Homeಮುಖಪುಟಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

- Advertisement -
- Advertisement -

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಎಡಿಆರ್ ಪ್ರಕಾರ, ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (ವಿಜಯಪುರ) ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ವರದಿಯಲ್ಲಿ ಕರ್ನಾಟಕದ ಇನ್ನೂ ಐವರು ಸಂಸದರ ಹೆಸರಿದೆ. ಇವರೆಲ್ಲರೂ ಬಿಜೆಪಿಯವರಾಗಿದ್ದು, 2004ರಿಂದ ಆಯ್ಕೆಯಾಗುತ್ತಿದ್ದಾರೆ. ಈ ಸಂಸದರ ಆಸ್ತಿ ಮೌಲ್ಯವು ವರದಿಯಲ್ಲಿ ಉಲ್ಲೇಖಿಸಿರುವ ಇತರ ಎಲ್ಲಾ ರಾಜ್ಯಗಳ ಸಂಸದರಿಗಿಂತ ಹೆಚ್ಚಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4,413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಗೊತ್ತಾಗಿದೆ.

ರಮೇಶ್ ಜಿಗಿಜಿಣಗಿ ಬಳಿಕ ಬಿಜೆಪಿ ಸಂದದೆ ಮೇನಕಾ ಗಾಂಧಿ (ಸುಲ್ತಾನ್‌ಪುರ್) ಅವರ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳದ ಕಂಡಿದೆ. ಮೇನಕಾ ಅವರ ಆಸ್ತಿ ಮೌಲ್ಯ ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಅಥವಾ ಶೇ. 735ರಷ್ಟು ಏರಿಕೆಯಾಗಿದೆ. ಬಿಜೆಪಿಯ ರಾವ್ ಇಂದರ್‌ಜಿತ್ ಸಿಂಗ್ (ಗುರ್‌ಗಾಂವ್) ನಂತರದ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ 42.09 ಕೋಟಿಗೆ (ಶೇ. 664) ಹೆಚ್ಚಳವಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ. ಕಳೆದ15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ.

ಪಟ್ಟಿಯಲ್ಲಿ ಮೂರನೇ ಕಾಂಗ್ರೆಸ್ ಸಂಸದರಾಗಿ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೆಸರಿದೆ. ಚೌಧರಿಯವರ ಆಸ್ತಿ ಮೌಲ್ಯ1.93 ಕೋಟಿಯಿಂದ 10.13 ಕೋಟಿಗೆ ( ಶೇ.422) ಏರಿಕೆಯಾಗಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ. ಅಲ್ಲದೆ, ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...