Homeಮುಖಪುಟವಿಧಾನಸಭೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

ವಿಧಾನಸಭೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

- Advertisement -
- Advertisement -

ದೇಶದ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಜೂನ್. 23) ಪ್ರಕಟಗೊಂಡಿದೆ.

ಗುಜರಾತ್‌ನ ಕಾಡಿ ಮತ್ತು ವಿಸಾವದರ್, ಕೇರಳದ ನಿಲಂಬೂರ್, ಪಶ್ಚಿಮ ಬಂಗಾಳದ ಕಾಳಿಗಂಜ್, ಮತ್ತು ಪಂಜಾಬ್‌ನ ಲುದಿಯಾನ ಪಶ್ಚಿಮ ಕ್ಷೇತ್ರಗಳಿಗೆ ಜೂನ್ 19ರಂದು ಮತದಾನ ನಡೆದಿತ್ತು.

ಕೇರಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿ ಆರ್ಯಡನ್ ಶೌಕತ್ ಅವರು 11, 077 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಶೌಕತ್ ಅವರು 77,737 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಆಡಳಿತರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಸಿಪಿಐ(ಎಂ) ಅಭ್ಯರ್ಥಿ ಎಂ. ಸ್ವರಾಜ್ 66,660 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ, ಬಿಜೆಪಿ ಅಭ್ಯರ್ಥಿ ಮೋಹನ್ ಜಾರ್ಜ್ 8,648 ಮತಗಳನ್ನು ಗಳಿಸಿದರೆ, ಎಸ್‌ಡಿಪಿಐನ ಸಾದಿಕ್ ನಡುತೊಡಿ 2,075 ಮತಗಳನ್ನು ಪಡೆದುಕೊಂಡಿದ್ದಾರೆ. 630 ನೋಟಾ ಮತಗಳು ಚಲಾವಣೆ ಆಗಿವೆ. ಒಟ್ಟು 10 ಅಭ್ಯರ್ಥಿಗಳು ನಿಲಂಬೂರ್‌ ಕಣದಲ್ಲಿದ್ದರು.

ಗುಜರಾತ್‌ನ ಕಾಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಂದ್ರ ಕುಮಾರ್ (ರಾಜುಭಾಯಿ) ದಾನೇಶ್ವರ್ ಛಾವ್ಡ 39, 452 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಭಾಯಿ ಛಾವ್ಡ ವಿರುದ್ದ ಗೆಲುವು ದಾಖಲಿಸಿದ್ದಾರೆ. ದಾನೇಶ್ವರ್ ಛಾವ್ಡ 99,742 ಮತಗಳನ್ನು ಪಡೆದುಕೊಂಡಿದ್ದು, ರಮೇಶ್ಭಾಯಿ ಛಾವ್ಡ 60,290 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಛಾವ್ಡ ಜಗದೀಶ್‌ಭಾಯಿ ಛಾವ್ಡ 3090 ಮತಗಳನ್ನು ಪಡೆದರೆ, ಪ್ರಜಾಶಕ್ತಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಡಾ.ಗಿರೀಶ್‌ಭಾಯಿ ಜೀತಾಭಾಯಿ ಕಪಾಡಿಯಾ 1335 ಮತಗಳನ್ನು ಪಡೆದಿದ್ದಾರೆ.

ಗುಜರಾತ್‌ನ ಮತ್ತೊಂದು ಕ್ಷೇತ್ರ ವಿಸಾವದರ್‌ನಲ್ಲಿ ಎಎಪಿ ಅಭ್ಯರ್ಥಿ ಇಟಾಲಿಯಾ ಗೋಪಾಲ್ 17,554 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕಿರಿತ್ ಪಟೇಲ್ ವಿರುದ್ದ ಗೆಲುವು ದಾಖಲಿಸಿದ್ದಾರೆ. ಇಟಾಲಿಯಾ ಗೋಪಾಲ್ ಅವರು 75,942 ಮತಗಳನ್ನು ಪಡೆದರೆ, ಕಿರಿತ್ ಪಟೇಲ್ 58,388 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ ಕಾಂಗ್ರೆಸ್ ಅಭ್ಯರ್ಥಿ ನಿತಿನ್ ರಾನ್‌ಪರಿಯ ಅವರು 5,501 ಮತಗಳನ್ನು ಪಡೆದಿದ್ದು, ಸ್ವತಂತ್ರ ಅಭ್ಯರ್ಥಿ ಹಿತೇಶ್‌ಭಾಯಿ ಪ್ರೇಮ್‌ಜಿಭಾಯಿ ವಾಘಸಿಯಾ ಅವರು 3,224 ಮಗಳನ್ನು ಪಡೆದಿದ್ದಾರೆ.

ಪಂಜಾಬ್‌ನ ಲುದಿಯಾನ ಪಶ್ಚಿಮ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸಂಜೀವ್ ಅರೋರ ಅವರು 10,637 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರತ್ ಭೂಷಣ್ ಅಶು ವಿರುದ್ದ ಜಯಗಳಿಸಿದ್ದಾರೆ. ಸಂಜೀವ್ ಅರೋರ ಅವರು 35,179 ಮತಗಳನ್ನು ಪಡೆದರೆ, ಭರತ್ ಭೂಷಣ್ 24, 542 ಮತಗಳನ್ನು ಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಜೀವನ್ ಗುಪ್ತಾ ಅವರು 20,323 ಮತಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು, ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಅಡ್ವೊಕೇಟ್ ಪರೂಪ್‌ಕಾರ್ ಸಿಂಗ್ ಘುಮಾನ್ ಅವರು 8,203 ಮತಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಪಶ್ಚಿಮ ಬಂಗಾಳದ ಕಾಳಿಗಂಜ್‌ ಕ್ಷೇತ್ರದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಅಲೀಫಾ ಅಹ್ಮದ್ ಅವರು 500,49 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಷ್ ಘೋಶ್ ವಿರುದ್ದ ಜಯಗಳಿಸಿದ್ದಾರೆ. ಅಲೀಫಾ ಅವರು 102,759 ಮತಗಳನ್ನು ಪಡೆದರೆ, ಆಶಿಶ್ ಘೋಷ್ 52,710 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಬೀಲುದ್ದೀನ್ ಶೈಖ್ 28,348 ಮತಗಳನ್ನು ಗಳಿಸಿದ್ದಾರೆ.

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...