Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...