Homeಕರ್ನಾಟಕವಿಧಾನಸಭಾ ಚುನಾವಣೆ ಅಪ್‌ಡೇಟ್ಸ್‌: ಎಲ್ಲೆಲ್ಲಿ ಏನಾಯ್ತು?

ವಿಧಾನಸಭಾ ಚುನಾವಣೆ ಅಪ್‌ಡೇಟ್ಸ್‌: ಎಲ್ಲೆಲ್ಲಿ ಏನಾಯ್ತು?

ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 52.18ರಷ್ಟು ಮತದಾನ ನಡೆದಿದ್ದು, ಕೆಲವೆಡೆ ಅಹಿತಕರ ವರದಿಗಳಾಗಿವೆ.

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಹಲವು ಘಟನೆಗಳಿಗೆ ಸಾಕ್ಷಿಯಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 52.18ರಷ್ಟು ಮತದಾನ ನಡೆದಿದ್ದು, ಕೆಲವೆಡೆ ಅಹಿತಕರ ವರದಿಗಳಾಗಿವೆ.

ಮತಯಂತ್ರ, ವಿವಿ ಪ್ಯಾಡ್ ಧ್ವಂಸ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳನ್ನು ಧ್ವಂಸಗೊಳಿಸಿದ್ದು, ಮತಗಟ್ಟೆ ಅಧಿಕಾರಿಗಳ ವಾಹನಗಳಿಗೆ ಹಾನಿ ಮಾಡಿದ್ದಾರೆ.

ಹೆಚ್ಚುವರಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದ್ದಾಗ ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ಆಕ್ರೋಶಗೊಂಡು ಇವಿಎಂಗಳನ್ನು ಒಡೆದು ಹಾಕಿದ್ದಾರೆ ಎಂಬ ವರದಿಯಾಗಿದೆ. ಈ ಸಂಬಂಧ 20-25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

‘ಕೈ’ ಕಾರ್ಯಕರ್ತರಿಗೆ ಸಿಕ್ಕಿಬಿದ್ದ ನಕಲಿ ಮತದಾರರು

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರದ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಇವರನ್ನು ಕರೆತಂದಿದ್ದರು ಎಂಬ ಆರೋಪ ಬಂದಿದೆ.

ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೋಳಿ, ಸೀರೆ ಹಿಂತಿರುಗಿಸಿದ ಮತದಾರರು

ಸೀರೆ, ಕೋಳಿ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತದಾರರಿಗೆ ಆಮಿಷವೊಡ್ಡಲು ಬಿಜೆಪಿ ಅಭ್ಯರ್ಥಿ, ಸಚಿವ ನಾರಾಯಣ ಗೌಡ ಅವರು ಯತ್ನಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ. ಎಲ್ಲ ವಸ್ತುಗಳನ್ನು ಹಿಂತಿರುಗಿಸಿ, ಬಿಜೆಪಿಗೆ ಮತದಾರರು ಧಿಕ್ಕಾರ ಕೂಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. “ನಮಗೆ ನಿಮ್ಮ ಭಿಕ್ಷೆ ಬೇಡ ನಾವು ಬಿಜೆಪಿಗೆ ಓಟು ಹಾಕುವುದಿಲ್ಲ” ಎಂದು ಮತದಾರರು ಹೇಳಿದ್ದಾರೆ.

ಮತದಾನ ಮಾಡಿ ವಾಪಸ್ ಬರುವಾಗ ಕಾಡಾನೆ ದಾಳಿ

ಮತದಾನ ಮಾಡಿ ವಾಪಸ್ ಬರುವಾಗ ಹನೂರು ತಾಲ್ಲೂಕಿನ ಮಲೆ‌ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿಸಿದ್ದಾರೆ. ಇಲ್ಲಿನ ತೋಕೆರೆ ಗ್ರಾಮದ ಪುಟ್ಟಸ್ವಾಮಿ (50) ಮೃತರು.

ಮತಗಟ್ಟೆ ಬಳಿ ವೃದ್ಧೆ ಸಾವು

ಬೆಳಗಾವಿ ಜಿಲ್ಲೆಯ ಕೋ.ಶಿವಾಪುರ ಸಮೀಪದಲ್ಲಿ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪಾರವ್ವ ಈಶ್ವರ ಸಿದ್ನಾಳ(ಪನದಿ) (68) ಸಾವಿಗೀಡಾದವರು.

ತಡವಾಗಿ ಆರಂಭವಾದ ಮತದಾನ

ಹನೂರು ವಿಧಾನಸಭಾ ಕ್ಷೇತ್ರದ ನೆಲ್ಲಿಕತ್ರಿ ಗಿರಿಜನ ಹಾಡಿಯಲ್ಲಿ ನಾಲ್ಕು ಗಂಟೆ ತಡವಾಗಿ ಮತದಾನ ಆರಂಭವಾಗಿರುವ ಘಟನೆ ನಡೆದಿದೆ. “ನಮಗೆ ಕನಿಷ್ಠ ಮೂಲಸೌಕರ್ಯವಿಲ್ಲ. ನಮ್ಮ ಮನವಿಗೆ ಯಾರೂ ಸ್ಪಂಧಿಸಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ” ಎಂದು ಇಲ್ಲಿನ ಮತದಾರರು ದೂರ ಉಳಿದಿದ್ದರು. ಅರಣ್ಯ ಇಲಾಖೆ ಹಾಗೂ ಗಿರಿಜನ ಕಲ್ಯಾಣ ಇಲಾಖೆ ಅಧಿಕಾರಿಗಳು ಸೌಲಭ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ ಬಳಿಕ ಬೆಳಿಗ್ಗೆ 10:45ರವರ ಬಳಿಕ ಮತದಾನ ಆರಂಭವಾಯಿತು.

ಪ್ರತಿಸ್ಪರ್ಧಿಗಳ ಮೇಲೆ ಹಲ್ಲೆ

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್‌ನಲ್ಲಿರುವ ಮತಗಟ್ಟೆಯೊಂದರಲ್ಲಿ ಕೆಲ ಯುವಕರು ಕೋಲು ಹಿಡಿದು ತಮ್ಮ ರಾಜಕೀಯ ಪ್ರತಿಸ್ಪರ್ಧಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮತಗಟ್ಟೆಯಲ್ಲೇ ಮಹಿಳೆಗೆ ಸಹಜ ಹೆರಿಗೆ

ಮತದಾನ ಮಾಡಲು ಬಂದಿದ್ದ ಗರ್ಭಿಣಿಗೆ ಮತಗಟ್ಟೆ ಕೇಂದ್ರದಲ್ಲಿಯೇ ಸಹಜ ಹೆರಿಗೆಯಾದ ಘಟನೆ ನಡೆದಿದೆ. ಕುರುಗೋಡು ತಾಲ್ಲೂಕಿನ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228ರಲ್ಲಿ ಈ ಘಟನೆ ಜರುಗಿದೆ.

ಗ್ರಾಮದ ಮಣಿಲಾ ಎನ್ನುವ ತುಂಬು ಗರ್ಭಿಣಿ ಬೆಳಿಗ್ಗೆ 10 ಗಂಟೆಯ ವೇಳೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದರು. ನಂತರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೇಂದ್ರದಲ್ಲಿಯೇ ಸಹಜ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕೂಡಲೇ ತಾಯಿ, ಮಗುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಇಬ್ಬರೂ ಆರೋಗ್ಯವಾಗಿದ್ದಾರೆ.

ವಿಧಾನಸಭೆ ಚುನಾವಣೆ | ಮತದಾನಕ್ಕೆ ಬಂದ ಮಹಿಳೆಗೆ ಕೇಂದ್ರದಲ್ಲಿಯೇ ಸಹಜ ಹೆರಿಗೆ
ಚಿತ್ರ ಕೃಪೆ: ಪ್ರಜಾವಾಣಿ

ಮತದಾರರ ಮೇಲೆ ಕೈ ಮಾಡಿದ ಸಿ.ಎಸ್.ಪುಟ್ಟರಾಜು

ಮಂಡ್ಯ ಜಿಲ್ಲೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿರುವ ಮೇಲುಕೋಟೆಯಲ್ಲಿ ರೈತ ಸಂಘ ಮತ್ತು ಜೆಡಿಎಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನಾರಾಯಣಪುರ ಮತಗಟ್ಟೆಯಲ್ಲಿ ರೈತಸಂಘದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಹಿರಿಯ ನಾಗರಿಕರನ್ನು ಕರೆತಂದು ಮತ ಹಾಕಿಸುವ ವಿಚಾರಕ್ಕೆ ಗಲಾಟೆಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲೇ ಘಟನೆ ನಡಿದಿದ್ದು, ವಿಡಿಯೊ ಮಾಡುತ್ತಿದ್ದ ಇಬ್ಬರು ಯುವಕರಿಗೆ ಸಿ.ಎಸ್.ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದಾರೆ. ಪುಟ್ಟರಾಜು ವಿರುದ್ಧ ರೈತಸಂಘದ ಸದಸ್ಯರು ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಇತ್ತು. ಸ್ಥಳಕ್ಕೆ ಬಂದ ಪೊಲೀಸರು ಗುಂಪು‌ ಚದುರಿಸಿದ್ದಾರೆ.

ಬಿಜೆಪಿ ಬಟನ್ ಒತ್ತಿ ಸಿಕ್ಕಿಬಿದ್ದ ಅಧಿಕಾರಿ

ಮತ ಹಾಕಲು ಸಹಕರಿಸಲು ಹೋಗಿದ್ದ ಅಧಿಕಾರಿ ಬಿಜೆಪಿ ಬಟನ್‌ ಒತ್ತಿರುವ ಘಟನೆ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ನಡೆದಿದೆ. ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಉಗ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಮಹಿಳೆಯು ಕಾಂಗ್ರೆಸ್‌ ಬಟನ್ ಒತ್ತುವಂತೆ ಹೇಳಿದರೂ, ಅಧಿಕಾರಿ ಬಿಜೆಪಿ ಬಟನ್ ಒತ್ತಿರುವುದು ಬಯಲಾಗಿದೆ. ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಕ್ಷಣಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿ ಮೇಲೆ ಆರೋಪ ಬಂದಿದ್ದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಯವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅವರು ಅಧಿಕಾರಿಯನ್ನು ಬದಲಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...