Homeಮುಖಪುಟವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

ವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

- Advertisement -
- Advertisement -

ಹೊಸದಿಲ್ಲಿ: ಉತ್ತರ ಪ್ರದೇಶದ 16 ಜಿಲ್ಲೆಗಳಲ್ಲಿನ ಐವತ್ತೊಂಬತ್ತು ಕ್ಷೇತ್ರಗಳಲ್ಲಿ ಇಂದು ಮೂರನೇ ಹಂತದ ಮತದಾನ ಚಲಾವಣೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಎಲ್ಲ ಕ್ಷೇತ್ರಗಳ ಮತದಾನ ಇಂದು ನಡೆಯಲಿದೆ.

ಉತ್ತರ ಪ್ರದೇಶ: ಎಸ್‌ಪಿ ಭದ್ರಕೋಟೆಯಲ್ಲಿ ಮತದಾನ

ಯುಪಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪಂಜಾಬ್‌ನಲ್ಲಿ, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸುತ್ತಿರುವ ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿರುವ ಕರ್ಹಾಲ್ ಸ್ಥಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅಖಿಲೇಶ್‌ ವಿರುದ್ಧ ಬಿಜೆಪಿಯು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ. 1992ರಲ್ಲಿ ಪಕ್ಷ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಎಸ್‌ಪಿ ಈ ಕ್ಷೇತ್ರವನ್ನು ಕೇವಲ ಒಂದು ಬಾರಿ ಮಾತ್ರ ಸೋತಿರುವುದು ಗಮನಾರ್ಹ.

2017ರ ವಿಧಾನಸಭಾ ಚುನಾವಣೆಯಲ್ಲಿ ಈ 59 ಸ್ಥಾನಗಳಲ್ಲಿ ಬಿಜೆಪಿ 49 ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಎಲ್ಲಾ ಸ್ಥಾನಗಳನ್ನು ಕಳೆದುಕೊಂಡಿದೆ. ಇಂದು ಮತದಾನ ನಡೆಯುವ ಕ್ಷೇತ್ರಗಳು ಉತ್ತರ ಪ್ರದೇಶದ ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿವೆ.

ಪ್ರಮುಖ ಮುಖಗಳು: ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ (ಜಸ್ವಂತ್‌ನಗರ), ಬಿಜೆಪಿಯ ಸತೀಶ್ ಮಹಾನಾ (ಕಾನ್ಪುರದ ಮಹಾರಾಜಪುರ), ರಾಮ್‌ವೀರ್ ಉಪಾಧ್ಯಾಯ (ಹತ್ರಾಸ್‌ನ ಸದಾಬಾದ್), ಅಸಿಮ್ ಅರುಣ್ (ಕನೌಜ್ ಸದರ್) ಮತ್ತು ಕಾಂಗ್ರೆಸ್‌ನ ಲೂಯಿಸ್ ಖುರ್ಷಿದ್ (ಫರೂಕಾಬಾದ್ ಸದರ್) ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಲೂಯಿಸ್ ಖುರ್ಷಿದ್ ಅವರು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ದಕ್ಷಿಣ ಯುಪಿಯ ಬುಂದೇಲ್‌ಖಂಡ್ ಪ್ರದೇಶದಲ್ಲಿ, 2017 ರಲ್ಲಿ ಬಿಜೆಪಿ ಎಲ್ಲಾ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದು ಮೊದಲು BSP ಭದ್ರಕೋಟೆಯಾಗಿತ್ತು. ಇಂದು ಮತ ಚಲಾಯಿಸುವ ಮಧ್ಯ ಯುಪಿ ಕ್ಷೇತ್ರಗಳು ಎಸ್‌ಪಿ ಭದ್ರಕೋಟೆಗಳಾಗಿವೆ.

ರಾಜ್ಯದ ದೊಡ್ಡ ನಗರಗಳಲ್ಲಿ ಕಾನ್ಪುರ್ ಒಂದಾಗಿದೆ. ವ್ಯಾಪಾರ ಶಕ್ತಿ ಕೇಂದ್ರವೂ ಹೌದು. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು.

ಪಂಜಾಬ್‌ ಹೈವೋಲ್ಟೇಜ್‌

ರೈತ ಚಳವಳಿಯ ಮೂಲಕ ಗಮನ ಸೆಳೆದಿರುವ, ಬಿಜೆಪಿಗೆ ಬಹುದೊಡ್ಡ ಹೊಡೆತ ನೀಡಿರುವ ಪಂಜಾಬ್ ರಾಜ್ಯದಲ್ಲಿ ಒಂದೇ ಹಂತದಲ್ಲಿ 117 ಕ್ಷೇತ್ರಗಳ ವಿಧಾನಸಭಾ ಚುನಾವಣೆ ನಡೆಯಲಿದೆ.

2017ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆಯುವ ಮೂಲಕ ಎಸ್ಎಡಿ-ಬಿಜೆಪಿ ಒಕ್ಕೂಟದ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತ್ತು. ಎಎಪಿ 20 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಸ್‌ಎಡಿ-ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದವು. ಎರಡು ಸ್ಥಾನಗಳಲ್ಲಿ ಲೋಕ ಇನ್ಸಾಫ್ ಗೆದ್ದಿತ್ತು.

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದು, ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಆಮ್ ಆದ್ಮಿ ಪಕ್ಷವು ದೊಡ್ಡ ಪೈಪೋಟಿಯನ್ನು ನೀಡುತ್ತಿದೆ.

ಪ್ರಮುಖ ಮುಖಗಳು: ಚಮ್ಕೌರ್ ಸಾಹಿಬ್ ಕ್ಷೇತ್ರದಿಂದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಅಮೃತಸರ ಪೂರ್ವ ಕ್ಷೇತ್ರದಿಂದ ಎಸ್‌ಎಡಿಯ ಬಿಕ್ರಮ್ ಸಿಂಗ್ ಮಜಿಥಿಯಾ ವಿರುದ್ಧ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಧುರಿಯಿಂದ ಎಎಪಿಯ ಭಗವಂತ್ ಮಾನ್, ಪಟಿಯಾಲದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಜಲಾಲಾಬಾದ್  ವಿಧಾನಸಭಾ ಕ್ಷೇತ್ರದಿಂದ ಸುಖಬೀರ್ ಸಿಂಗ್ ಬಾದಲ್, ಲಂಬಿ ಕ್ಷೇತ್ರದಿಂದ ಪ್ರಕಾಶ್ ಸಿಂಗ್ ಬಾದಲ್, ಮಜಿತಾ ಕ್ಷೇತ್ರದಿಂದ ಗನೀವ್ ಕೌರ್ ಮಜಿಥಿಯಾ ಮತ್ತು ಬಟಿಂಡಾ ಕ್ಷೇತ್ರದಿಂದ ಹರ್ಸಿಮ್ರತ್ ಕೌರ್ ಬಾದಲ್ ಸ್ಪರ್ಧಿಸಿದ್ದಾರೆ.


ಇದನ್ನೂ ಓದಿರಿ: ಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...