Homeಕರ್ನಾಟಕವಿಧಾನಸಭಾ ಚುನಾವಣೆ ಅಪ್‌ಡೇಟ್ಸ್‌: ಎಲ್ಲೆಲ್ಲಿ ಏನಾಯ್ತು?

ವಿಧಾನಸಭಾ ಚುನಾವಣೆ ಅಪ್‌ಡೇಟ್ಸ್‌: ಎಲ್ಲೆಲ್ಲಿ ಏನಾಯ್ತು?

ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 52.18ರಷ್ಟು ಮತದಾನ ನಡೆದಿದ್ದು, ಕೆಲವೆಡೆ ಅಹಿತಕರ ವರದಿಗಳಾಗಿವೆ.

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯು ಹಲವು ಘಟನೆಗಳಿಗೆ ಸಾಕ್ಷಿಯಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 52.18ರಷ್ಟು ಮತದಾನ ನಡೆದಿದ್ದು, ಕೆಲವೆಡೆ ಅಹಿತಕರ ವರದಿಗಳಾಗಿವೆ.

ಮತಯಂತ್ರ, ವಿವಿ ಪ್ಯಾಡ್ ಧ್ವಂಸ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳನ್ನು ಧ್ವಂಸಗೊಳಿಸಿದ್ದು, ಮತಗಟ್ಟೆ ಅಧಿಕಾರಿಗಳ ವಾಹನಗಳಿಗೆ ಹಾನಿ ಮಾಡಿದ್ದಾರೆ.

ಹೆಚ್ಚುವರಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದ್ದಾಗ ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ಆಕ್ರೋಶಗೊಂಡು ಇವಿಎಂಗಳನ್ನು ಒಡೆದು ಹಾಕಿದ್ದಾರೆ ಎಂಬ ವರದಿಯಾಗಿದೆ. ಈ ಸಂಬಂಧ 20-25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

‘ಕೈ’ ಕಾರ್ಯಕರ್ತರಿಗೆ ಸಿಕ್ಕಿಬಿದ್ದ ನಕಲಿ ಮತದಾರರು

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರದ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಇವರನ್ನು ಕರೆತಂದಿದ್ದರು ಎಂಬ ಆರೋಪ ಬಂದಿದೆ.

ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೋಳಿ, ಸೀರೆ ಹಿಂತಿರುಗಿಸಿದ ಮತದಾರರು

ಸೀರೆ, ಕೋಳಿ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತದಾರರಿಗೆ ಆಮಿಷವೊಡ್ಡಲು ಬಿಜೆಪಿ ಅಭ್ಯರ್ಥಿ, ಸಚಿವ ನಾರಾಯಣ ಗೌಡ ಅವರು ಯತ್ನಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ. ಎಲ್ಲ ವಸ್ತುಗಳನ್ನು ಹಿಂತಿರುಗಿಸಿ, ಬಿಜೆಪಿಗೆ ಮತದಾರರು ಧಿಕ್ಕಾರ ಕೂಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. “ನಮಗೆ ನಿಮ್ಮ ಭಿಕ್ಷೆ ಬೇಡ ನಾವು ಬಿಜೆಪಿಗೆ ಓಟು ಹಾಕುವುದಿಲ್ಲ” ಎಂದು ಮತದಾರರು ಹೇಳಿದ್ದಾರೆ.

ಮತದಾನ ಮಾಡಿ ವಾಪಸ್ ಬರುವಾಗ ಕಾಡಾನೆ ದಾಳಿ

ಮತದಾನ ಮಾಡಿ ವಾಪಸ್ ಬರುವಾಗ ಹನೂರು ತಾಲ್ಲೂಕಿನ ಮಲೆ‌ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿಸಿದ್ದಾರೆ. ಇಲ್ಲಿನ ತೋಕೆರೆ ಗ್ರಾಮದ ಪುಟ್ಟಸ್ವಾಮಿ (50) ಮೃತರು.

ಮತಗಟ್ಟೆ ಬಳಿ ವೃದ್ಧೆ ಸಾವು

ಬೆಳಗಾವಿ ಜಿಲ್ಲೆಯ ಕೋ.ಶಿವಾಪುರ ಸಮೀಪದಲ್ಲಿ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪಾರವ್ವ ಈಶ್ವರ ಸಿದ್ನಾಳ(ಪನದಿ) (68) ಸಾವಿಗೀಡಾದವರು.

ತಡವಾಗಿ ಆರಂಭವಾದ ಮತದಾನ

ಹನೂರು ವಿಧಾನಸಭಾ ಕ್ಷೇತ್ರದ ನೆಲ್ಲಿಕತ್ರಿ ಗಿರಿಜನ ಹಾಡಿಯಲ್ಲಿ ನಾಲ್ಕು ಗಂಟೆ ತಡವಾಗಿ ಮತದಾನ ಆರಂಭವಾಗಿರುವ ಘಟನೆ ನಡೆದಿದೆ. “ನಮಗೆ ಕನಿಷ್ಠ ಮೂಲಸೌಕರ್ಯವಿಲ್ಲ. ನಮ್ಮ ಮನವಿಗೆ ಯಾರೂ ಸ್ಪಂಧಿಸಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ” ಎಂದು ಇಲ್ಲಿನ ಮತದಾರರು ದೂರ ಉಳಿದಿದ್ದರು. ಅರಣ್ಯ ಇಲಾಖೆ ಹಾಗೂ ಗಿರಿಜನ ಕಲ್ಯಾಣ ಇಲಾಖೆ ಅಧಿಕಾರಿಗಳು ಸೌಲಭ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ ಬಳಿಕ ಬೆಳಿಗ್ಗೆ 10:45ರವರ ಬಳಿಕ ಮತದಾನ ಆರಂಭವಾಯಿತು.

ಪ್ರತಿಸ್ಪರ್ಧಿಗಳ ಮೇಲೆ ಹಲ್ಲೆ

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್‌ನಲ್ಲಿರುವ ಮತಗಟ್ಟೆಯೊಂದರಲ್ಲಿ ಕೆಲ ಯುವಕರು ಕೋಲು ಹಿಡಿದು ತಮ್ಮ ರಾಜಕೀಯ ಪ್ರತಿಸ್ಪರ್ಧಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮತಗಟ್ಟೆಯಲ್ಲೇ ಮಹಿಳೆಗೆ ಸಹಜ ಹೆರಿಗೆ

ಮತದಾನ ಮಾಡಲು ಬಂದಿದ್ದ ಗರ್ಭಿಣಿಗೆ ಮತಗಟ್ಟೆ ಕೇಂದ್ರದಲ್ಲಿಯೇ ಸಹಜ ಹೆರಿಗೆಯಾದ ಘಟನೆ ನಡೆದಿದೆ. ಕುರುಗೋಡು ತಾಲ್ಲೂಕಿನ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228ರಲ್ಲಿ ಈ ಘಟನೆ ಜರುಗಿದೆ.

ಗ್ರಾಮದ ಮಣಿಲಾ ಎನ್ನುವ ತುಂಬು ಗರ್ಭಿಣಿ ಬೆಳಿಗ್ಗೆ 10 ಗಂಟೆಯ ವೇಳೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದರು. ನಂತರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೇಂದ್ರದಲ್ಲಿಯೇ ಸಹಜ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕೂಡಲೇ ತಾಯಿ, ಮಗುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಇಬ್ಬರೂ ಆರೋಗ್ಯವಾಗಿದ್ದಾರೆ.

ವಿಧಾನಸಭೆ ಚುನಾವಣೆ | ಮತದಾನಕ್ಕೆ ಬಂದ ಮಹಿಳೆಗೆ ಕೇಂದ್ರದಲ್ಲಿಯೇ ಸಹಜ ಹೆರಿಗೆ
ಚಿತ್ರ ಕೃಪೆ: ಪ್ರಜಾವಾಣಿ

ಮತದಾರರ ಮೇಲೆ ಕೈ ಮಾಡಿದ ಸಿ.ಎಸ್.ಪುಟ್ಟರಾಜು

ಮಂಡ್ಯ ಜಿಲ್ಲೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊಮ್ಮಿರುವ ಮೇಲುಕೋಟೆಯಲ್ಲಿ ರೈತ ಸಂಘ ಮತ್ತು ಜೆಡಿಎಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನಾರಾಯಣಪುರ ಮತಗಟ್ಟೆಯಲ್ಲಿ ರೈತಸಂಘದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಹಿರಿಯ ನಾಗರಿಕರನ್ನು ಕರೆತಂದು ಮತ ಹಾಕಿಸುವ ವಿಚಾರಕ್ಕೆ ಗಲಾಟೆಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲೇ ಘಟನೆ ನಡಿದಿದ್ದು, ವಿಡಿಯೊ ಮಾಡುತ್ತಿದ್ದ ಇಬ್ಬರು ಯುವಕರಿಗೆ ಸಿ.ಎಸ್.ಪುಟ್ಟರಾಜು ಕಪಾಳಕ್ಕೆ ಹೊಡೆದಿದ್ದಾರೆ. ಪುಟ್ಟರಾಜು ವಿರುದ್ಧ ರೈತಸಂಘದ ಸದಸ್ಯರು ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಇತ್ತು. ಸ್ಥಳಕ್ಕೆ ಬಂದ ಪೊಲೀಸರು ಗುಂಪು‌ ಚದುರಿಸಿದ್ದಾರೆ.

ಬಿಜೆಪಿ ಬಟನ್ ಒತ್ತಿ ಸಿಕ್ಕಿಬಿದ್ದ ಅಧಿಕಾರಿ

ಮತ ಹಾಕಲು ಸಹಕರಿಸಲು ಹೋಗಿದ್ದ ಅಧಿಕಾರಿ ಬಿಜೆಪಿ ಬಟನ್‌ ಒತ್ತಿರುವ ಘಟನೆ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ನಡೆದಿದೆ. ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಉಗ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಮಹಿಳೆಯು ಕಾಂಗ್ರೆಸ್‌ ಬಟನ್ ಒತ್ತುವಂತೆ ಹೇಳಿದರೂ, ಅಧಿಕಾರಿ ಬಿಜೆಪಿ ಬಟನ್ ಒತ್ತಿರುವುದು ಬಯಲಾಗಿದೆ. ಚಿತ್ತಾಪುರ ತಾಲ್ಲೂಕಿನ ಚಾಮನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಕ್ಷಣಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಿ.ಸಿ. ಚವ್ಹಾಣ ಎಂಬ ಚುನಾವಣಾ ಅಧಿಕಾರಿ ಮೇಲೆ ಆರೋಪ ಬಂದಿದ್ದು ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಯವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಚಿತ್ತಾಪುರ ಚುನಾವಣಾಧಿಕಾರಿ ನವೀನ್ ಕುಮಾರ್ ಯು. ಅವರು ಅಧಿಕಾರಿಯನ್ನು ಬದಲಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...