- Advertisement -
- Advertisement -
ಸೆಪ್ಟೆಂಬರ್ 13 ರಿಂದ 24 ರವರೆಗೆ ಕರ್ನಾಟಕ ವಿಧಾನಸಭೆಯ 10 ದಿನಗಳ ಅಧಿವೇಶನ ನಡೆಸಲಾಗುವುದು ಎಂದು ಸಣ್ಣ ನೀರಾವರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.
ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಸೆಪ್ಟಂಬರ್ನಲ್ಲಿ ವಿಧಾನಸಭಾ ಅಧಿವೇಶನ ನಡೆಸುತ್ತೇವೆ ಎಂದು ತಿಳಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಮಾಧುಸ್ವಾಮಿ ಸೆಪ್ಟಂಬರ್ 13 ರಿಂದ 24 ರವರೆಗೆ ಅಧಿವೇಶನ ನಡೆಯಲಿದೆ ಎಂದು ಖಚಿತಪಡಿಸಿದ್ದಾರೆ.
A 10-day session of the Karnataka Legislative Assembly will be held from 13th to 24th September: Karnataka Minister JC Madhuswamy
(file pic) pic.twitter.com/GENvF1ZF8N
— ANI (@ANI) August 19, 2021
ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಯಲಿರುವ ಮೊದಲ ಅಧಿವೇಶನ ಇದಾಗಿದೆ.
ಇದನ್ನೂ ಓದಿ: ಒಕ್ಕೂಟ ಸಚಿವರನ್ನು ‘ಬಂದೂಕು ಸಿಡಿಸಿ’ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು!