Homeಮುಖಪುಟಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

- Advertisement -
- Advertisement -

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಇದೀಗ ಬಹಿರಂಗವಾಗಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ನೀವು ಚಿಂತೆ ಮಾಡಬೇಕೇ?

ಕೋವಿಶೀಲ್ಡ್‌ ಲಸಿಕೆ ಬಗ್ಗೆ ಉಂಟಾಗುವ ಅಪರೂಪದ ಈ ಅಡ್ಡ ಪರಿಣಾಮದ ಬಗ್ಗೆ ವೈದ್ಯರನ್ನು ಮಾತನಾಡಿಸಿದಾಗ ಅವರು ಈ ಕುರಿತ ದೀರ್ಘ ಕಾಲದ ಪರಿಣಾಮ ಬೀರುವುದನ್ನು ನಿರಾಕರಿಸಿದ್ದಾರೆ. ಲಸಿಕೆಗೆ ಸಂಬಂಧಿಸಿದ ಪ್ರತಿಕೂಲ ಪರಿಣಾಮಗಳು ಸಾಮಾನ್ಯವಾಗಿ ಲಸಿಕೆ ನೀಡಿದ ನಂತರ ಕೆಲವು ವಾರಗಳಲ್ಲಿ (1-6 ವಾರಗಳಲ್ಲಿ) ಸಂಭವಿಸುತ್ತವೆ. ಆದ್ದರಿಂದ 2 ವರ್ಷಗಳ ಹಿಂದೆ ಲಸಿಕೆ ತೆಗೆದುಕೊಂಡ ಭಾರತದ ಜನರು ಈ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ಹೇಳಿದ್ದಾರೆ.

ಭಾರತದಲ್ಲಿ ಲಸಿಕೆ ಪಡೆದ ನಂತರ ಜನರಲ್ಲಿ ಟಿಟಿಎಸ್ ಸಂಭವಿಸುವಿಕೆ ಕಂಡು ಬಂದಿಲ್ಲ ಎಂದು ಡಾ.ಕುಮಾರ್ ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಸಹ-ಅಧ್ಯಕ್ಷರಾದ ಡಾ.ರಾಜೀವ್ ಜಯದೇವನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಿರ್ದಿಷ್ಟ ಅಡ್ಡಪರಿಣಾಮವು ಮೊದಲ ಡೋಸ್ ಪಡೆದ ಮೊದಲ ತಿಂಗಳಲ್ಲಿ ಮಾತ್ರ ಕಂಡು ಬರುತ್ತದೆ, ನಂತರ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಕೆಲ ಪ್ರತ್ಯೇಕ ಪ್ರಕರಣಗಳಲ್ಲಿ ಈ ರೀತಿ ವರದಿಯಾಗಿದೆ. ಆದ್ದರಿಂದ, ಕೋವಿಡ್ ವ್ಯಾಕ್ಸಿನೇಷನ್ ನಂತರ ಟಿಟಿಪಿ ಅತ್ಯಂತ ಅಪರೂಪವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಕೋವಿಡ್-19 ವ್ಯಾಕ್ಸಿನೇಷನ್‌ ಪಡೆದ ನಂತರ ರಕ್ತ ಹೆಪ್ಪುಗಟ್ಟುವಿಕೆ ಕುರಿತ ಪ್ರಕರಣ ವಿಶ್ವದ ವಿವಿಧ ಭಾಗಗಳಿಂದ 2021ರಿಂದ ವರದಿಯಾಗಿದೆ ಎಂದು ಹೇಳಿದ್ದಾರೆ.

TTS ಕಳೆದ 100 ವರ್ಷಗಳಿಂದ ಗುರುತಿಸಲ್ಪಟ್ಟಿರುವ ರೋಗವಾಗಿದೆ, ಮೊದಲ ಪ್ರಕರಣವನ್ನು 1924ರಲ್ಲಿ 16 ವರ್ಷದ ಬಾಲಕಿಯಲ್ಲಿ ಪತ್ತೆ ಹಚ್ಚಲಾಗಿದೆ. ಇದು ಕಳೆದ ನಾಲ್ಕು ದಶಗಳಿಂದ ವೈದ್ಯರ ನಿಗಾದಲ್ಲಿ ಇದೆ ಎಂದು ಡಾ.ಕುಮಾರ್‌ ಹೇಳಿದ್ದಾರೆ.

ಕೋವಿಡ್ ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತವೆ, ಆದರೆ ಅಪಾಯವು ತುಂಬಾ ಚಿಕ್ಕದಾಗಿದೆ. ಭಾರತ ಮತ್ತು ಇತರ ದೇಶಗಳಿಂದ ಪ್ರಕಟವಾದ ಅನೇಕ ವೈಜ್ಞಾನಿಕ ಅಧ್ಯಯನಗಳಲ್ಲಿ ಇದು ಸಾಬೀತಾಗಿದೆ. ಕೋವಿಡ್-19 ರಕ್ತ ಹೆಪ್ಪುಗಟ್ಟುವಿಕೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಒಂದು ಸ್ಥಾಪಿತ ಕಾರಣವಾಗಿದೆ ಮತ್ತು ಲಸಿಕೆಯನ್ನು ಪಡೆದವರು ಈ ಬಗ್ಗೆ ಕಡಿಮೆ ಅಪಾಯವನ್ನು ಹೊಂದಿರುತ್ತಾರೆ ಎಂದು ಡಾ ಜಯದೇವನ್ ಹೇಳಿದ್ದಾರೆ.

COVISHIELDಗಿಂತ COVAXIN ಉತ್ತಮವಾಗಿದೆಯೇ?

ಪ್ರತಿಕೂಲ ಪರಿಣಾಮಗಳ ಅಪಾಯದ ಆಧಾರದ ಮೇಲೆ ಒಂದು ಕೋವಿಡ್ ಲಸಿಕೆಯನ್ನು ಇನ್ನೊಂದಕ್ಕಿಂತ ಉತ್ತಮ ಎಂದು ಆಯ್ಕೆ ಮಾಡಲು ಸಾಕಷ್ಟು ದಾಖಲೆಗಳು ಇಲ್ಲ. ಎಲ್ಲಾ ಲಸಿಕೆಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳು ಅಡ್ಡ ಪರಿಣಾಮಗಳನ್ನು ಹೊಂದಿವೆ. ಭಾರತದಲ್ಲಿ ಈ ಲಸಿಕೆಗಳನ್ನು ತೆಗೆದುಕೊಂಡ ಕೋಟಿಗಟ್ಟಲೆ ಜನರು ಈಗ ಜೀವಂತವಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ ಎಂದು ಡಾ.ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...