Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...