Homeಮುಖಪುಟಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

- Advertisement -
- Advertisement -

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಎಡಿಆರ್ ಪ್ರಕಾರ, ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (ವಿಜಯಪುರ) ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ವರದಿಯಲ್ಲಿ ಕರ್ನಾಟಕದ ಇನ್ನೂ ಐವರು ಸಂಸದರ ಹೆಸರಿದೆ. ಇವರೆಲ್ಲರೂ ಬಿಜೆಪಿಯವರಾಗಿದ್ದು, 2004ರಿಂದ ಆಯ್ಕೆಯಾಗುತ್ತಿದ್ದಾರೆ. ಈ ಸಂಸದರ ಆಸ್ತಿ ಮೌಲ್ಯವು ವರದಿಯಲ್ಲಿ ಉಲ್ಲೇಖಿಸಿರುವ ಇತರ ಎಲ್ಲಾ ರಾಜ್ಯಗಳ ಸಂಸದರಿಗಿಂತ ಹೆಚ್ಚಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4,413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಗೊತ್ತಾಗಿದೆ.

ರಮೇಶ್ ಜಿಗಿಜಿಣಗಿ ಬಳಿಕ ಬಿಜೆಪಿ ಸಂದದೆ ಮೇನಕಾ ಗಾಂಧಿ (ಸುಲ್ತಾನ್‌ಪುರ್) ಅವರ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳದ ಕಂಡಿದೆ. ಮೇನಕಾ ಅವರ ಆಸ್ತಿ ಮೌಲ್ಯ ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಅಥವಾ ಶೇ. 735ರಷ್ಟು ಏರಿಕೆಯಾಗಿದೆ. ಬಿಜೆಪಿಯ ರಾವ್ ಇಂದರ್‌ಜಿತ್ ಸಿಂಗ್ (ಗುರ್‌ಗಾಂವ್) ನಂತರದ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ 42.09 ಕೋಟಿಗೆ (ಶೇ. 664) ಹೆಚ್ಚಳವಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ. ಕಳೆದ15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ.

ಪಟ್ಟಿಯಲ್ಲಿ ಮೂರನೇ ಕಾಂಗ್ರೆಸ್ ಸಂಸದರಾಗಿ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೆಸರಿದೆ. ಚೌಧರಿಯವರ ಆಸ್ತಿ ಮೌಲ್ಯ1.93 ಕೋಟಿಯಿಂದ 10.13 ಕೋಟಿಗೆ ( ಶೇ.422) ಏರಿಕೆಯಾಗಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ. ಅಲ್ಲದೆ, ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...