Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...