Homeಕರ್ನಾಟಕವಿಧಾನಸಭಾ ಚುನಾವಣೆ ಅಪ್‌ಡೇಟ್ಸ್‌: ಎಲ್ಲೆಲ್ಲಿ ಏನಾಯ್ತು?

ವಿಧಾನಸಭಾ ಚುನಾವಣೆ ಅಪ್‌ಡೇಟ್ಸ್‌: ಎಲ್ಲೆಲ್ಲಿ ಏನಾಯ್ತು?

ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 52.18ರಷ್ಟು ಮತದಾನ ನಡೆದಿದ್ದು, ಕೆಲವೆಡೆ ಅಹಿತಕರ ವರದಿಗಳಾಗಿವೆ.

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಹಲವು ಘಟನೆಗಳಿಗೆ ಸಾಕ್ಷಿಯಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 52.18ರಷ್ಟು ಮತದಾನ ನಡೆದಿದ್ದು, ಕೆಲವೆಡೆ ಅಹಿತಕರ ವರದಿಗಳಾಗಿವೆ.

ಮತಯಂತ್ರ, ವಿವಿ ಪ್ಯಾಡ್ ಧ್ವಂಸ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳನ್ನು ಧ್ವಂಸಗೊಳಿಸಿದ್ದು, ಮತಗಟ್ಟೆ ಅಧಿಕಾರಿಗಳ ವಾಹನಗಳಿಗೆ ಹಾನಿ ಮಾಡಿದ್ದಾರೆ.

ಹೆಚ್ಚುವರಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದ್ದಾಗ ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ಆಕ್ರೋಶಗೊಂಡು ಇವಿಎಂಗಳನ್ನು ಒಡೆದು ಹಾಕಿದ್ದಾರೆ ಎಂಬ ವರದಿಯಾಗಿದೆ. ಈ ಸಂಬಂಧ 20-25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

‘ಕೈ’ ಕಾರ್ಯಕರ್ತರಿಗೆ ಸಿಕ್ಕಿಬಿದ್ದ ನಕಲಿ ಮತದಾರರು

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರದ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಇವರನ್ನು ಕರೆತಂದಿದ್ದರು ಎಂಬ ಆರೋಪ ಬಂದಿದೆ.

ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೋಳಿ, ಸೀರೆ ಹಿಂತಿರುಗಿಸಿದ ಮತದಾರರು

ಸೀರೆ, ಕೋಳಿ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತದಾರರಿಗೆ ಆಮಿಷವೊಡ್ಡಲು ಬಿಜೆಪಿ ಅಭ್ಯರ್ಥಿ, ಸಚಿವ ನಾರಾಯಣ ಗೌಡ ಅವರು ಯತ್ನಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ. ಎಲ್ಲ ವಸ್ತುಗಳನ್ನು ಹಿಂತಿರುಗಿಸಿ, ಬಿಜೆಪಿಗೆ ಮತದಾರರು ಧಿಕ್ಕಾರ ಕೂಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. “ನಮಗೆ ನಿಮ್ಮ ಭಿಕ್ಷೆ ಬೇಡ ನಾವು ಬಿಜೆಪಿಗೆ ಓಟು ಹಾಕುವುದಿಲ್ಲ” ಎಂದು ಮತದಾರರು ಹೇಳಿದ್ದಾರೆ.

ಮತದಾನ ಮಾಡಿ ವಾಪಸ್ ಬರುವಾಗ ಕಾಡಾನೆ ದಾಳಿ

ಮತದಾನ ಮಾಡಿ ವಾಪಸ್ ಬರುವಾಗ ಹನೂರು ತಾಲ್ಲೂಕಿನ ಮಲೆ‌ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿಸಿದ್ದಾರೆ. ಇಲ್ಲಿನ ತೋಕೆರೆ ಗ್ರಾಮದ ಪುಟ್ಟಸ್ವಾಮಿ (50) ಮೃತರು.

ಮತಗಟ್ಟೆ ಬಳಿ ವೃದ್ಧೆ ಸಾವು

ಬೆಳಗಾವಿ ಜಿಲ್ಲೆಯ ಕೋ.ಶಿವಾಪುರ ಸಮೀಪದಲ್ಲಿ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪಾರವ್ವ ಈಶ್ವರ ಸಿದ್ನಾಳ(ಪನದಿ) (68) ಸಾವಿಗೀಡಾದವರು.

ತಡವಾಗಿ ಆರಂಭವಾದ ಮತದಾನ

ಹನೂರು ವಿಧಾನಸಭಾ ಕ್ಷೇತ್ರದ ನೆಲ್ಲಿಕತ್ರಿ ಗಿರಿಜನ ಹಾಡಿಯಲ್ಲಿ ನಾಲ್ಕು ಗಂಟೆ ತಡವಾಗಿ ಮತದಾನ ಆರಂಭವಾಗಿರುವ ಘಟನೆ ನಡೆದಿದೆ. “ನಮಗೆ ಕನಿಷ್ಠ ಮೂಲಸೌಕರ್ಯವಿಲ್ಲ. ನಮ್ಮ ಮನವಿಗೆ ಯಾರೂ ಸ್ಪಂಧಿಸಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ” ಎಂದು ಇಲ್ಲಿನ ಮತದಾರರು ದೂರ ಉಳಿದಿದ್ದರು. ಅರಣ್ಯ ಇಲಾಖೆ ಹಾಗೂ ಗಿರಿಜನ ಕಲ್ಯಾಣ ಇಲಾಖೆ ಅಧಿಕಾರಿಗಳು ಸೌಲಭ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ ಬಳಿಕ ಬೆಳಿಗ್ಗೆ 10:45ರವರ ಬಳಿಕ ಮತದಾನ ಆರಂಭವಾಯಿತು.

ಪ್ರತಿಸ್ಪರ್ಧಿಗಳ ಮೇಲೆ ಹಲ್ಲೆ

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್‌ನಲ್ಲಿರುವ ಮತಗಟ್ಟೆಯೊಂದರಲ್ಲಿ ಕೆಲ ಯುವಕರು ಕೋಲು ಹಿಡಿದು ತಮ್ಮ ರಾಜಕೀಯ ಪ್ರತಿಸ್ಪರ್ಧಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮತಗಟ್ಟೆಯಲ್ಲೇ ಮಹಿಳೆಗೆ ಸಹಜ ಹೆರಿಗೆ

ಮತದಾನ ಮಾಡಲು ಬಂದಿದ್ದ ಗರ್ಭಿಣಿಗೆ ಮತಗಟ್ಟೆ ಕೇಂದ್ರದಲ್ಲಿಯೇ ಸಹಜ ಹೆರಿಗೆಯಾದ ಘಟನೆ ನಡೆದಿದೆ. ಕುರುಗೋಡು ತಾಲ್ಲೂಕಿನ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228ರಲ್ಲಿ ಈ ಘಟನೆ ಜರುಗಿದೆ.

ಗ್ರಾಮದ ಮಣಿಲಾ ಎನ್ನುವ ತುಂಬು ಗರ್ಭಿಣಿ ಬೆಳಿಗ್ಗೆ 10 ಗಂಟೆಯ ವೇಳೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದರು. ನಂತರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೇಂದ್ರದಲ್ಲಿಯೇ ಸಹಜ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕೂಡಲೇ ತಾಯಿ, ಮಗುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಇಬ್ಬರೂ ಆರೋಗ್ಯವಾಗಿದ್ದಾರೆ.

ವಿಧಾನಸಭೆ ಚುನಾವಣೆ | ಮತದಾನಕ್ಕೆ ಬಂದ ಮಹಿಳೆಗೆ ಕೇಂದ್ರದಲ್ಲಿಯೇ ಸಹಜ ಹೆರಿಗೆ
ಚಿತ್ರ ಕೃಪೆ: ಪ್ರಜಾವಾಣಿ

ಮತದಾರರ ಮೇಲೆ ಕೈ ಮಾಡಿದ ಸಿ.ಎಸ್.ಪುಟ್ಟರಾಜು

ಮಂಡ್ಯ ಜಿಲ್ಲೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿರುವ ಮೇಲುಕೋಟೆಯಲ್ಲಿ ರೈತ ಸಂಘ ಮತ್ತು ಜೆಡಿಎಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನಾರಾಯಣಪುರ ಮತಗಟ್ಟೆಯಲ್ಲಿ ರೈತಸಂಘದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಹಿರಿಯ ನಾಗರಿಕರನ್ನು ಕರೆತಂದು ಮತ ಹಾಕಿಸುವ ವಿಚಾರಕ್ಕೆ ಗಲಾಟೆಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲೇ ಘಟನೆ ನಡಿದಿದ್ದು, ವಿಡಿಯೊ ಮಾಡುತ್ತಿದ್ದ ಇಬ್ಬರು ಯುವಕರಿಗೆ ಸಿ.ಎಸ್.ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದಾರೆ. ಪುಟ್ಟರಾಜು ವಿರುದ್ಧ ರೈತಸಂಘದ ಸದಸ್ಯರು ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಇತ್ತು. ಸ್ಥಳಕ್ಕೆ ಬಂದ ಪೊಲೀಸರು ಗುಂಪು‌ ಚದುರಿಸಿದ್ದಾರೆ.

ಬಿಜೆಪಿ ಬಟನ್ ಒತ್ತಿ ಸಿಕ್ಕಿಬಿದ್ದ ಅಧಿಕಾರಿ

ಮತ ಹಾಕಲು ಸಹಕರಿಸಲು ಹೋಗಿದ್ದ ಅಧಿಕಾರಿ ಬಿಜೆಪಿ ಬಟನ್‌ ಒತ್ತಿರುವ ಘಟನೆ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ನಡೆದಿದೆ. ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಉಗ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಮಹಿಳೆಯು ಕಾಂಗ್ರೆಸ್‌ ಬಟನ್ ಒತ್ತುವಂತೆ ಹೇಳಿದರೂ, ಅಧಿಕಾರಿ ಬಿಜೆಪಿ ಬಟನ್ ಒತ್ತಿರುವುದು ಬಯಲಾಗಿದೆ. ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಕ್ಷಣಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿ ಮೇಲೆ ಆರೋಪ ಬಂದಿದ್ದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಯವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅವರು ಅಧಿಕಾರಿಯನ್ನು ಬದಲಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...