Homeಮುಖಪುಟಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

- Advertisement -
- Advertisement -

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಇದೀಗ ಬಹಿರಂಗವಾಗಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ನೀವು ಚಿಂತೆ ಮಾಡಬೇಕೇ?

ಕೋವಿಶೀಲ್ಡ್‌ ಲಸಿಕೆ ಬಗ್ಗೆ ಉಂಟಾಗುವ ಅಪರೂಪದ ಈ ಅಡ್ಡ ಪರಿಣಾಮದ ಬಗ್ಗೆ ವೈದ್ಯರನ್ನು ಮಾತನಾಡಿಸಿದಾಗ ಅವರು ಈ ಕುರಿತ ದೀರ್ಘ ಕಾಲದ ಪರಿಣಾಮ ಬೀರುವುದನ್ನು ನಿರಾಕರಿಸಿದ್ದಾರೆ. ಲಸಿಕೆಗೆ ಸಂಬಂಧಿಸಿದ ಪ್ರತಿಕೂಲ ಪರಿಣಾಮಗಳು ಸಾಮಾನ್ಯವಾಗಿ ಲಸಿಕೆ ನೀಡಿದ ನಂತರ ಕೆಲವು ವಾರಗಳಲ್ಲಿ (1-6 ವಾರಗಳಲ್ಲಿ) ಸಂಭವಿಸುತ್ತವೆ. ಆದ್ದರಿಂದ 2 ವರ್ಷಗಳ ಹಿಂದೆ ಲಸಿಕೆ ತೆಗೆದುಕೊಂಡ ಭಾರತದ ಜನರು ಈ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ಹೇಳಿದ್ದಾರೆ.

ಭಾರತದಲ್ಲಿ ಲಸಿಕೆ ಪಡೆದ ನಂತರ ಜನರಲ್ಲಿ ಟಿಟಿಎಸ್ ಸಂಭವಿಸುವಿಕೆ ಕಂಡು ಬಂದಿಲ್ಲ ಎಂದು ಡಾ.ಕುಮಾರ್ ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಸಹ-ಅಧ್ಯಕ್ಷರಾದ ಡಾ.ರಾಜೀವ್ ಜಯದೇವನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಿರ್ದಿಷ್ಟ ಅಡ್ಡಪರಿಣಾಮವು ಮೊದಲ ಡೋಸ್ ಪಡೆದ ಮೊದಲ ತಿಂಗಳಲ್ಲಿ ಮಾತ್ರ ಕಂಡು ಬರುತ್ತದೆ, ನಂತರ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಕೆಲ ಪ್ರತ್ಯೇಕ ಪ್ರಕರಣಗಳಲ್ಲಿ ಈ ರೀತಿ ವರದಿಯಾಗಿದೆ. ಆದ್ದರಿಂದ, ಕೋವಿಡ್ ವ್ಯಾಕ್ಸಿನೇಷನ್ ನಂತರ ಟಿಟಿಪಿ ಅತ್ಯಂತ ಅಪರೂಪವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಕೋವಿಡ್-19 ವ್ಯಾಕ್ಸಿನೇಷನ್‌ ಪಡೆದ ನಂತರ ರಕ್ತ ಹೆಪ್ಪುಗಟ್ಟುವಿಕೆ ಕುರಿತ ಪ್ರಕರಣ ವಿಶ್ವದ ವಿವಿಧ ಭಾಗಗಳಿಂದ 2021ರಿಂದ ವರದಿಯಾಗಿದೆ ಎಂದು ಹೇಳಿದ್ದಾರೆ.

TTS ಕಳೆದ 100 ವರ್ಷಗಳಿಂದ ಗುರುತಿಸಲ್ಪಟ್ಟಿರುವ ರೋಗವಾಗಿದೆ, ಮೊದಲ ಪ್ರಕರಣವನ್ನು 1924ರಲ್ಲಿ 16 ವರ್ಷದ ಬಾಲಕಿಯಲ್ಲಿ ಪತ್ತೆ ಹಚ್ಚಲಾಗಿದೆ. ಇದು ಕಳೆದ ನಾಲ್ಕು ದಶಗಳಿಂದ ವೈದ್ಯರ ನಿಗಾದಲ್ಲಿ ಇದೆ ಎಂದು ಡಾ.ಕುಮಾರ್‌ ಹೇಳಿದ್ದಾರೆ.

ಕೋವಿಡ್ ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತವೆ, ಆದರೆ ಅಪಾಯವು ತುಂಬಾ ಚಿಕ್ಕದಾಗಿದೆ. ಭಾರತ ಮತ್ತು ಇತರ ದೇಶಗಳಿಂದ ಪ್ರಕಟವಾದ ಅನೇಕ ವೈಜ್ಞಾನಿಕ ಅಧ್ಯಯನಗಳಲ್ಲಿ ಇದು ಸಾಬೀತಾಗಿದೆ. ಕೋವಿಡ್-19 ರಕ್ತ ಹೆಪ್ಪುಗಟ್ಟುವಿಕೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಒಂದು ಸ್ಥಾಪಿತ ಕಾರಣವಾಗಿದೆ ಮತ್ತು ಲಸಿಕೆಯನ್ನು ಪಡೆದವರು ಈ ಬಗ್ಗೆ ಕಡಿಮೆ ಅಪಾಯವನ್ನು ಹೊಂದಿರುತ್ತಾರೆ ಎಂದು ಡಾ ಜಯದೇವನ್ ಹೇಳಿದ್ದಾರೆ.

COVISHIELDಗಿಂತ COVAXIN ಉತ್ತಮವಾಗಿದೆಯೇ?

ಪ್ರತಿಕೂಲ ಪರಿಣಾಮಗಳ ಅಪಾಯದ ಆಧಾರದ ಮೇಲೆ ಒಂದು ಕೋವಿಡ್ ಲಸಿಕೆಯನ್ನು ಇನ್ನೊಂದಕ್ಕಿಂತ ಉತ್ತಮ ಎಂದು ಆಯ್ಕೆ ಮಾಡಲು ಸಾಕಷ್ಟು ದಾಖಲೆಗಳು ಇಲ್ಲ. ಎಲ್ಲಾ ಲಸಿಕೆಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳು ಅಡ್ಡ ಪರಿಣಾಮಗಳನ್ನು ಹೊಂದಿವೆ. ಭಾರತದಲ್ಲಿ ಈ ಲಸಿಕೆಗಳನ್ನು ತೆಗೆದುಕೊಂಡ ಕೋಟಿಗಟ್ಟಲೆ ಜನರು ಈಗ ಜೀವಂತವಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ ಎಂದು ಡಾ.ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...