Homeಮುಖಪುಟಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ...

ಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ…

- Advertisement -
- Advertisement -

ತೆಲಂಗಾಣ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಕೊನೆಗೊಂಡ ಬೆನ್ನಲ್ಲೇ ಎಕ್ಸಿಟ್ ಪೋಲ್‌ಗಳ (ಮತಗಟ್ಟೆ ಸಮೀಕ್ಷೆ) ಫಲಿತಾಂಶ ಹೊರಬಿದ್ದಿದೆ.

ಯಾವ ಪಕ್ಷಕ್ಕೆ ಯಾವ ರಾಜ್ಯದಲ್ಲಿ ಎಷ್ಟು ಸ್ಥಾನಗಳು ಸಿಗಲಿವೆ? ಅಲ್ಲಿ ಯಾರ ಸರ್ಕಾರ ರಚನೆಯಾಗಲಿದೆ ಎಂಬುದು ಎಕ್ಸಿಟ್ ಪೋಲ್ ಅಂದಾಜಿಸಿದೆ. ಆದರೆ, ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ತೆಲಂಗಾಣದಲ್ಲಿ 119 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 60ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಸಿಎನ್‌ನ್‌ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ 56 ಸ್ಥಾನಗಳನ್ನು ಪಡೆಯಲಿದೆ. ಬಿಆರ್‌ಎಸ್‌ 58 ಸ್ಥಾನಗಳನ್ನು ಮತ್ತು ಬಿಜೆಪಿ 10ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಆರ್‌ಎಸ್‌ 40-55 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 48-64, ಬಿಜೆಪಿ 7-13 ಎಐಎಂಐಎಂ 4-7ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್‌ಗೆ 58-71 ಸ್ಥಾನಗಳಲ್ಲಿ ಗೆಲುವಿನ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ಇದೆ. ಬಿಆರ್‌ ಎಸ್‌ 37-51, ಬಿಜೆಪಿಗೆ 5 ಸ್ಥಾನಗಳು ಕೂಡ ಸಿಗುವ ಸಾಧ್ಯತೆ ಇದೆ.

ಛತ್ತಿಸ್‌ಗಢದಲ್ಲಿ 90 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 46 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಕಾಂಗ್ರೆಸ್‌ ಛತ್ತಿಸ್‌ಗಢದಲ್ಲಿ 40-50 ಸ್ಥಾನಗಳನ್ನು ಮತ್ತು 36-46 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಇದೆ ಎಂದು  ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಹೇಳಿದೆ.

ಟಿವಿ5 ನ್ಯೂಸ್ ಎಕ್ಸಿಟ್ ಪೋಲ್ ಬಿಜೆಪಿಗೆ 29-39 ಸ್ಥಾನಗಳು ಮತ್ತು ಕಾಂಗ್ರೆಸ್‌ಗೆ 54-64 ಸ್ಥಾನಗಳ ಗೆಲುವಿನ ಭವಿಷ್ಯ ನುಡಿದಿದೆ.

ಜನ್ ಕಿ ಬಾತ್ ಎಕ್ಸಿಟ್ ಪೋಲ್ ಪ್ರಕಾರ, ಕಾಂಗ್ರೆಸ್ 42-53 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಮತ್ತು ಬಿಜೆಪಿ 34-45 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.

ಎಬಿಪಿ ಸಿ ವೋಟರ್‌ ಸಮೀಕ್ಷೆ ಪ್ರಕಾರ, ಬಿಜೆಪಿ 36-48, ಕಾಂಗ್ರೆಸ್‌ 41-53 ಸ್ಥಾನ ಪಡೆಯುವ ಮೂಲಕ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತದೆ. ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳುತ್ತಿದೆ.

ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 116 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಮಧ್ಯಪ್ರದೇಶದ ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 118-130 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ 97-107 ಸ್ಥಾನಗಳನ್ನು ಗೆಲ್ಲಬಹುದು, ಇತರ ಪಕ್ಷಗಳು 2 ಸ್ಥಾನಗಳನ್ನು ಗೆಲ್ಲಬಹುದಾಗಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷಾ ವರದಿಯ ಪ್ರಕಾರ ಕಾಂಗ್ರೆಸ್ 111-121 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು, ಬಿಜೆಪಿ 106-116 ಸ್ಥಾನಗಳಲ್ಲಿ ನಿರೀಕ್ಷಿತ ಗೆಲುವಿನ ಸಾಧ್ಯತೆ ಇದೆ ಎಂದು ತಿಳಿಸಿದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-123, ಕಾಂಗ್ರೆಸ್‌ 100-125, ಇತರರು 5ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ರಾಜಸ್ಥಾನದಲ್ಲಿ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 101 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷೆ ಪ್ರಕಾರ, ಬಿಜೆಪಿ 100-110ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 90-100, ಬಿಎಸ್ಪಿ-0 ಹಾಗೂ ಇತರರು 5-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-112, ಕಾಂಗ್ರೆಸ್‌ 62-85, ಇತರರು 14-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಮಿಜೋರಾಂನಲ್ಲಿ 40 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 21 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಮಿಜೋರಾಂನಲ್ಲಿ ಎಮ್‌ ಎನ್‌ಎಫ್‌ಗೆ 10-14ಕ್ಷೇತ್ರಗಳು, ZPM 15-25ಕ್ಷೇತ್ರಗಳು, ಕಾಂಗ್ರೆಸ್ 5-9ಕ್ಷೆತ್ರಗಳಲ್ಲಿ, ಬಿಜೆಪಿ 0-2ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...