Homeಕರ್ನಾಟಕವಿಧಾನಸಭೆಗೆ ಯಡಿಯೂರಪ್ಪ ವಿದಾಯ: ಶಿಕಾರಿಪುರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಬಹುದೆ?

ವಿಧಾನಸಭೆಗೆ ಯಡಿಯೂರಪ್ಪ ವಿದಾಯ: ಶಿಕಾರಿಪುರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಬಹುದೆ?

ಬಿ.ವೈ ವಿಜಯೇಂದ್ರರಿಗೆ ಪೈಪೋಟಿ ಕೊಡಲು ಸಜ್ಜಾಗಿದ್ದಾರೆ ಸಾದಲಿಂಗಾಯಿತ ಸಮುದಾಯದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಾಗರಾಜಗೌಡ...

- Advertisement -
- Advertisement -

ಶಿಕಾರಿಪುರ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಬಿಜೆಪಿ ಪಕ್ಷದ ಯಡಿಯೂರಪ್ಪ ತಮ್ಮ ಮಗ ವಿಜಯೇಂದ್ರರಿಗೆ ಬಿಟ್ಟುಕೊಡುವ ಘೋಷಣೆ ಮಾಡಿದ ಕ್ಷಣದಿಂದ ಇಲ್ಲಿನ ಚಟುವಟಿಕೆಗಳು ತೀವ್ರಗೊಂಡಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳು ಎರಡು ಲಕ್ಷ ರೂಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕಾಂಗ್ರೆಸ್ ಸುತ್ತೋಲೆ ಹೊರಡಿಸಿದ ಮೇಲೆ ಶಿಕಾರಿಪುರದಿಂದ ಬಳ್ಳಿಗಾವಿಯ ಪುಷ್ಪ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಇವರ ಪತಿ ಪಿ.ಓ ಶಿವಕುಮಾರ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿ. ಪುಷ್ಪ ಅವರ ಮಾವ ಕಡೂರು ಕ್ಷೇತ್ರದ ಶಾಸಕರಾಗಿದ್ದ ಓಂಕಾರ ಮೂರ್ತಿಯವರು. ಪಿ.ಓ ಶಿವಕುಮಾರ್ ತಮ್ಮ ಬಹುಪಾಲು ಸರ್ವಿಸ್‌ಅನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದವರು. ಆಳುವ ಪಕ್ಷದ ನಿಷ್ಠಾವಂತ ಸೇವಕರಾದ ಇವರು ಯಡಿಯೂರಪ್ಪನವರಿಗೆ ಹಿಂದಿನಿಂದಲೂ ನಿಷ್ಠರು. ಚುನಾವಣಾ ಖರ್ಚಿಗೆ ಬೇಕಾದಕ್ಕಿಂತಲೂ ಹೆಚ್ಚಿನ ಹಣವೂ ಇವರ ಬಳಿ ಇದೆ. ಆದರೆ, ಪುಷ್ಪರ ಚುನಾವಣಾ ಖರ್ಚನ್ನು ಯಡಿಯೂರಪ್ಪನವರೇ ನಿಭಾಯಿಸಬಲ್ಲರು. ಕುತೂಹಲವೆಂದರೆ ಪುಷ್ಪ ಸಾದಲಿಂಗಾಯಿತ ಸಮುದಾಯದವರೇ ಕೂಡ. ಅವರು ಕಾಂಗ್ರೆಸ್ ಕ್ಯಾಂಡಿಡೇಟ್ ಆಗಲು ಯಡಿಯೂರಪ್ಪನವರೇ ಸಂಚು ಮಾಡಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೆ, ಮಗನನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಲು, ಕಾಂಗ್ರೆಸ್‌ನಿಂದ ದುರ್ಬಲ ಕ್ಯಾಂಡಿಡೇಟ್ ನಿಲ್ಲಿಸಿ ಅಖಾಡ ನಿರ್ಮಿಸುವ ಚಾಣಾಕ್ಷತನ ಯಡಿಯೂರಪ್ಪನವರದು ಎಂಬ ಗುಲ್ಲಿದೆ. ಹೇಗಿದ್ದರೂ ಸಿದ್ದರಾಮಯ್ಯ ಯಡಿಯೂರಪ್ಪನವರ ನಡುವೆ ಸಂಬಂಧ ಚೆನ್ನಾಗಿದೆ; ಇನ್ನು ಡಿ.ಕೆ ಶಿವಕುಮಾರರೊಡನೆ ವ್ಯಾವಹಾರಿಕ ಸಂಬಂಧವೂ ಇದೆಯಂತೆ. ಆದ್ದರಿಂದ ಕಾಂಗ್ರೆಸ್‌ನಿಂದ ದುರ್ಬಲವಾದ ಅಭ್ಯರ್ಥಿ ನಿಲ್ಲಿಸುತ್ತಾರೆಂಬುದು ಶಿಕಾರಿಪುರದ ಜನಗಳ ಊಹೆ.

ಶಿಕಾರಿಪುರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕುರುಬ ಜನಾಂಗದ ಗೋಣಿ ಮಾಲತೇಶ್ ಶಕ್ತಿವಂತ ಅಭ್ಯರ್ಥಿಯಾದರೂ ವಿಜಯೇಂದ್ರ ಎದುರು ಗೆಲ್ಲಲಾಗುವುದಿಲ್ಲ. ಗೆಲ್ಲಬೇಕಾದರೆ ಇಲ್ಲಿನ ಬಹುಸಂಖ್ಯಾತರಾದ ಸಾದಲಿಂಗಾಯಿತರ ಓಟು ಪಡೆಯಬೇಕು. ಸಾದರು ತಮ್ಮ ಜನಾಂಗದ ಅಭ್ಯರ್ಥಿಯನ್ನು ಬಿಟ್ಟು ಇತರರಿಗೆ ಓಟು ಮಾಡಿದ ಇತಿಹಾಸವಿಲ್ಲ. ಈ ಹಿಂದೆ ಅಂತಹದೊಂದು ಇತಿಹಾಸ ಜರುಗುವುದಿತ್ತು. ಯಡಿಯೂರಪ್ಪ ಎದುರು ನಿಂತಿದ್ದ ನಗರದ ಮಹದೇವಪ್ಪ (1989-ಪಕ್ಷೇತರ ಅಭ್ಯರ್ಥಿ) ಕಡಿಮೆ ಅಂತರದಿಂದ (2274 ಮತಗಳು) ಸೋತರು. ಕಾಂಗ್ರೆಸ್‌ನವರು ಅಂದು ಮಹದೇವಪ್ಪನವರಿಗೆ ಸಹಾಯ ಮಾಡಿದ್ದರೆ ಗೆದ್ದುಬಿಡುತ್ತಿದ್ದರು. ಅದೊಂದು ಇತಿಹಾಸವಾಗಿ ದಾಖಲಾಗುತ್ತಿತ್ತು. ಅದಾಗಲಿಲ್ಲ. ಆದರೆ, ಆ ನಂತರ ಇನ್ನೊಂದು ಪ್ರಯೋಗವನ್ನು ಬಂಗಾರಪ್ಪ ಮಾಡಿದರು.

ಸಾದಲಿಂಗಾಯಿತರ ಮಹಾಲಿಂಗಪ್ಪನವರನ್ನು (1999-ಕಾಂಗ್ರೆಸ್) ಗೆಲ್ಲಿಸಿ ಎಸ್‌ಎಂ ಕೃಷ್ಣರಿಗೆ ವಿರೋಧ ಪಕ್ಷವೇ ಇಲ್ಲದಂತೆ ಮಾಡಿದ್ದರು. ಈಗ ಕಾಲ ಸರಿದಿದೆ; ಮತದಾರ ಹಳೆ ಕ್ಯಾಂಡಿಡೇಟ್‌ಗಳನ್ನ ಗುಜರಿಗೆ ಹಾಕಿ ಹೊಸ ಮುಖಗಳಿಗಾಗಿ ಹಂಬಲಿಸುತ್ತಿದ್ದಾರೆ. ಇಂತಹ ವೇಳೆಯಲ್ಲಿ ಯಡಿಯೂರಪ್ಪ ಭ್ರಷ್ಟ ಆರೋಪಗಳನ್ನು ಹಾಸುಹೊದ್ದಿರುವ ವಿಜಯೇಂದ್ರರನ್ನು ಶಿಕಾರಿಪುರಕ್ಕೆ ತಂದಿದ್ದಾರೆ. ಯಡಿಯೂರಪ್ಪ ಶಿಕಾರಿಪುರಕ್ಕೆ ತಂದಿರುವ ಕಟ್ಟಡಗಳನ್ನ ನೋಡಿದರೆ ವಿಜಯೇಂದ್ರ ಅನಾಯಾಸವಾಗಿ ಗೆಲ್ಲಬಹುದು. ಆದರೆ ಅದಾಗುವುದಿಲ್ಲ ಏಕೆಂದರೆ ವಿಜಯೇಂದ್ರ ಶಾಸಕ, ಮಂತ್ರಿ ಇದ್ಯಾವುದೂ ಆಗದೆ ಭ್ರಷ್ಟತೆಯ ಆರೋಪ ಹೊತ್ತಿದ್ದಾರೆ. ನಲವತ್ತು ಪರಸೆಂಟ್ ಕಮಿಷನ್ ದೂರು ಇವರ ಕೈಗೂ ಅಂಟಿದೆ. ಅದಕ್ಕಿಂತಲೂ ಸರಕಾರದ ಮಟ್ಟದ ಬಹುದೊಡ್ಡ ಹಗರಣಗಳಲ್ಲೂ ಇವರ ಹೆಸರು ಕೇಳಿಬಂದಿದೆ. ಕ್ಷೇತ್ರದ ಅನುದಾನಕ್ಕಾಗಿ ಶಾಸಕರು ಇವರೆದುರು ಕೈಕಟ್ಟಿ ವಿಧೇಯತೆಯಿಂದ ನಿಂತ ಉದಾಹರಣೆಗಳಿವೆ. ಆದ್ದರಿಂದ ಇವರ ಗೆಲುವು ಸ್ವಪಕ್ಷೀಯರಿಗೇ ಬೇಕಿಲ್ಲ. ಇನ್ನು ಕ್ಷೇತ್ರದ ಮತದಾರರ ಅಭಿಪ್ರಾಯ ಕೇಳಿದರೆ, ’ಎಲ್ಲೊ ಹೋಗುತ್ತಿದ್ದವರು ಇಲ್ಲಿ ಇಳಿದುಹೋಗಬಲ್ಲರೇ ಹೊರತು ಶಿಕಾರಿಪುರಕ್ಕೂ ಇವರಿಗೂ ಸಂಬಂಧ ಬೆಳೆಯಲಾರದು’ ಎನ್ನುತ್ತಾರೆ.

ನಾಗರಾಜಗೌಡ

ಯಡಿಯೂರಪ್ಪ ಕ್ಷೇತ್ರಕ್ಕೆ ಮಂಜೂರು ಮಾಡಿದ ಕಾರ್ಯಕ್ರಮಗಳು, ಒಂದು ಪಾರ್ಟಿ ಮತ್ತು ಒಂದು ವರ್ಗಕ್ಕೆ ಸೀಮಿತವಾಗಿ ಹಂಚಿಕೆಯಾಗಿದೆ. ಅದರಲ್ಲೂ ಲಂಚ ನಡೆದಿದೆಯೆಂದ ಆರೋಪವಿದೆ; ಗಂಗಾಕಲ್ಯಾಣದಂತಹ ಕಾರ್ಯಕ್ರಮದಲ್ಲೂ ಕೂಡ. ಯಡಿಯೂರಪ್ಪನವರ ಬಗ್ಗೆ ನೀವೆಂತಹ ಆಪಾದನೆ ಮಾಡಿದರೂ ಅದವರಿಗೆ ತಾಗುವುದಿಲ್ಲ. ಏಕೆಂದರೆ ಅವರ ರಾಜಕಾರಣದ ಹಿನ್ನೆಲೆಯೇ ಹಾಗಿದೆ. ಶಿಕಾರಿಪುರ, ಶಿವಮೊಗ್ಗ, ಬೆಂಗಳೂರಿನಿಂದ ಹಿಡಿದು ವಿದೇಶದವರೆಗೂ ಅವರ ಆಸ್ತಿ ಬೆಳೆದಿದೆ. ಆದ್ದರಿಂದ ನಮ್ಮ ಕಷ್ಟಸುಖದ ವಿಷಯಕ್ಕೆ ಸ್ಥಳೀಯ ನಾಯಕ ಬೇಕು ಎಂಬುದು ಸ್ಥಳೀಯರ ವಾದ. ಅದಕ್ಕಾಗಿ ಸ್ಥಳೀಯವಾಗಿ ನಾಗರಾಜಗೌಡ ಎಂಬ ಯುವಕನನ್ನು ಪ್ರಜ್ಞಾವಂತ ಮತದಾರರು ಮುಂದುಮಾಡಿದ್ದಾರೆ.

ನಾಗರಾಜಗೌಡ ಸಾದಲಿಂಗಾಯಿತ ಸಮುದಾಯದವರಾಗಿದ್ದು ಮೂರು ಬಾರಿ ಕೌನ್ಸಿಲರ್ ಆಗಿದ್ದರು; ಈಗ ಕಾಂಗ್ರೆಸ್ಸಿನ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ನಾಗರಾಜಗೌಡರ ತಂದೆ ಹಾಗೂ ಚಿಕ್ಕಪ್ಪ ಶಾಂತವೀರಪ್ಪಗೌಡ ಯಡಿಯೂರಪ್ಪನವರ ಜೊತೆಯಲ್ಲೇ ರಾಜಕಾರಣ ಮಾಡಿದವರು; ಮತ್ತು ಅವರ ಸಂಚುಗಳಿಗೆ ಬಲಿಯಾದವರು ಎಂದು ಆರೋಪಿಸಲಾಗುತ್ತದೆ. ಈಗ ತಮ್ಮ ಮಗನನ್ನೇ ತಂದು ಪ್ರತಿಷ್ಠಾಪಿಸುವುದರ ವಿರುದ್ಧ ಇವರೆಲ್ಲಾ ತಿರುಗಿಬಿದ್ದಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೊಡಬೇಕಾದರೆ ಕ್ಷೇತ್ರದ ಸಮೀಕ್ಷೆ ಮಾಡಿ ಜನಾಭಿಪ್ರಾಯ ಸಂಗ್ರಹಿಸುತ್ತದೆ ಎಂಬ ಸುದ್ದಿಯಿಂದ ಸೌಮ್ಯ ಸ್ವಭಾವದ ನಾಗರಾಜಗೌಡ ಈಗಾಗಲೇ ಕ್ಷೇತ್ರ ಸುತ್ತಿ ಸಮೀಕ್ಷಕರ ತೀರ್ಪಿಗಾಗಿ ಕಾಯುತ್ತಿದ್ದಾರೆ. ಶಿಕಾರಿಪುರದಲ್ಲಿ ಸಾದಲಿಂಗಾಯಿತರು, ಕುರುಬರು ಮತ್ತು ಮುಸ್ಲಿಮರು ಒಮ್ಮುಖವಾಗಿ ಮತಚಲಾಯಿಸಿದರೆ ಸಾಕು ಆ ಅಭ್ಯರ್ಥಿ ಗೆಲುವು ಸಲೀಸಾದಂತೆಯೇ!

ಇದನ್ನೂ ಓದಿ: ವಿಚಾರಕ್ರಾಂತಿಗೆ ಆಹ್ವಾನ: ಆಗ- ಈಗ

ಯಡಿಯೂರಪ್ಪರ ಬಗೆಗಿನ ಭ್ರಮನಿರಸನಕ್ಕೆ ಕಾರಣಗಳಿವೆ; ಅವರ ಅಧಿಕಾರಾವಧಿಯಲ್ಲಿ ಬೃಹತ್ ಕಟ್ಟಡಗಳು ಬಂದಿವೆ. ರಸ್ತೆ ಅಗಲೀಕರಣಗೊಂಡಿದೆ. ಆಸ್ಪತ್ರೆ ಕಟ್ಟಡವೂ ಇದೆ. ಕಲೆ ಸಾಹಿತ್ಯ ಸಂಗೀತದಿಂದ ದೂರವಿರುವ ಯಡಿಯರಪ್ಪನವರಿಗೂ ಇವುಗಳಿಗೆ ಸಂಬಂಧಿಸಿದ ಮಂದಿರಗಳಿಗೂ ಸಂಬಂಧವಿಲ್ಲ, ಹಾಗಾಗಿ ಇವೆಲ್ಲಾ ಹಾಳುಬಿದ್ದಿವೆ. ಅಲ್ಲದೆ, ಯಡಿಯೂರಪ್ಪ ರೈತರನ್ನು ಮುಂದಿಟ್ಟುಕೊಂಡು ಮಾಡಿದ ಚಳವಳಿ ಮಣ್ಣು ಸೇರಿದೆ; ಯಾವ ಬಗರ್ ಹುಕುಂ ರೈತರನ್ನ ಸಂಘಟಿಸಿ ಒಮ್ಮೆ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಜಾಥ ತೆಗೆದರೋ, ಅವರೇ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾಗ ರೈತರ ಕಡೆ ತಿರುಗಿಯೂ ನೋಡಲಿಲ್ಲ. ಆಗ ರೈತನಾಯಕ ಕಡಿದಾಳು ಶಾಮಣ್ಣನವರ ನೇತೃತ್ವದಲ್ಲಿ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಕಾಲ್ನಡಿಗೆಯಲ್ಲ ರೈತರ ಜಾಥ ನಡೆಯಿತು. ಈಗೇನಾಗಿದೆ ಎಂದರೆ ಬಗರ್ ಹುಕುಂ ರೈತರು ಒಕ್ಕಲೇಳುವಂತಾಗಿದೆ. ಇವರನ್ನು ಭೂಗಳ್ಳರು ಎಂದು ಪಟ್ಟಿಮಾಡಿ ನೋಟಿಸ್ ಜಾರಿಮಾಡಲು ತಯಾರಿ ನಡೆದಿತ್ತು. ಆದರೆ ರಾಜಕೀಯ ಕಾರಣಕ್ಕಾಗಿ ಅಪ್ಪಮಕ್ಕಳು ತಡೆಹಿಡಿಸಿದ್ದಾರೆ. ಈ ತಾತ್ಕಾಲಿಕ ತಡೆಯಿದ್ದರೂ ರೈತರ ಭಯವೇನೂ ಕಮ್ಮಿಯಾಗಿಲ್ಲ. ಇದು ಯಡಿಯೂರಪ್ಪನವರ ಮಗನ ಮೇಲೆ ಪರಿಣಾಮ ಬೀರುವುದು ಗ್ಯಾರಂಟಿ. ಶರಾವತಿ ಮುಳುಗಡೆಯ ರೈತರೂ ಇಲ್ಲಿದ್ದಾರೆ. ಅಲ್ಲಿ ಹತ್ತು ಎಕರೆ ಕಳೆದುಕೊಂಡವರು ಇಲ್ಲಿ ಎರಡು ಎಕರೆ ಮಾಲೀಕರು; ಅದೂ ಸರಕಾರಿ ಭೂಮಿ. ಮತ್ತು ಕೂಡ್ಲಿ ಶೃಂಗೇರಿ ಮಠದ ಆರುನೂರು ಎಕರೆ ಭೂಮಿಯಲ್ಲಿ ಸಂತ್ರಸ್ತರು ಬಗರ್ ಹುಕುಂ ಬೇಸಾಯ ಮಾಡುತ್ತಿದ್ದಾರೆ. ಶಿಕಾರಿಪುರ ಫಲವತ್ತಾದ ಭೂಪ್ರದೇಶ. ಇಲ್ಲಿ ಭೂಮಿ ನೀಡಿದರೆ ಸಾಕು, ಎರಡು ಎಕರೆಯಲ್ಲಿ ಬೇಕಾದರೂ ಜೀವಿಸಬಹುದು; ಆದರೆ ಅದಕ್ಕೂ ಸಂಚಕಾರ ಬಂದಿದೆ. ತಮ್ಮ ಬಹುದೀರ್ಘ ರಾಜಕಾರಣಕ್ಕೆ ಇಲ್ಲಿನ ರೈತರನ್ನು ಬಳಸಿಕೊಂಡು ಮೇಲೆ ಬಂದು ನಾಲ್ಕು ಬಾರಿ ಮುಖ್ಯಮಂತ್ರಿಯಾದ ಯಡಿಯೂರಪ್ಪ ತಮ್ಮ ಬಗರ್ ಹುಕುಂ ಕ್ಷೇತ್ರಕ್ಕೆ ವಾರಸುದಾರನನ್ನು ಸ್ಥಾಪಿಸಿ, ಆತನ ಖಾತೆಗೆ ಶಿಕಾರಿಪುರ ಕ್ಷೇತ್ರವನ್ನು ಸೇರಿಸುವ ಸಂಚಿನ ವಿರುದ್ಧ ಇಲ್ಲಿನ ಮತದಾರ ಸಿಡಿದೆದ್ದಿದ್ದಾನೆ. ಈ ಸಮಯದಲ್ಲಿ ಕಾಂಗ್ರೆಸ್ ಎಚ್ಚರಿಕೆಯಿಂದ ನಡೆದುಕೊಳ್ಳಬಹುದಾಗಿದೆ; ಏಕೆಂದರೆ ವಿಜಯೇಂದ್ರ ಮತ್ತು ನಾಗರಾಜಗೌಡ ನಡುವೆ ನೇರಾನೇರ ಸ್ಪರ್ಧೆ ಏರ್ಪಟ್ಟರೆ, ಮಧ್ಯೆ ಒಬ್ಬ ಸೋಲುವ ನಾಮಕಾವಸ್ಥೆಯ ಅಭ್ಯರ್ಥಿಯನ್ನು ಹಾಕಲು ಕುಮಾರಸ್ವಾಮಿ ಸಿದ್ಧವಾಗುವ ಸಾಧ್ಯತೆಯಿದೆ.

ಶಿಕಾರಿಪುರದ ಸಂಪೂರ್ಣ ಸಮೀಕ್ಷೆ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿಕಾರಿಪುರ: ಯಡಿಯೂರಪ್ಪ ಸಂಸ್ಥಾನದಲ್ಲಿ ಬಿಜೆಪಿಯೇ ಕಾಣೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...