Homeಮುಖಪುಟಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

- Advertisement -
- Advertisement -

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಎಡಿಆರ್ ಪ್ರಕಾರ, ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (ವಿಜಯಪುರ) ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ವರದಿಯಲ್ಲಿ ಕರ್ನಾಟಕದ ಇನ್ನೂ ಐವರು ಸಂಸದರ ಹೆಸರಿದೆ. ಇವರೆಲ್ಲರೂ ಬಿಜೆಪಿಯವರಾಗಿದ್ದು, 2004ರಿಂದ ಆಯ್ಕೆಯಾಗುತ್ತಿದ್ದಾರೆ. ಈ ಸಂಸದರ ಆಸ್ತಿ ಮೌಲ್ಯವು ವರದಿಯಲ್ಲಿ ಉಲ್ಲೇಖಿಸಿರುವ ಇತರ ಎಲ್ಲಾ ರಾಜ್ಯಗಳ ಸಂಸದರಿಗಿಂತ ಹೆಚ್ಚಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4,413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಗೊತ್ತಾಗಿದೆ.

ರಮೇಶ್ ಜಿಗಿಜಿಣಗಿ ಬಳಿಕ ಬಿಜೆಪಿ ಸಂದದೆ ಮೇನಕಾ ಗಾಂಧಿ (ಸುಲ್ತಾನ್‌ಪುರ್) ಅವರ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳದ ಕಂಡಿದೆ. ಮೇನಕಾ ಅವರ ಆಸ್ತಿ ಮೌಲ್ಯ ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಅಥವಾ ಶೇ. 735ರಷ್ಟು ಏರಿಕೆಯಾಗಿದೆ. ಬಿಜೆಪಿಯ ರಾವ್ ಇಂದರ್‌ಜಿತ್ ಸಿಂಗ್ (ಗುರ್‌ಗಾಂವ್) ನಂತರದ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ 42.09 ಕೋಟಿಗೆ (ಶೇ. 664) ಹೆಚ್ಚಳವಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ. ಕಳೆದ15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ.

ಪಟ್ಟಿಯಲ್ಲಿ ಮೂರನೇ ಕಾಂಗ್ರೆಸ್ ಸಂಸದರಾಗಿ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೆಸರಿದೆ. ಚೌಧರಿಯವರ ಆಸ್ತಿ ಮೌಲ್ಯ1.93 ಕೋಟಿಯಿಂದ 10.13 ಕೋಟಿಗೆ ( ಶೇ.422) ಏರಿಕೆಯಾಗಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ. ಅಲ್ಲದೆ, ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...