Homeಮುಖಪುಟಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

- Advertisement -
- Advertisement -

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಎಡಿಆರ್ ಪ್ರಕಾರ, ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (ವಿಜಯಪುರ) ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ವರದಿಯಲ್ಲಿ ಕರ್ನಾಟಕದ ಇನ್ನೂ ಐವರು ಸಂಸದರ ಹೆಸರಿದೆ. ಇವರೆಲ್ಲರೂ ಬಿಜೆಪಿಯವರಾಗಿದ್ದು, 2004ರಿಂದ ಆಯ್ಕೆಯಾಗುತ್ತಿದ್ದಾರೆ. ಈ ಸಂಸದರ ಆಸ್ತಿ ಮೌಲ್ಯವು ವರದಿಯಲ್ಲಿ ಉಲ್ಲೇಖಿಸಿರುವ ಇತರ ಎಲ್ಲಾ ರಾಜ್ಯಗಳ ಸಂಸದರಿಗಿಂತ ಹೆಚ್ಚಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4,413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಗೊತ್ತಾಗಿದೆ.

ರಮೇಶ್ ಜಿಗಿಜಿಣಗಿ ಬಳಿಕ ಬಿಜೆಪಿ ಸಂದದೆ ಮೇನಕಾ ಗಾಂಧಿ (ಸುಲ್ತಾನ್‌ಪುರ್) ಅವರ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳದ ಕಂಡಿದೆ. ಮೇನಕಾ ಅವರ ಆಸ್ತಿ ಮೌಲ್ಯ ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಅಥವಾ ಶೇ. 735ರಷ್ಟು ಏರಿಕೆಯಾಗಿದೆ. ಬಿಜೆಪಿಯ ರಾವ್ ಇಂದರ್‌ಜಿತ್ ಸಿಂಗ್ (ಗುರ್‌ಗಾಂವ್) ನಂತರದ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ 42.09 ಕೋಟಿಗೆ (ಶೇ. 664) ಹೆಚ್ಚಳವಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ. ಕಳೆದ15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ.

ಪಟ್ಟಿಯಲ್ಲಿ ಮೂರನೇ ಕಾಂಗ್ರೆಸ್ ಸಂಸದರಾಗಿ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೆಸರಿದೆ. ಚೌಧರಿಯವರ ಆಸ್ತಿ ಮೌಲ್ಯ1.93 ಕೋಟಿಯಿಂದ 10.13 ಕೋಟಿಗೆ ( ಶೇ.422) ಏರಿಕೆಯಾಗಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ. ಅಲ್ಲದೆ, ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...