Homeಮುಖಪುಟಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ...

ಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ…

- Advertisement -
- Advertisement -

ತೆಲಂಗಾಣ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಕೊನೆಗೊಂಡ ಬೆನ್ನಲ್ಲೇ ಎಕ್ಸಿಟ್ ಪೋಲ್‌ಗಳ (ಮತಗಟ್ಟೆ ಸಮೀಕ್ಷೆ) ಫಲಿತಾಂಶ ಹೊರಬಿದ್ದಿದೆ.

ಯಾವ ಪಕ್ಷಕ್ಕೆ ಯಾವ ರಾಜ್ಯದಲ್ಲಿ ಎಷ್ಟು ಸ್ಥಾನಗಳು ಸಿಗಲಿವೆ? ಅಲ್ಲಿ ಯಾರ ಸರ್ಕಾರ ರಚನೆಯಾಗಲಿದೆ ಎಂಬುದು ಎಕ್ಸಿಟ್ ಪೋಲ್ ಅಂದಾಜಿಸಿದೆ. ಆದರೆ, ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ತೆಲಂಗಾಣದಲ್ಲಿ 119 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 60ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಸಿಎನ್‌ನ್‌ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ 56 ಸ್ಥಾನಗಳನ್ನು ಪಡೆಯಲಿದೆ. ಬಿಆರ್‌ಎಸ್‌ 58 ಸ್ಥಾನಗಳನ್ನು ಮತ್ತು ಬಿಜೆಪಿ 10ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಆರ್‌ಎಸ್‌ 40-55 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 48-64, ಬಿಜೆಪಿ 7-13 ಎಐಎಂಐಎಂ 4-7ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್‌ಗೆ 58-71 ಸ್ಥಾನಗಳಲ್ಲಿ ಗೆಲುವಿನ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ಇದೆ. ಬಿಆರ್‌ ಎಸ್‌ 37-51, ಬಿಜೆಪಿಗೆ 5 ಸ್ಥಾನಗಳು ಕೂಡ ಸಿಗುವ ಸಾಧ್ಯತೆ ಇದೆ.

ಛತ್ತಿಸ್‌ಗಢದಲ್ಲಿ 90 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 46 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಕಾಂಗ್ರೆಸ್‌ ಛತ್ತಿಸ್‌ಗಢದಲ್ಲಿ 40-50 ಸ್ಥಾನಗಳನ್ನು ಮತ್ತು 36-46 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಇದೆ ಎಂದು  ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಹೇಳಿದೆ.

ಟಿವಿ5 ನ್ಯೂಸ್ ಎಕ್ಸಿಟ್ ಪೋಲ್ ಬಿಜೆಪಿಗೆ 29-39 ಸ್ಥಾನಗಳು ಮತ್ತು ಕಾಂಗ್ರೆಸ್‌ಗೆ 54-64 ಸ್ಥಾನಗಳ ಗೆಲುವಿನ ಭವಿಷ್ಯ ನುಡಿದಿದೆ.

ಜನ್ ಕಿ ಬಾತ್ ಎಕ್ಸಿಟ್ ಪೋಲ್ ಪ್ರಕಾರ, ಕಾಂಗ್ರೆಸ್ 42-53 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಮತ್ತು ಬಿಜೆಪಿ 34-45 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.

ಎಬಿಪಿ ಸಿ ವೋಟರ್‌ ಸಮೀಕ್ಷೆ ಪ್ರಕಾರ, ಬಿಜೆಪಿ 36-48, ಕಾಂಗ್ರೆಸ್‌ 41-53 ಸ್ಥಾನ ಪಡೆಯುವ ಮೂಲಕ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತದೆ. ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳುತ್ತಿದೆ.

ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 116 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಮಧ್ಯಪ್ರದೇಶದ ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 118-130 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ 97-107 ಸ್ಥಾನಗಳನ್ನು ಗೆಲ್ಲಬಹುದು, ಇತರ ಪಕ್ಷಗಳು 2 ಸ್ಥಾನಗಳನ್ನು ಗೆಲ್ಲಬಹುದಾಗಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷಾ ವರದಿಯ ಪ್ರಕಾರ ಕಾಂಗ್ರೆಸ್ 111-121 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು, ಬಿಜೆಪಿ 106-116 ಸ್ಥಾನಗಳಲ್ಲಿ ನಿರೀಕ್ಷಿತ ಗೆಲುವಿನ ಸಾಧ್ಯತೆ ಇದೆ ಎಂದು ತಿಳಿಸಿದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-123, ಕಾಂಗ್ರೆಸ್‌ 100-125, ಇತರರು 5ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ರಾಜಸ್ಥಾನದಲ್ಲಿ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 101 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷೆ ಪ್ರಕಾರ, ಬಿಜೆಪಿ 100-110ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 90-100, ಬಿಎಸ್ಪಿ-0 ಹಾಗೂ ಇತರರು 5-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-112, ಕಾಂಗ್ರೆಸ್‌ 62-85, ಇತರರು 14-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಮಿಜೋರಾಂನಲ್ಲಿ 40 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 21 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಮಿಜೋರಾಂನಲ್ಲಿ ಎಮ್‌ ಎನ್‌ಎಫ್‌ಗೆ 10-14ಕ್ಷೇತ್ರಗಳು, ZPM 15-25ಕ್ಷೇತ್ರಗಳು, ಕಾಂಗ್ರೆಸ್ 5-9ಕ್ಷೆತ್ರಗಳಲ್ಲಿ, ಬಿಜೆಪಿ 0-2ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...