ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶುಕ್ರವಾರ ಹೇಳಿದ್ದಾರೆ.
“ಖರತ್ ಪ್ರಕರಣದಲ್ಲಿ, ಇನ್ನೂ ಅನೇಕ ಸಂತ್ರಸ್ತರು ಮುಂದೆ ಬರುತ್ತಿದ್ದಾರೆ. ಇನ್ನೂ ಕೆಲವು ಎಫ್ಐಆರ್ಗಳನ್ನು ದಾಖಲಿಸಲಾಗುವುದು” ಎಂದು ಫಡ್ನವೀಸ್ ಮುಂಬೈನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸಂತ್ರಸ್ತರಿಗೆ ಅವರ ಗುರುತಿನ ರಕ್ಷಣೆ ಸೇರಿದಂತೆ ಸಂಪೂರ್ಣ ರಕ್ಷಣೆ ನೀಡಲಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಹಿಳೆಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಾರ್ಚ್ 18 ರಂದು ಖರತ್ನನ್ನು ಬಂಧಿಸಲಾಗಿತ್ತು.
ಪ್ರಕರಣದ ತನಿಖೆಯಲ್ಲಿ ಆತ ಮಹಿಳೆಯರನ್ನು ಶೋಷಿಸುವ ಹಲವಾರು ವೀಡಿಯೊಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ (ಎಸ್ಐಟಿ) ಖರತ್ಗೆ ಸಂಬಂಧಿಸಿದ ಕನಿಷ್ಠ ಆರು ಪ್ರಕರಣಗಳ ತನಿಖೆ ನಡೆಸುತ್ತಿದೆ, ಅವುಗಳಲ್ಲಿ ಅತ್ಯಾಚಾರ, ನರಬಲಿ ಮತ್ತು ಮಾಟಮಂತ್ರಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿವೆ.


