Homeಮುಖಪುಟಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

- Advertisement -
- Advertisement -

ಕೋವಿಡ್ -19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಇದೀಗ ಬಹಿರಂಗವಾಗಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

‘ಅಸ್ಟ್ರಾಜೆನೆಕಾ’ ಕಂಪನಿಯು ಈ ಕುರಿತ 51 ಮೊಕದ್ದಮೆಗಳನ್ನು ಎದುರಿಸುತ್ತಿದೆ, ಕೋವಿಶೀಲ್ಡ್‌ ಲಸಿಕೆಯು ಡಜನ್‌ಗಟ್ಟಲೆ ಪ್ರಕರಣಗಳಲ್ಲಿ ಸಾವು ಮತ್ತು ಗಂಭೀರವಾದ ಗಾಯವನ್ನು ಉಂಟುಮಾಡಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರವನ್ನು ಬಯಸುತ್ತಿದ್ದಾರೆ. ಈ ಸುದ್ದಿಯು ಭಾರತದ ಜನರನ್ನು ಒಳಗೊಂಡಂತೆ ವಿಶ್ವದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮ ಬೀರಿದೆ.

ನೀವು ಚಿಂತೆ ಮಾಡಬೇಕೇ?

ಕೋವಿಶೀಲ್ಡ್‌ ಲಸಿಕೆ ಬಗ್ಗೆ ಉಂಟಾಗುವ ಅಪರೂಪದ ಈ ಅಡ್ಡ ಪರಿಣಾಮದ ಬಗ್ಗೆ ವೈದ್ಯರನ್ನು ಮಾತನಾಡಿಸಿದಾಗ ಅವರು ಈ ಕುರಿತ ದೀರ್ಘ ಕಾಲದ ಪರಿಣಾಮ ಬೀರುವುದನ್ನು ನಿರಾಕರಿಸಿದ್ದಾರೆ. ಲಸಿಕೆಗೆ ಸಂಬಂಧಿಸಿದ ಪ್ರತಿಕೂಲ ಪರಿಣಾಮಗಳು ಸಾಮಾನ್ಯವಾಗಿ ಲಸಿಕೆ ನೀಡಿದ ನಂತರ ಕೆಲವು ವಾರಗಳಲ್ಲಿ (1-6 ವಾರಗಳಲ್ಲಿ) ಸಂಭವಿಸುತ್ತವೆ. ಆದ್ದರಿಂದ 2 ವರ್ಷಗಳ ಹಿಂದೆ ಲಸಿಕೆ ತೆಗೆದುಕೊಂಡ ಭಾರತದ ಜನರು ಈ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ಹೇಳಿದ್ದಾರೆ.

ಭಾರತದಲ್ಲಿ ಲಸಿಕೆ ಪಡೆದ ನಂತರ ಜನರಲ್ಲಿ ಟಿಟಿಎಸ್ ಸಂಭವಿಸುವಿಕೆ ಕಂಡು ಬಂದಿಲ್ಲ ಎಂದು ಡಾ.ಕುಮಾರ್ ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಸಹ-ಅಧ್ಯಕ್ಷರಾದ ಡಾ.ರಾಜೀವ್ ಜಯದೇವನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಿರ್ದಿಷ್ಟ ಅಡ್ಡಪರಿಣಾಮವು ಮೊದಲ ಡೋಸ್ ಪಡೆದ ಮೊದಲ ತಿಂಗಳಲ್ಲಿ ಮಾತ್ರ ಕಂಡು ಬರುತ್ತದೆ, ನಂತರ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಕೆಲ ಪ್ರತ್ಯೇಕ ಪ್ರಕರಣಗಳಲ್ಲಿ ಈ ರೀತಿ ವರದಿಯಾಗಿದೆ. ಆದ್ದರಿಂದ, ಕೋವಿಡ್ ವ್ಯಾಕ್ಸಿನೇಷನ್ ನಂತರ ಟಿಟಿಪಿ ಅತ್ಯಂತ ಅಪರೂಪವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಕೋವಿಡ್-19 ವ್ಯಾಕ್ಸಿನೇಷನ್‌ ಪಡೆದ ನಂತರ ರಕ್ತ ಹೆಪ್ಪುಗಟ್ಟುವಿಕೆ ಕುರಿತ ಪ್ರಕರಣ ವಿಶ್ವದ ವಿವಿಧ ಭಾಗಗಳಿಂದ 2021ರಿಂದ ವರದಿಯಾಗಿದೆ ಎಂದು ಹೇಳಿದ್ದಾರೆ.

TTS ಕಳೆದ 100 ವರ್ಷಗಳಿಂದ ಗುರುತಿಸಲ್ಪಟ್ಟಿರುವ ರೋಗವಾಗಿದೆ, ಮೊದಲ ಪ್ರಕರಣವನ್ನು 1924ರಲ್ಲಿ 16 ವರ್ಷದ ಬಾಲಕಿಯಲ್ಲಿ ಪತ್ತೆ ಹಚ್ಚಲಾಗಿದೆ. ಇದು ಕಳೆದ ನಾಲ್ಕು ದಶಗಳಿಂದ ವೈದ್ಯರ ನಿಗಾದಲ್ಲಿ ಇದೆ ಎಂದು ಡಾ.ಕುಮಾರ್‌ ಹೇಳಿದ್ದಾರೆ.

ಕೋವಿಡ್ ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತವೆ, ಆದರೆ ಅಪಾಯವು ತುಂಬಾ ಚಿಕ್ಕದಾಗಿದೆ. ಭಾರತ ಮತ್ತು ಇತರ ದೇಶಗಳಿಂದ ಪ್ರಕಟವಾದ ಅನೇಕ ವೈಜ್ಞಾನಿಕ ಅಧ್ಯಯನಗಳಲ್ಲಿ ಇದು ಸಾಬೀತಾಗಿದೆ. ಕೋವಿಡ್-19 ರಕ್ತ ಹೆಪ್ಪುಗಟ್ಟುವಿಕೆ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಒಂದು ಸ್ಥಾಪಿತ ಕಾರಣವಾಗಿದೆ ಮತ್ತು ಲಸಿಕೆಯನ್ನು ಪಡೆದವರು ಈ ಬಗ್ಗೆ ಕಡಿಮೆ ಅಪಾಯವನ್ನು ಹೊಂದಿರುತ್ತಾರೆ ಎಂದು ಡಾ ಜಯದೇವನ್ ಹೇಳಿದ್ದಾರೆ.

COVISHIELDಗಿಂತ COVAXIN ಉತ್ತಮವಾಗಿದೆಯೇ?

ಪ್ರತಿಕೂಲ ಪರಿಣಾಮಗಳ ಅಪಾಯದ ಆಧಾರದ ಮೇಲೆ ಒಂದು ಕೋವಿಡ್ ಲಸಿಕೆಯನ್ನು ಇನ್ನೊಂದಕ್ಕಿಂತ ಉತ್ತಮ ಎಂದು ಆಯ್ಕೆ ಮಾಡಲು ಸಾಕಷ್ಟು ದಾಖಲೆಗಳು ಇಲ್ಲ. ಎಲ್ಲಾ ಲಸಿಕೆಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳು ಅಡ್ಡ ಪರಿಣಾಮಗಳನ್ನು ಹೊಂದಿವೆ. ಭಾರತದಲ್ಲಿ ಈ ಲಸಿಕೆಗಳನ್ನು ತೆಗೆದುಕೊಂಡ ಕೋಟಿಗಟ್ಟಲೆ ಜನರು ಈಗ ಜೀವಂತವಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ ಎಂದು ಡಾ.ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...