Homeಮುಖಪುಟವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

ವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

- Advertisement -
- Advertisement -

ಹೊಸದಿಲ್ಲಿ: ಉತ್ತರ ಪ್ರದೇಶದ 16 ಜಿಲ್ಲೆಗಳಲ್ಲಿನ ಐವತ್ತೊಂಬತ್ತು ಕ್ಷೇತ್ರಗಳಲ್ಲಿ ಇಂದು ಮೂರನೇ ಹಂತದ ಮತದಾನ ಚಲಾವಣೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಎಲ್ಲ ಕ್ಷೇತ್ರಗಳ ಮತದಾನ ಇಂದು ನಡೆಯಲಿದೆ.

ಉತ್ತರ ಪ್ರದೇಶ: ಎಸ್‌ಪಿ ಭದ್ರಕೋಟೆಯಲ್ಲಿ ಮತದಾನ

ಯುಪಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪಂಜಾಬ್‌ನಲ್ಲಿ, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸುತ್ತಿರುವ ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿರುವ ಕರ್ಹಾಲ್ ಸ್ಥಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅಖಿಲೇಶ್‌ ವಿರುದ್ಧ ಬಿಜೆಪಿಯು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ. 1992ರಲ್ಲಿ ಪಕ್ಷ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಎಸ್‌ಪಿ ಈ ಕ್ಷೇತ್ರವನ್ನು ಕೇವಲ ಒಂದು ಬಾರಿ ಮಾತ್ರ ಸೋತಿರುವುದು ಗಮನಾರ್ಹ.

2017ರ ವಿಧಾನಸಭಾ ಚುನಾವಣೆಯಲ್ಲಿ ಈ 59 ಸ್ಥಾನಗಳಲ್ಲಿ ಬಿಜೆಪಿ 49 ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಎಲ್ಲಾ ಸ್ಥಾನಗಳನ್ನು ಕಳೆದುಕೊಂಡಿದೆ. ಇಂದು ಮತದಾನ ನಡೆಯುವ ಕ್ಷೇತ್ರಗಳು ಉತ್ತರ ಪ್ರದೇಶದ ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿವೆ.

ಪ್ರಮುಖ ಮುಖಗಳು: ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ (ಜಸ್ವಂತ್‌ನಗರ), ಬಿಜೆಪಿಯ ಸತೀಶ್ ಮಹಾನಾ (ಕಾನ್ಪುರದ ಮಹಾರಾಜಪುರ), ರಾಮ್‌ವೀರ್ ಉಪಾಧ್ಯಾಯ (ಹತ್ರಾಸ್‌ನ ಸದಾಬಾದ್), ಅಸಿಮ್ ಅರುಣ್ (ಕನೌಜ್ ಸದರ್) ಮತ್ತು ಕಾಂಗ್ರೆಸ್‌ನ ಲೂಯಿಸ್ ಖುರ್ಷಿದ್ (ಫರೂಕಾಬಾದ್ ಸದರ್) ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಲೂಯಿಸ್ ಖುರ್ಷಿದ್ ಅವರು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ದಕ್ಷಿಣ ಯುಪಿಯ ಬುಂದೇಲ್‌ಖಂಡ್ ಪ್ರದೇಶದಲ್ಲಿ, 2017 ರಲ್ಲಿ ಬಿಜೆಪಿ ಎಲ್ಲಾ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದು ಮೊದಲು BSP ಭದ್ರಕೋಟೆಯಾಗಿತ್ತು. ಇಂದು ಮತ ಚಲಾಯಿಸುವ ಮಧ್ಯ ಯುಪಿ ಕ್ಷೇತ್ರಗಳು ಎಸ್‌ಪಿ ಭದ್ರಕೋಟೆಗಳಾಗಿವೆ.

ರಾಜ್ಯದ ದೊಡ್ಡ ನಗರಗಳಲ್ಲಿ ಕಾನ್ಪುರ್ ಒಂದಾಗಿದೆ. ವ್ಯಾಪಾರ ಶಕ್ತಿ ಕೇಂದ್ರವೂ ಹೌದು. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು.

ಪಂಜಾಬ್‌ ಹೈವೋಲ್ಟೇಜ್‌

ರೈತ ಚಳವಳಿಯ ಮೂಲಕ ಗಮನ ಸೆಳೆದಿರುವ, ಬಿಜೆಪಿಗೆ ಬಹುದೊಡ್ಡ ಹೊಡೆತ ನೀಡಿರುವ ಪಂಜಾಬ್ ರಾಜ್ಯದಲ್ಲಿ ಒಂದೇ ಹಂತದಲ್ಲಿ 117 ಕ್ಷೇತ್ರಗಳ ವಿಧಾನಸಭಾ ಚುನಾವಣೆ ನಡೆಯಲಿದೆ.

2017ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆಯುವ ಮೂಲಕ ಎಸ್ಎಡಿ-ಬಿಜೆಪಿ ಒಕ್ಕೂಟದ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತ್ತು. ಎಎಪಿ 20 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಸ್‌ಎಡಿ-ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದವು. ಎರಡು ಸ್ಥಾನಗಳಲ್ಲಿ ಲೋಕ ಇನ್ಸಾಫ್ ಗೆದ್ದಿತ್ತು.

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದು, ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಆಮ್ ಆದ್ಮಿ ಪಕ್ಷವು ದೊಡ್ಡ ಪೈಪೋಟಿಯನ್ನು ನೀಡುತ್ತಿದೆ.

ಪ್ರಮುಖ ಮುಖಗಳು: ಚಮ್ಕೌರ್ ಸಾಹಿಬ್ ಕ್ಷೇತ್ರದಿಂದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಅಮೃತಸರ ಪೂರ್ವ ಕ್ಷೇತ್ರದಿಂದ ಎಸ್‌ಎಡಿಯ ಬಿಕ್ರಮ್ ಸಿಂಗ್ ಮಜಿಥಿಯಾ ವಿರುದ್ಧ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಧುರಿಯಿಂದ ಎಎಪಿಯ ಭಗವಂತ್ ಮಾನ್, ಪಟಿಯಾಲದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಜಲಾಲಾಬಾದ್  ವಿಧಾನಸಭಾ ಕ್ಷೇತ್ರದಿಂದ ಸುಖಬೀರ್ ಸಿಂಗ್ ಬಾದಲ್, ಲಂಬಿ ಕ್ಷೇತ್ರದಿಂದ ಪ್ರಕಾಶ್ ಸಿಂಗ್ ಬಾದಲ್, ಮಜಿತಾ ಕ್ಷೇತ್ರದಿಂದ ಗನೀವ್ ಕೌರ್ ಮಜಿಥಿಯಾ ಮತ್ತು ಬಟಿಂಡಾ ಕ್ಷೇತ್ರದಿಂದ ಹರ್ಸಿಮ್ರತ್ ಕೌರ್ ಬಾದಲ್ ಸ್ಪರ್ಧಿಸಿದ್ದಾರೆ.


ಇದನ್ನೂ ಓದಿರಿ: ಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...