Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...