Homeಮುಖಪುಟಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

- Advertisement -
- Advertisement -

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಎಡಿಆರ್ ಪ್ರಕಾರ, ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (ವಿಜಯಪುರ) ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ವರದಿಯಲ್ಲಿ ಕರ್ನಾಟಕದ ಇನ್ನೂ ಐವರು ಸಂಸದರ ಹೆಸರಿದೆ. ಇವರೆಲ್ಲರೂ ಬಿಜೆಪಿಯವರಾಗಿದ್ದು, 2004ರಿಂದ ಆಯ್ಕೆಯಾಗುತ್ತಿದ್ದಾರೆ. ಈ ಸಂಸದರ ಆಸ್ತಿ ಮೌಲ್ಯವು ವರದಿಯಲ್ಲಿ ಉಲ್ಲೇಖಿಸಿರುವ ಇತರ ಎಲ್ಲಾ ರಾಜ್ಯಗಳ ಸಂಸದರಿಗಿಂತ ಹೆಚ್ಚಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4,413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಗೊತ್ತಾಗಿದೆ.

ರಮೇಶ್ ಜಿಗಿಜಿಣಗಿ ಬಳಿಕ ಬಿಜೆಪಿ ಸಂದದೆ ಮೇನಕಾ ಗಾಂಧಿ (ಸುಲ್ತಾನ್‌ಪುರ್) ಅವರ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳದ ಕಂಡಿದೆ. ಮೇನಕಾ ಅವರ ಆಸ್ತಿ ಮೌಲ್ಯ ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಅಥವಾ ಶೇ. 735ರಷ್ಟು ಏರಿಕೆಯಾಗಿದೆ. ಬಿಜೆಪಿಯ ರಾವ್ ಇಂದರ್‌ಜಿತ್ ಸಿಂಗ್ (ಗುರ್‌ಗಾಂವ್) ನಂತರದ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ 42.09 ಕೋಟಿಗೆ (ಶೇ. 664) ಹೆಚ್ಚಳವಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ. ಕಳೆದ15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ.

ಪಟ್ಟಿಯಲ್ಲಿ ಮೂರನೇ ಕಾಂಗ್ರೆಸ್ ಸಂಸದರಾಗಿ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೆಸರಿದೆ. ಚೌಧರಿಯವರ ಆಸ್ತಿ ಮೌಲ್ಯ1.93 ಕೋಟಿಯಿಂದ 10.13 ಕೋಟಿಗೆ ( ಶೇ.422) ಏರಿಕೆಯಾಗಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ. ಅಲ್ಲದೆ, ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...