Homeಮುಖಪುಟಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ...

ಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ…

- Advertisement -
- Advertisement -

ತೆಲಂಗಾಣ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಕೊನೆಗೊಂಡ ಬೆನ್ನಲ್ಲೇ ಎಕ್ಸಿಟ್ ಪೋಲ್‌ಗಳ (ಮತಗಟ್ಟೆ ಸಮೀಕ್ಷೆ) ಫಲಿತಾಂಶ ಹೊರಬಿದ್ದಿದೆ.

ಯಾವ ಪಕ್ಷಕ್ಕೆ ಯಾವ ರಾಜ್ಯದಲ್ಲಿ ಎಷ್ಟು ಸ್ಥಾನಗಳು ಸಿಗಲಿವೆ? ಅಲ್ಲಿ ಯಾರ ಸರ್ಕಾರ ರಚನೆಯಾಗಲಿದೆ ಎಂಬುದು ಎಕ್ಸಿಟ್ ಪೋಲ್ ಅಂದಾಜಿಸಿದೆ. ಆದರೆ, ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ತೆಲಂಗಾಣದಲ್ಲಿ 119 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 60ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಸಿಎನ್‌ನ್‌ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ 56 ಸ್ಥಾನಗಳನ್ನು ಪಡೆಯಲಿದೆ. ಬಿಆರ್‌ಎಸ್‌ 58 ಸ್ಥಾನಗಳನ್ನು ಮತ್ತು ಬಿಜೆಪಿ 10ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಆರ್‌ಎಸ್‌ 40-55 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 48-64, ಬಿಜೆಪಿ 7-13 ಎಐಎಂಐಎಂ 4-7ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್‌ಗೆ 58-71 ಸ್ಥಾನಗಳಲ್ಲಿ ಗೆಲುವಿನ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ಇದೆ. ಬಿಆರ್‌ ಎಸ್‌ 37-51, ಬಿಜೆಪಿಗೆ 5 ಸ್ಥಾನಗಳು ಕೂಡ ಸಿಗುವ ಸಾಧ್ಯತೆ ಇದೆ.

ಛತ್ತಿಸ್‌ಗಢದಲ್ಲಿ 90 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 46 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಕಾಂಗ್ರೆಸ್‌ ಛತ್ತಿಸ್‌ಗಢದಲ್ಲಿ 40-50 ಸ್ಥಾನಗಳನ್ನು ಮತ್ತು 36-46 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಇದೆ ಎಂದು  ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಹೇಳಿದೆ.

ಟಿವಿ5 ನ್ಯೂಸ್ ಎಕ್ಸಿಟ್ ಪೋಲ್ ಬಿಜೆಪಿಗೆ 29-39 ಸ್ಥಾನಗಳು ಮತ್ತು ಕಾಂಗ್ರೆಸ್‌ಗೆ 54-64 ಸ್ಥಾನಗಳ ಗೆಲುವಿನ ಭವಿಷ್ಯ ನುಡಿದಿದೆ.

ಜನ್ ಕಿ ಬಾತ್ ಎಕ್ಸಿಟ್ ಪೋಲ್ ಪ್ರಕಾರ, ಕಾಂಗ್ರೆಸ್ 42-53 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಮತ್ತು ಬಿಜೆಪಿ 34-45 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.

ಎಬಿಪಿ ಸಿ ವೋಟರ್‌ ಸಮೀಕ್ಷೆ ಪ್ರಕಾರ, ಬಿಜೆಪಿ 36-48, ಕಾಂಗ್ರೆಸ್‌ 41-53 ಸ್ಥಾನ ಪಡೆಯುವ ಮೂಲಕ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತದೆ. ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳುತ್ತಿದೆ.

ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 116 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಮಧ್ಯಪ್ರದೇಶದ ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 118-130 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ 97-107 ಸ್ಥಾನಗಳನ್ನು ಗೆಲ್ಲಬಹುದು, ಇತರ ಪಕ್ಷಗಳು 2 ಸ್ಥಾನಗಳನ್ನು ಗೆಲ್ಲಬಹುದಾಗಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷಾ ವರದಿಯ ಪ್ರಕಾರ ಕಾಂಗ್ರೆಸ್ 111-121 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು, ಬಿಜೆಪಿ 106-116 ಸ್ಥಾನಗಳಲ್ಲಿ ನಿರೀಕ್ಷಿತ ಗೆಲುವಿನ ಸಾಧ್ಯತೆ ಇದೆ ಎಂದು ತಿಳಿಸಿದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-123, ಕಾಂಗ್ರೆಸ್‌ 100-125, ಇತರರು 5ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ರಾಜಸ್ಥಾನದಲ್ಲಿ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 101 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷೆ ಪ್ರಕಾರ, ಬಿಜೆಪಿ 100-110ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 90-100, ಬಿಎಸ್ಪಿ-0 ಹಾಗೂ ಇತರರು 5-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-112, ಕಾಂಗ್ರೆಸ್‌ 62-85, ಇತರರು 14-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಮಿಜೋರಾಂನಲ್ಲಿ 40 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 21 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಮಿಜೋರಾಂನಲ್ಲಿ ಎಮ್‌ ಎನ್‌ಎಫ್‌ಗೆ 10-14ಕ್ಷೇತ್ರಗಳು, ZPM 15-25ಕ್ಷೇತ್ರಗಳು, ಕಾಂಗ್ರೆಸ್ 5-9ಕ್ಷೆತ್ರಗಳಲ್ಲಿ, ಬಿಜೆಪಿ 0-2ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...