Homeಮುಖಪುಟವಿಧಾನಸಭೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

ವಿಧಾನಸಭೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

- Advertisement -
- Advertisement -

ದೇಶದ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಜೂನ್. 23) ಪ್ರಕಟಗೊಂಡಿದೆ.

ಗುಜರಾತ್‌ನ ಕಾಡಿ ಮತ್ತು ವಿಸಾವದರ್, ಕೇರಳದ ನಿಲಂಬೂರ್, ಪಶ್ಚಿಮ ಬಂಗಾಳದ ಕಾಳಿಗಂಜ್, ಮತ್ತು ಪಂಜಾಬ್‌ನ ಲುದಿಯಾನ ಪಶ್ಚಿಮ ಕ್ಷೇತ್ರಗಳಿಗೆ ಜೂನ್ 19ರಂದು ಮತದಾನ ನಡೆದಿತ್ತು.

ಕೇರಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿ ಆರ್ಯಡನ್ ಶೌಕತ್ ಅವರು 11, 077 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಶೌಕತ್ ಅವರು 77,737 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಆಡಳಿತರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಸಿಪಿಐ(ಎಂ) ಅಭ್ಯರ್ಥಿ ಎಂ. ಸ್ವರಾಜ್ 66,660 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ, ಬಿಜೆಪಿ ಅಭ್ಯರ್ಥಿ ಮೋಹನ್ ಜಾರ್ಜ್ 8,648 ಮತಗಳನ್ನು ಗಳಿಸಿದರೆ, ಎಸ್‌ಡಿಪಿಐನ ಸಾದಿಕ್ ನಡುತೊಡಿ 2,075 ಮತಗಳನ್ನು ಪಡೆದುಕೊಂಡಿದ್ದಾರೆ. 630 ನೋಟಾ ಮತಗಳು ಚಲಾವಣೆ ಆಗಿವೆ. ಒಟ್ಟು 10 ಅಭ್ಯರ್ಥಿಗಳು ನಿಲಂಬೂರ್‌ ಕಣದಲ್ಲಿದ್ದರು.

ಗುಜರಾತ್‌ನ ಕಾಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಂದ್ರ ಕುಮಾರ್ (ರಾಜುಭಾಯಿ) ದಾನೇಶ್ವರ್ ಛಾವ್ಡ 39, 452 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಭಾಯಿ ಛಾವ್ಡ ವಿರುದ್ದ ಗೆಲುವು ದಾಖಲಿಸಿದ್ದಾರೆ. ದಾನೇಶ್ವರ್ ಛಾವ್ಡ 99,742 ಮತಗಳನ್ನು ಪಡೆದುಕೊಂಡಿದ್ದು, ರಮೇಶ್ಭಾಯಿ ಛಾವ್ಡ 60,290 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಛಾವ್ಡ ಜಗದೀಶ್‌ಭಾಯಿ ಛಾವ್ಡ 3090 ಮತಗಳನ್ನು ಪಡೆದರೆ, ಪ್ರಜಾಶಕ್ತಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಡಾ.ಗಿರೀಶ್‌ಭಾಯಿ ಜೀತಾಭಾಯಿ ಕಪಾಡಿಯಾ 1335 ಮತಗಳನ್ನು ಪಡೆದಿದ್ದಾರೆ.

ಗುಜರಾತ್‌ನ ಮತ್ತೊಂದು ಕ್ಷೇತ್ರ ವಿಸಾವದರ್‌ನಲ್ಲಿ ಎಎಪಿ ಅಭ್ಯರ್ಥಿ ಇಟಾಲಿಯಾ ಗೋಪಾಲ್ 17,554 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕಿರಿತ್ ಪಟೇಲ್ ವಿರುದ್ದ ಗೆಲುವು ದಾಖಲಿಸಿದ್ದಾರೆ. ಇಟಾಲಿಯಾ ಗೋಪಾಲ್ ಅವರು 75,942 ಮತಗಳನ್ನು ಪಡೆದರೆ, ಕಿರಿತ್ ಪಟೇಲ್ 58,388 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ ಕಾಂಗ್ರೆಸ್ ಅಭ್ಯರ್ಥಿ ನಿತಿನ್ ರಾನ್‌ಪರಿಯ ಅವರು 5,501 ಮತಗಳನ್ನು ಪಡೆದಿದ್ದು, ಸ್ವತಂತ್ರ ಅಭ್ಯರ್ಥಿ ಹಿತೇಶ್‌ಭಾಯಿ ಪ್ರೇಮ್‌ಜಿಭಾಯಿ ವಾಘಸಿಯಾ ಅವರು 3,224 ಮಗಳನ್ನು ಪಡೆದಿದ್ದಾರೆ.

ಪಂಜಾಬ್‌ನ ಲುದಿಯಾನ ಪಶ್ಚಿಮ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸಂಜೀವ್ ಅರೋರ ಅವರು 10,637 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರತ್ ಭೂಷಣ್ ಅಶು ವಿರುದ್ದ ಜಯಗಳಿಸಿದ್ದಾರೆ. ಸಂಜೀವ್ ಅರೋರ ಅವರು 35,179 ಮತಗಳನ್ನು ಪಡೆದರೆ, ಭರತ್ ಭೂಷಣ್ 24, 542 ಮತಗಳನ್ನು ಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಜೀವನ್ ಗುಪ್ತಾ ಅವರು 20,323 ಮತಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು, ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಅಡ್ವೊಕೇಟ್ ಪರೂಪ್‌ಕಾರ್ ಸಿಂಗ್ ಘುಮಾನ್ ಅವರು 8,203 ಮತಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಪಶ್ಚಿಮ ಬಂಗಾಳದ ಕಾಳಿಗಂಜ್‌ ಕ್ಷೇತ್ರದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಅಲೀಫಾ ಅಹ್ಮದ್ ಅವರು 500,49 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಷ್ ಘೋಶ್ ವಿರುದ್ದ ಜಯಗಳಿಸಿದ್ದಾರೆ. ಅಲೀಫಾ ಅವರು 102,759 ಮತಗಳನ್ನು ಪಡೆದರೆ, ಆಶಿಶ್ ಘೋಷ್ 52,710 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಬೀಲುದ್ದೀನ್ ಶೈಖ್ 28,348 ಮತಗಳನ್ನು ಗಳಿಸಿದ್ದಾರೆ.

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....