Homeಮುಖಪುಟಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

- Advertisement -
- Advertisement -

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಇದೀಗ ಬಹಿರಂಗವಾಗಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ನೀವು ಚಿಂತೆ ಮಾಡಬೇಕೇ?

ಕೋವಿಶೀಲ್ಡ್‌ ಲಸಿಕೆ ಬಗ್ಗೆ ಉಂಟಾಗುವ ಅಪರೂಪದ ಈ ಅಡ್ಡ ಪರಿಣಾಮದ ಬಗ್ಗೆ ವೈದ್ಯರನ್ನು ಮಾತನಾಡಿಸಿದಾಗ ಅವರು ಈ ಕುರಿತ ದೀರ್ಘ ಕಾಲದ ಪರಿಣಾಮ ಬೀರುವುದನ್ನು ನಿರಾಕರಿಸಿದ್ದಾರೆ. ಲಸಿಕೆಗೆ ಸಂಬಂಧಿಸಿದ ಪ್ರತಿಕೂಲ ಪರಿಣಾಮಗಳು ಸಾಮಾನ್ಯವಾಗಿ ಲಸಿಕೆ ನೀಡಿದ ನಂತರ ಕೆಲವು ವಾರಗಳಲ್ಲಿ (1-6 ವಾರಗಳಲ್ಲಿ) ಸಂಭವಿಸುತ್ತವೆ. ಆದ್ದರಿಂದ 2 ವರ್ಷಗಳ ಹಿಂದೆ ಲಸಿಕೆ ತೆಗೆದುಕೊಂಡ ಭಾರತದ ಜನರು ಈ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ಹೇಳಿದ್ದಾರೆ.

ಭಾರತದಲ್ಲಿ ಲಸಿಕೆ ಪಡೆದ ನಂತರ ಜನರಲ್ಲಿ ಟಿಟಿಎಸ್ ಸಂಭವಿಸುವಿಕೆ ಕಂಡು ಬಂದಿಲ್ಲ ಎಂದು ಡಾ.ಕುಮಾರ್ ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಸಹ-ಅಧ್ಯಕ್ಷರಾದ ಡಾ.ರಾಜೀವ್ ಜಯದೇವನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಿರ್ದಿಷ್ಟ ಅಡ್ಡಪರಿಣಾಮವು ಮೊದಲ ಡೋಸ್ ಪಡೆದ ಮೊದಲ ತಿಂಗಳಲ್ಲಿ ಮಾತ್ರ ಕಂಡು ಬರುತ್ತದೆ, ನಂತರ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಕೆಲ ಪ್ರತ್ಯೇಕ ಪ್ರಕರಣಗಳಲ್ಲಿ ಈ ರೀತಿ ವರದಿಯಾಗಿದೆ. ಆದ್ದರಿಂದ, ಕೋವಿಡ್ ವ್ಯಾಕ್ಸಿನೇಷನ್ ನಂತರ ಟಿಟಿಪಿ ಅತ್ಯಂತ ಅಪರೂಪವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಕೋವಿಡ್-19 ವ್ಯಾಕ್ಸಿನೇಷನ್‌ ಪಡೆದ ನಂತರ ರಕ್ತ ಹೆಪ್ಪುಗಟ್ಟುವಿಕೆ ಕುರಿತ ಪ್ರಕರಣ ವಿಶ್ವದ ವಿವಿಧ ಭಾಗಗಳಿಂದ 2021ರಿಂದ ವರದಿಯಾಗಿದೆ ಎಂದು ಹೇಳಿದ್ದಾರೆ.

TTS ಕಳೆದ 100 ವರ್ಷಗಳಿಂದ ಗುರುತಿಸಲ್ಪಟ್ಟಿರುವ ರೋಗವಾಗಿದೆ, ಮೊದಲ ಪ್ರಕರಣವನ್ನು 1924ರಲ್ಲಿ 16 ವರ್ಷದ ಬಾಲಕಿಯಲ್ಲಿ ಪತ್ತೆ ಹಚ್ಚಲಾಗಿದೆ. ಇದು ಕಳೆದ ನಾಲ್ಕು ದಶಗಳಿಂದ ವೈದ್ಯರ ನಿಗಾದಲ್ಲಿ ಇದೆ ಎಂದು ಡಾ.ಕುಮಾರ್‌ ಹೇಳಿದ್ದಾರೆ.

ಕೋವಿಡ್ ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತವೆ, ಆದರೆ ಅಪಾಯವು ತುಂಬಾ ಚಿಕ್ಕದಾಗಿದೆ. ಭಾರತ ಮತ್ತು ಇತರ ದೇಶಗಳಿಂದ ಪ್ರಕಟವಾದ ಅನೇಕ ವೈಜ್ಞಾನಿಕ ಅಧ್ಯಯನಗಳಲ್ಲಿ ಇದು ಸಾಬೀತಾಗಿದೆ. ಕೋವಿಡ್-19 ರಕ್ತ ಹೆಪ್ಪುಗಟ್ಟುವಿಕೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಒಂದು ಸ್ಥಾಪಿತ ಕಾರಣವಾಗಿದೆ ಮತ್ತು ಲಸಿಕೆಯನ್ನು ಪಡೆದವರು ಈ ಬಗ್ಗೆ ಕಡಿಮೆ ಅಪಾಯವನ್ನು ಹೊಂದಿರುತ್ತಾರೆ ಎಂದು ಡಾ ಜಯದೇವನ್ ಹೇಳಿದ್ದಾರೆ.

COVISHIELDಗಿಂತ COVAXIN ಉತ್ತಮವಾಗಿದೆಯೇ?

ಪ್ರತಿಕೂಲ ಪರಿಣಾಮಗಳ ಅಪಾಯದ ಆಧಾರದ ಮೇಲೆ ಒಂದು ಕೋವಿಡ್ ಲಸಿಕೆಯನ್ನು ಇನ್ನೊಂದಕ್ಕಿಂತ ಉತ್ತಮ ಎಂದು ಆಯ್ಕೆ ಮಾಡಲು ಸಾಕಷ್ಟು ದಾಖಲೆಗಳು ಇಲ್ಲ. ಎಲ್ಲಾ ಲಸಿಕೆಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳು ಅಡ್ಡ ಪರಿಣಾಮಗಳನ್ನು ಹೊಂದಿವೆ. ಭಾರತದಲ್ಲಿ ಈ ಲಸಿಕೆಗಳನ್ನು ತೆಗೆದುಕೊಂಡ ಕೋಟಿಗಟ್ಟಲೆ ಜನರು ಈಗ ಜೀವಂತವಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ ಎಂದು ಡಾ.ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...