Homeಮುಖಪುಟವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ವಿಜ್ಞಾನಕ್ಕಿಂತ ಜ್ಯೋತಿಷ್ಯ ದೊಡ್ಡದು ಎಂದಿದ್ದವರು ಈಗ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದಾರೆ

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ

- Advertisement -
- Advertisement -

“ಲಕ್ಷ ವರ್ಷಗಳ ಹಿಂದೆಯೇ ಪರಮಾಣು ವಿಜ್ಞಾನದ ಬಗ್ಗೆ ಭಾರತಕ್ಕೆ ಗೊತ್ತಿತ್ತು.” ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ. ಹಾಗಾಗಿ ನಾವದನ್ನು ಹೆಚ್ಚು ಪ್ರಚಾರ ಮಾಡಲೇಬೇಕು.

ಈ ಮಾತುಗಳನ್ನು ಕೇಳಿದರೆ ನಿಮಗೆ ಏನನಿಸುತ್ತದೆ? ಯಾರೋ ಜೋಕರ್ ಹೇಳಿದ್ದಾನೆಂದು ನಗಬೇಡಿ. ಇದನ್ನು ಹೇಳಿದವರು ನಮ್ಮ ಮಕ್ಕಳ ಭವಿಷ್ಯವನ್ನು ತೀರ್ಮಾನಿಸುವ, ಭಾರತದ ಶಿಕ್ಷಣದ ನೀತಿಗಳನ್ನು ರೂಪಿಸುವ ನಮ್ಮ ನೂತನ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್.

ಹೌದು ಸಂದೇಹವೇ ಬೇಡ. ಉತ್ತರಖಂಡದ ಮಾಜಿ ಮುಖ್ಯಮಂತ್ರಿ, ಹಾಲಿ ಹರಿದ್ವಾರದಿಂದ ಸಂಸದರಾಗಿ ಆಯ್ಕೆಯಾಗಿ ನೂತನ ಮಾನವ ಸಂಪನ್ಮೂಲ ಸಚಿರಾಗಿ ಆಯ್ಕೆಯಾಗಿರುವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟಿವಿ ವಾಹಿನಿಗೆ ಹೇಳಿದ ಮಾತಿದು. 2014ರ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (ಎಸ್.ಪಿ.ಎ) ಬಿಲ್ ಕುರಿತ ಚರ್ಚೆಯಲ್ಲಿ ಜ್ಯೋತಿಷ್ಯದ ಮುಂದೆ ವಿಜ್ಞಾನ ಏನೇನು ಅಲ್ಲ. ಜ್ಯೋತಿಷ್ಯವು ಅತಿ ದೊಡ್ಡ ವಿಜ್ಞಾನವಾಗಿದೆ. ಅದು ವಿಜ್ಞಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೇಳಿದ್ದರು.

ಅವರು “ನಾವಿಂದು ಪರಮಾಣು ವಿಜ್ಞಾನದ ಕುರಿತು ಮಾತಾಡುತ್ತೇವೆ. ಆದರೆ ಒಂದು ಲಕ್ಷ ವರ್ಷಗಳ ಹಿಂದೆಯೇ ಋಷಿ ಕಾನದ್ ರವರು ಪರಮಾಣು ಪರೀಕ್ಷೆ ನಡೆಸಿದ್ದರು” ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದರು. ಅಷ್ಟೆ ಅಲ್ಲದೇ ಆ ಕಾಲದಲ್ಲಿಯೇ ನಾವು ಕಸಿ ವಿಜ್ಞಾನವನ್ನು ಸಹ ಕಲಿತಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಗಣೇಶನಿಗೆ ವೇದಗಳ ಕಾಲದಲ್ಲಿಯೇ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು ಎಂಬ ಮಾತನ್ನು ಪುನರುಚ್ಚರಿಸಿದ್ದರು.

ನಾವು ನಮ್ಮ ಮಕ್ಕಳು ಹೆಚ್ಚು ಹೆಚ್ಚು ಆಧುನಿಕರಾಗಬೇಕು, ವಿಜ್ಞಾನವನ್ನು ಚೆನ್ನಾಗಿ ಕಲಿತು ಪ್ರಪಂಚದೊಟ್ಟಿಗೆ ಸ್ಪರ್ದಿಸಬೇಕೆಂದು ಬಯಸಿದರೆ, ವಿಜ್ಞಾನದ ಬಗ್ಗೆ ಅಪನಂಬಿಕೆ ಹೊಂದಿರುವ ವೇದ, ಪುರಾಣದ ಬಗ್ಗೆ ಭಕ್ತಿ ತೋರಿಸುವ ರಮೇಶ್ ಪೋಖ್ರಿಯಾಲ್ ರವರು ನಮ್ಮ ಸಚಿವರಾಗಿದ್ದಾರೆ. ಅವರು ಮುಂದೆ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

“ಪ್ರಾಥಮಿಕ, ಪ್ರೌಢಶಾಲೆಯಿಂದ ಹಿಡಿದು ವಿಶ್ವವಿದ್ಯಾಲಯದವರೆಗೂ ವ್ಯವಹರಿಸುವ, ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸುವ ಈ ವ್ಯಕ್ತಿ ಈಗ ನಮ್ಮ ನೂತನ ಎಚ್‍ಆರ್‍ಡಿ ಸಚಿವರಾಗಿದ್ದಾರೆ. ನಿಮಗೆ ಸ್ವಾಗತ. #ನ್ಯೂಇಂಡಿಯಾ” ಎಂದು ಮಾರ್ಮಿಕವಾಗಿ ಪೋಸ್ಟ್ ಹಾಕುವ ಮೂಲಕ ಯುವ ಚಿಂತಕ ಧೃವ್ ರಾಠೀ ಫೇಸ್‍ಬುಕ್ ರಮೇಶ್ ಪೋಖ್ರಿಯಾಲ್‍ರವರ ಮೇಲಿನ ಹೇಳಿಕೆಗಳ ಕುರಿತು ‘ದಿ ಹಿಂದೂ’ ಪತ್ರಿಕೆಯಲ್ಲಿ ಬಂದಿರುವ ಲೇಖನವನ್ನು ಷೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...