Homeಮುಖಪುಟವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

ವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

- Advertisement -
- Advertisement -

ಹೊಸದಿಲ್ಲಿ: ಉತ್ತರ ಪ್ರದೇಶದ 16 ಜಿಲ್ಲೆಗಳಲ್ಲಿನ ಐವತ್ತೊಂಬತ್ತು ಕ್ಷೇತ್ರಗಳಲ್ಲಿ ಇಂದು ಮೂರನೇ ಹಂತದ ಮತದಾನ ಚಲಾವಣೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಎಲ್ಲ ಕ್ಷೇತ್ರಗಳ ಮತದಾನ ಇಂದು ನಡೆಯಲಿದೆ.

ಉತ್ತರ ಪ್ರದೇಶ: ಎಸ್‌ಪಿ ಭದ್ರಕೋಟೆಯಲ್ಲಿ ಮತದಾನ

ಯುಪಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪಂಜಾಬ್‌ನಲ್ಲಿ, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸುತ್ತಿರುವ ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿರುವ ಕರ್ಹಾಲ್ ಸ್ಥಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅಖಿಲೇಶ್‌ ವಿರುದ್ಧ ಬಿಜೆಪಿಯು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ. 1992ರಲ್ಲಿ ಪಕ್ಷ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಎಸ್‌ಪಿ ಈ ಕ್ಷೇತ್ರವನ್ನು ಕೇವಲ ಒಂದು ಬಾರಿ ಮಾತ್ರ ಸೋತಿರುವುದು ಗಮನಾರ್ಹ.

2017ರ ವಿಧಾನಸಭಾ ಚುನಾವಣೆಯಲ್ಲಿ ಈ 59 ಸ್ಥಾನಗಳಲ್ಲಿ ಬಿಜೆಪಿ 49 ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಎಲ್ಲಾ ಸ್ಥಾನಗಳನ್ನು ಕಳೆದುಕೊಂಡಿದೆ. ಇಂದು ಮತದಾನ ನಡೆಯುವ ಕ್ಷೇತ್ರಗಳು ಉತ್ತರ ಪ್ರದೇಶದ ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿವೆ.

ಪ್ರಮುಖ ಮುಖಗಳು: ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ (ಜಸ್ವಂತ್‌ನಗರ), ಬಿಜೆಪಿಯ ಸತೀಶ್ ಮಹಾನಾ (ಕಾನ್ಪುರದ ಮಹಾರಾಜಪುರ), ರಾಮ್‌ವೀರ್ ಉಪಾಧ್ಯಾಯ (ಹತ್ರಾಸ್‌ನ ಸದಾಬಾದ್), ಅಸಿಮ್ ಅರುಣ್ (ಕನೌಜ್ ಸದರ್) ಮತ್ತು ಕಾಂಗ್ರೆಸ್‌ನ ಲೂಯಿಸ್ ಖುರ್ಷಿದ್ (ಫರೂಕಾಬಾದ್ ಸದರ್) ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಲೂಯಿಸ್ ಖುರ್ಷಿದ್ ಅವರು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ದಕ್ಷಿಣ ಯುಪಿಯ ಬುಂದೇಲ್‌ಖಂಡ್ ಪ್ರದೇಶದಲ್ಲಿ, 2017 ರಲ್ಲಿ ಬಿಜೆಪಿ ಎಲ್ಲಾ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದು ಮೊದಲು BSP ಭದ್ರಕೋಟೆಯಾಗಿತ್ತು. ಇಂದು ಮತ ಚಲಾಯಿಸುವ ಮಧ್ಯ ಯುಪಿ ಕ್ಷೇತ್ರಗಳು ಎಸ್‌ಪಿ ಭದ್ರಕೋಟೆಗಳಾಗಿವೆ.

ರಾಜ್ಯದ ದೊಡ್ಡ ನಗರಗಳಲ್ಲಿ ಕಾನ್ಪುರ್ ಒಂದಾಗಿದೆ. ವ್ಯಾಪಾರ ಶಕ್ತಿ ಕೇಂದ್ರವೂ ಹೌದು. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು.

ಪಂಜಾಬ್‌ ಹೈವೋಲ್ಟೇಜ್‌

ರೈತ ಚಳವಳಿಯ ಮೂಲಕ ಗಮನ ಸೆಳೆದಿರುವ, ಬಿಜೆಪಿಗೆ ಬಹುದೊಡ್ಡ ಹೊಡೆತ ನೀಡಿರುವ ಪಂಜಾಬ್ ರಾಜ್ಯದಲ್ಲಿ ಒಂದೇ ಹಂತದಲ್ಲಿ 117 ಕ್ಷೇತ್ರಗಳ ವಿಧಾನಸಭಾ ಚುನಾವಣೆ ನಡೆಯಲಿದೆ.

2017ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆಯುವ ಮೂಲಕ ಎಸ್ಎಡಿ-ಬಿಜೆಪಿ ಒಕ್ಕೂಟದ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತ್ತು. ಎಎಪಿ 20 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಸ್‌ಎಡಿ-ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದವು. ಎರಡು ಸ್ಥಾನಗಳಲ್ಲಿ ಲೋಕ ಇನ್ಸಾಫ್ ಗೆದ್ದಿತ್ತು.

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದು, ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಆಮ್ ಆದ್ಮಿ ಪಕ್ಷವು ದೊಡ್ಡ ಪೈಪೋಟಿಯನ್ನು ನೀಡುತ್ತಿದೆ.

ಪ್ರಮುಖ ಮುಖಗಳು: ಚಮ್ಕೌರ್ ಸಾಹಿಬ್ ಕ್ಷೇತ್ರದಿಂದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಅಮೃತಸರ ಪೂರ್ವ ಕ್ಷೇತ್ರದಿಂದ ಎಸ್‌ಎಡಿಯ ಬಿಕ್ರಮ್ ಸಿಂಗ್ ಮಜಿಥಿಯಾ ವಿರುದ್ಧ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಧುರಿಯಿಂದ ಎಎಪಿಯ ಭಗವಂತ್ ಮಾನ್, ಪಟಿಯಾಲದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಜಲಾಲಾಬಾದ್  ವಿಧಾನಸಭಾ ಕ್ಷೇತ್ರದಿಂದ ಸುಖಬೀರ್ ಸಿಂಗ್ ಬಾದಲ್, ಲಂಬಿ ಕ್ಷೇತ್ರದಿಂದ ಪ್ರಕಾಶ್ ಸಿಂಗ್ ಬಾದಲ್, ಮಜಿತಾ ಕ್ಷೇತ್ರದಿಂದ ಗನೀವ್ ಕೌರ್ ಮಜಿಥಿಯಾ ಮತ್ತು ಬಟಿಂಡಾ ಕ್ಷೇತ್ರದಿಂದ ಹರ್ಸಿಮ್ರತ್ ಕೌರ್ ಬಾದಲ್ ಸ್ಪರ್ಧಿಸಿದ್ದಾರೆ.


ಇದನ್ನೂ ಓದಿರಿ: ಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...