Homeಮುಖಪುಟಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

- Advertisement -
- Advertisement -

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಎಡಿಆರ್ ಪ್ರಕಾರ, ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (ವಿಜಯಪುರ) ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ವರದಿಯಲ್ಲಿ ಕರ್ನಾಟಕದ ಇನ್ನೂ ಐವರು ಸಂಸದರ ಹೆಸರಿದೆ. ಇವರೆಲ್ಲರೂ ಬಿಜೆಪಿಯವರಾಗಿದ್ದು, 2004ರಿಂದ ಆಯ್ಕೆಯಾಗುತ್ತಿದ್ದಾರೆ. ಈ ಸಂಸದರ ಆಸ್ತಿ ಮೌಲ್ಯವು ವರದಿಯಲ್ಲಿ ಉಲ್ಲೇಖಿಸಿರುವ ಇತರ ಎಲ್ಲಾ ರಾಜ್ಯಗಳ ಸಂಸದರಿಗಿಂತ ಹೆಚ್ಚಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4,413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಗೊತ್ತಾಗಿದೆ.

ರಮೇಶ್ ಜಿಗಿಜಿಣಗಿ ಬಳಿಕ ಬಿಜೆಪಿ ಸಂದದೆ ಮೇನಕಾ ಗಾಂಧಿ (ಸುಲ್ತಾನ್‌ಪುರ್) ಅವರ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳದ ಕಂಡಿದೆ. ಮೇನಕಾ ಅವರ ಆಸ್ತಿ ಮೌಲ್ಯ ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಅಥವಾ ಶೇ. 735ರಷ್ಟು ಏರಿಕೆಯಾಗಿದೆ. ಬಿಜೆಪಿಯ ರಾವ್ ಇಂದರ್‌ಜಿತ್ ಸಿಂಗ್ (ಗುರ್‌ಗಾಂವ್) ನಂತರದ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ 42.09 ಕೋಟಿಗೆ (ಶೇ. 664) ಹೆಚ್ಚಳವಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ. ಕಳೆದ15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ.

ಪಟ್ಟಿಯಲ್ಲಿ ಮೂರನೇ ಕಾಂಗ್ರೆಸ್ ಸಂಸದರಾಗಿ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೆಸರಿದೆ. ಚೌಧರಿಯವರ ಆಸ್ತಿ ಮೌಲ್ಯ1.93 ಕೋಟಿಯಿಂದ 10.13 ಕೋಟಿಗೆ ( ಶೇ.422) ಏರಿಕೆಯಾಗಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ. ಅಲ್ಲದೆ, ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...