Homeಕರ್ನಾಟಕವಿಧಾನಸಭೆ, ಸಂಸತ್ತಿನ ಅಧಿವೇಶನಗಳು ಪುನರಾರಂಭ : ಬಜೆಟ್ ಮೇಲೆ ಚರ್ಚೆ

ವಿಧಾನಸಭೆ, ಸಂಸತ್ತಿನ ಅಧಿವೇಶನಗಳು ಪುನರಾರಂಭ : ಬಜೆಟ್ ಮೇಲೆ ಚರ್ಚೆ

- Advertisement -
- Advertisement -

ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಇಂದಿನಿಂದ (ಮಾ.10) ಆರಂಭಗೊಂಡಿದ್ದು, ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಕುರಿತ ಚರ್ಚೆ ಶುರುವಾಗಿದೆ.

ಜನವರಿ 31ರಂದು ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಿತ್ತು. ಅಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದ ಬಳಿಕ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ್ದರು. ಮರುದಿನ, ಅಂದರೆ ಫೆಬ್ರವರಿ 1ರಂದು ವಿತ್ತ ಸಚಿವೆ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ಆ ಬಳಿಕ ಚರ್ಚೆಗಳು ನಡೆದು, ಫೆಬ್ರವರಿ 13ರಂದು ಮೊದಲ ಹಂತದ ಅಧಿವೇಶನ ಮುಕ್ತಾಯಗೊಂಡಿತ್ತು.

ಇಂದಿನಿಂದ (ಮಾ.10) ಎರಡನೇ ಹಂತದ ಅಧಿವೇಶನ ಆರಂಭಗೊಂಡಿದ್ದು, ಏಪ್ರಿಲ್ 4ರಂದು ಬಜೆಟ್ ಅಧಿವೇಶನ ಮುಕ್ತಾಯಗೊಳ್ಳಲಿದೆ.

ಕೇಂದ್ರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಜ್ಜು

ಎರಡನೇ ಹಂತದ ಬಜೆಟ್ ಅಧಿವೇಶನದಲ್ಲಿ ಮತದಾರರ ಪಟ್ಟಿಗಳಲ್ಲಿ ಆಗಿರುವ ಅಕ್ರಮ, ವಕ್ಫ್ ಮಸೂದೆ, ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡನೆ ಮತ್ತು ಟ್ರಂಪ್ ಆಡಳಿತ ಭಾರತದ ಆಮದಿನ ಮೇಲೆ ಸುಂಕ ಹೇರಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಕಟ್ಟಿ ಹಾಕಲು ಈಗಾಗಲೇ ವಿಪಕ್ಷಗಳು ಸಜ್ಜಾಗಿವೆ.

ಕ್ಷೇತ್ರ ಪುನರ್‌ವಿಂಗಡನೆ ಮತ್ತು ಹಿಂದಿ ಹೇರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಈಗಾಗಲೇ ಜಟಾಪಟಿ ಏರ್ಪಟ್ಟಿದೆ. ಈ ವಿಚಾರ ಮುಂದಿಟ್ಟುಕೊಂಡು ಸಂಸತ್ತಿನಲ್ಲಿ ಡಿಎಂಕೆ ಸಂಸದರು ಕೇಂದ್ರದ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಕ್ಷೇತ್ರ ಪುನರ್‌ವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಮಾತ್ರವಲ್ಲ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಕೂಡ ಸಂಸದೀಯ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದು, ಅಲ್ಲಿನ ಆಡಳಿತ, ಪ್ರತಿಪಕ್ಷಗಳಿಗೆ ಮನದಟ್ಟು ಮಾಡಿ ಕೇಂದ್ರದ ವಿರುದ್ದ ಪ್ರತಿಭಟನೆಗೆ ಇಳಿಸಲು ಡಿಎಂಕೆ ಯೋಜನೆ ರೂಪಿಸಿದೆ.

ವಕ್ಫ್‌ ಮಸೂದೆ ಮಂಡನೆ ಮತ್ತು ಪ್ರತಿಪಕ್ಷಗಳ ವಿರೋಧ

ಬಹು ಚರ್ಚಿತ ವಿಷಯವಾಗಿರುವ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಕೇಂದ್ರ ಸರ್ಕಾರ ಈ ಬಾರಿಯ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ವಕ್ಫ್‌ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಕೇಂದ್ರ ಸಚಿವ ಸಂಪುಟ ಕಳೆದ ವಾರ ಅನುಮೋದಿಸಿದೆ. ಜೆಪಿಸಿಯಲ್ಲಿ ಆಡಳಿತ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ತಿದ್ದುಪಡಿಗಳನ್ನು ಮಾತ್ರ ಅನುಮೋದಿಸಲಾಗಿದೆ. ಪ್ರತಿಪಕ್ಷಗಳು ಕೋರಿದ ತಿದ್ದುಪಡಿಗಳಲ್ಲಿಎಲ್ಲವನ್ನು ತಿರಸ್ಕರಿಸಲಾಗಿದೆ. ಇದು ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಕ್ಫ್ ಮಸೂದೆಯನ್ನು ವಿರೋಧಿಸಲು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಇತರ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ದ ಸಂಸತ್ತಿನ ಹೊರಗೆಯೂ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಭಾನುವಾರ (ಮಾ.9) ಮಂಗಳೂರು ನಗರದಲ್ಲೂ ಮುಸ್ಲಿಂ ಧಾರ್ಮಿಕ ನಾಯಕರ ನೇತೃತ್ವದಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಪ್ರತಿಭಟನೆ ನಡೆದಿದೆ.

ರಾಜ್ಯ ಬಜೆಟ್ ಅಧಿವೇಶನ

ಮಾರ್ಚ್ 3ರಂದು ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಾರಿ ಬರೋಬ್ಬರಿ 4 ಲಕ್ಷ ಕೋಟಿ ರೂಪಾಯಿ ಮೊತ್ತದ ಬಜೆಟ್ ಮಂಡಿಸಿದ್ದಾರೆ.

ಬಜೆಟ್ ಮಂಡನೆಯ ಬಳಿಕ ಮುಂದೂಡಿಕೆಯಾಗಿದ್ದ ಸದನ, ಇಂದಿನಿಂದ (ಮಾ.10) ಪುನರಾರಂಭಗೊಂಡಿದೆ. ಇಂದಿನಿಂದ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿವೆ. ಮಾರ್ಚ್ 21ರಂದು ಅಧಿವೇಶನ ಕೊನೆಗೊಳ್ಳಲಿದೆ.

ಸಿಎಂ ಸಿದ್ದರಾಮಯ್ಯ ಮಂಡಿಸಿದ ಈ ಬಾರಿಯ ಬಜೆಟ್‌ ಅನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ‘ಹಲಾಲ್ ಬಜೆಟ್’ ‘ಪಾಕಿಸ್ತಾನಿ ಬಜೆಟ್’ ಎಂದೆಲ್ಲ ಟೀಕಿಸಿವೆ. ಬಜೆಟ್‌ನಲ್ಲಿ ಮುಸ್ಲಿಮರಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ ಎಂಬ ಸುಳ್ಳು ಆರೋಪವನ್ನು ಮಾಡಿದೆ. ಇದಕ್ಕೆ ಈಗಾಗಲೇ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಪ್ರತ್ಯುತ್ತರ ಕೊಟ್ಟಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ‘ಮುಸ್ಲಿಂ ಪರ ಬಜೆಟ್’ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ಮೇಲೆ ಮುಗಿಬೀಳುವುದು ದಟ್ಟವಾಗಿದೆ. ಇದನ್ನು ರಾಜ್ಯ ಸರ್ಕಾರ ಹೇಗೆ ಎದುರಿಸಲಿದೆ. ತನ್ನ ಬಜೆಟ್‌ ಅನ್ನು ಹೇಗೆ ಸಮರ್ಥಿಸಿಕೊಳ್ಳಿದೆ ಎಂಬುವುದನ್ನು ಕಾದು ನೋಡಬೇಕಿದೆ.

ಎನ್‌ಇಪಿ-ಕ್ಷೇತ್ರ ಪುನರ್‌ವಿಂಗಡಣೆ ನಿರ್ಣಯದ ಕುರಿತು ಸಭೆ ನಡೆಸಿದ ಡಿಎಂಕೆ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...