ಈ ವೇಳೆ ಭಾರೀ ಪ್ರತಿಭಟನೆಗಳು ನಡೆದಿದ್ದವು, ಪೂರ್ವ ಗೋದಾವರಿ ಜಿಲ್ಲೆಯ ದ್ರಾಕ್ಷಾರಾಮಂ ಪೊಲೀಸರು ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡು ಆರೋಪಪಟ್ಟಿ ಸಲ್ಲಿಸಿದ್ದರು. ಜನವರಿ 7, 1996ರಂದು ತ್ರಿಮೂರ್ತಿಲು ಸೇರಿದಂತೆ ಆರೋಪಿಗಳನ್ನು ಬಂಧಿಸಲಾಯಿತು, ಆ ಬಳಿಕ ಆಂಧ್ರಪ್ರದೇಶದ ಹೈಕೋರ್ಟ್ ಬಂಧನಕ್ಕೆ ತಡೆ ನೀಡಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ-  ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 1996ರಿಂದ ಪ್ರಕರಣವು ಕೋರ್ಟ್‌ ಅಂಗಳದಲ್ಲಿತ್ತು. 2021ರಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ದೂರುದಾರರ ಎಸ್‌ಸಿ ಗುರುತಿನ ಪುರಾವೆಯಾಗಿ ಜಾತಿ ಪ್ರಮಾಣಪತ್ರಗಳನ್ನು ನೀಡಿದಾಗ ವಿಶಾಖಪಟ್ಟಣಂ ವಿಶೇಷ ನ್ಯಾಯಾಲಯವು ಅದನ್ನು ಪುರಾವೆಯಾಗಿ ಪರಿಗಣಿಸಲು ನಿರಾಕರಿಸಿತ್ತು. ಇದುವರೆಗೂ ಪೊಲೀಸರು ಜಾತಿ ಪ್ರಮಾಣ ಪತ್ರಗಳನ್ನು ದೋಷಾರೋಪ ಪಟ್ಟಿಗೆ ಲಗತ್ತಿಸಿರಲಿಲ್ಲ ಎಂದು ಕೋರ್ಟ್‌ ಗಮನಿಸಿತ್ತು. ಫೆಬ್ರವರಿ 2024ರಲ್ಲಿ ಸಂತ್ರಸ್ತರ ಜಾತಿ ಪ್ರಮಾಣಪತ್ರಗಳನ್ನು ಪರಿಗಣನೆಗೆ ತೆಗೆದುಕೊಳ್ಳದಿದ್ದಕ್ಕಾಗಿ ಮತ್ತು ಪ್ರಕರಣದಲ್ಲಿ ಅವರ ಸಾಕ್ಷ್ಯವನ್ನು ಕೆಳ ನ್ಯಾಯಾಲಯ ಪರಿಗಣಿಸಿಲ್ಲ ಎಂದು ಹೈಕೋರ್ಟ್‌ ಗಮನಿಸಿತ್ತು. ಇದನ್ನು ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಕೋರ್ಟ್ ಹೇಳಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...