Homeಮುಖಪುಟಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ...

ಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ…

- Advertisement -
- Advertisement -

ತೆಲಂಗಾಣ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಕೊನೆಗೊಂಡ ಬೆನ್ನಲ್ಲೇ ಎಕ್ಸಿಟ್ ಪೋಲ್‌ಗಳ (ಮತಗಟ್ಟೆ ಸಮೀಕ್ಷೆ) ಫಲಿತಾಂಶ ಹೊರಬಿದ್ದಿದೆ.

ಯಾವ ಪಕ್ಷಕ್ಕೆ ಯಾವ ರಾಜ್ಯದಲ್ಲಿ ಎಷ್ಟು ಸ್ಥಾನಗಳು ಸಿಗಲಿವೆ? ಅಲ್ಲಿ ಯಾರ ಸರ್ಕಾರ ರಚನೆಯಾಗಲಿದೆ ಎಂಬುದು ಎಕ್ಸಿಟ್ ಪೋಲ್ ಅಂದಾಜಿಸಿದೆ. ಆದರೆ, ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ತೆಲಂಗಾಣದಲ್ಲಿ 119 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 60ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಸಿಎನ್‌ನ್‌ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ 56 ಸ್ಥಾನಗಳನ್ನು ಪಡೆಯಲಿದೆ. ಬಿಆರ್‌ಎಸ್‌ 58 ಸ್ಥಾನಗಳನ್ನು ಮತ್ತು ಬಿಜೆಪಿ 10ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಆರ್‌ಎಸ್‌ 40-55 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 48-64, ಬಿಜೆಪಿ 7-13 ಎಐಎಂಐಎಂ 4-7ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್‌ಗೆ 58-71 ಸ್ಥಾನಗಳಲ್ಲಿ ಗೆಲುವಿನ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ಇದೆ. ಬಿಆರ್‌ ಎಸ್‌ 37-51, ಬಿಜೆಪಿಗೆ 5 ಸ್ಥಾನಗಳು ಕೂಡ ಸಿಗುವ ಸಾಧ್ಯತೆ ಇದೆ.

ಛತ್ತಿಸ್‌ಗಢದಲ್ಲಿ 90 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 46 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಕಾಂಗ್ರೆಸ್‌ ಛತ್ತಿಸ್‌ಗಢದಲ್ಲಿ 40-50 ಸ್ಥಾನಗಳನ್ನು ಮತ್ತು 36-46 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಇದೆ ಎಂದು  ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಹೇಳಿದೆ.

ಟಿವಿ5 ನ್ಯೂಸ್ ಎಕ್ಸಿಟ್ ಪೋಲ್ ಬಿಜೆಪಿಗೆ 29-39 ಸ್ಥಾನಗಳು ಮತ್ತು ಕಾಂಗ್ರೆಸ್‌ಗೆ 54-64 ಸ್ಥಾನಗಳ ಗೆಲುವಿನ ಭವಿಷ್ಯ ನುಡಿದಿದೆ.

ಜನ್ ಕಿ ಬಾತ್ ಎಕ್ಸಿಟ್ ಪೋಲ್ ಪ್ರಕಾರ, ಕಾಂಗ್ರೆಸ್ 42-53 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಮತ್ತು ಬಿಜೆಪಿ 34-45 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.

ಎಬಿಪಿ ಸಿ ವೋಟರ್‌ ಸಮೀಕ್ಷೆ ಪ್ರಕಾರ, ಬಿಜೆಪಿ 36-48, ಕಾಂಗ್ರೆಸ್‌ 41-53 ಸ್ಥಾನ ಪಡೆಯುವ ಮೂಲಕ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತದೆ. ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳುತ್ತಿದೆ.

ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 116 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಮಧ್ಯಪ್ರದೇಶದ ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 118-130 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ 97-107 ಸ್ಥಾನಗಳನ್ನು ಗೆಲ್ಲಬಹುದು, ಇತರ ಪಕ್ಷಗಳು 2 ಸ್ಥಾನಗಳನ್ನು ಗೆಲ್ಲಬಹುದಾಗಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷಾ ವರದಿಯ ಪ್ರಕಾರ ಕಾಂಗ್ರೆಸ್ 111-121 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು, ಬಿಜೆಪಿ 106-116 ಸ್ಥಾನಗಳಲ್ಲಿ ನಿರೀಕ್ಷಿತ ಗೆಲುವಿನ ಸಾಧ್ಯತೆ ಇದೆ ಎಂದು ತಿಳಿಸಿದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-123, ಕಾಂಗ್ರೆಸ್‌ 100-125, ಇತರರು 5ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ರಾಜಸ್ಥಾನದಲ್ಲಿ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 101 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷೆ ಪ್ರಕಾರ, ಬಿಜೆಪಿ 100-110ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 90-100, ಬಿಎಸ್ಪಿ-0 ಹಾಗೂ ಇತರರು 5-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-112, ಕಾಂಗ್ರೆಸ್‌ 62-85, ಇತರರು 14-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಮಿಜೋರಾಂನಲ್ಲಿ 40 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 21 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಮಿಜೋರಾಂನಲ್ಲಿ ಎಮ್‌ ಎನ್‌ಎಫ್‌ಗೆ 10-14ಕ್ಷೇತ್ರಗಳು, ZPM 15-25ಕ್ಷೇತ್ರಗಳು, ಕಾಂಗ್ರೆಸ್ 5-9ಕ್ಷೆತ್ರಗಳಲ್ಲಿ, ಬಿಜೆಪಿ 0-2ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...